ಬ್ರೇಕಿಂಗ್ ನ್ಯೂಸ್
10-04-21 04:21 pm Mysore Correspondent ಕರ್ನಾಟಕ
ಮೈಸೂರು, ಎ.10 : ಸುಮಾರು 11 ವರ್ಷಗಳಿಂದ 11 ಸಾವಿರ ಪುಸ್ತಕಗಳನ್ನು ಸಂಗ್ರಹಿಸಿ ಗ್ರಂಥಾಲಯ ನಿರ್ಮಿಸಿ ಸಾರ್ವಜನಿಕರ ಓದಿನ ದಾಹಕ್ಕೆ ಉಚಿತವಾಗಿ ಸೇವೆ ನೀಡುತ್ತಿದ್ದ ಕನ್ನಡ ಪ್ರೇಮಿ ಸೈಯದ್ ಇಸಾಕ್ ಅವರ ಗ್ರಂಥಾಲಯಕ್ಕೆ ಕಿಡಿಗೇಡಿಗಳು ಬೆಂಕಿಯಿಟ್ಟಿದ್ದು, ಗ್ರಂಥಾಲಯ ಸಂಪೂರ್ಣ ಭಸ್ಮವಾಗಿದೆ.
ಕನ್ನಡ ಪ್ರೇಮಿ ಸೈಯದ್ ಇಸಾಕ್ ಕಳೆದ 11 ವರ್ಷಗಳಿಂದ ಮೈಸೂರಿನ ರಾಜೀವ್ ನಗರದಲ್ಲಿ ಸುಮಾರು 3 ಸಾವಿರ ಕನ್ನಡ ಪುಸ್ತಕಗಳು, 3 ಸಾವಿರ ಭಗವಗೀತೆ ಕೃತಿಗಳು, 3 ಸಾವಿರ ಕುರಾನ್ ಪ್ರತಿಗಳು, ಒಂದು ಸಾವಿರ ಉರ್ದು ಪುಸ್ತಕಗಳು, 1 ಸಾವಿರ ಬೈಬಲ್ ಕನ್ನಡ ಪ್ರತಿಗಳು ಹಾಗೂ ಇತರ 1 ಸಾವಿರ ಕನ್ನಡ ಪುಸ್ತಕಗಳನ್ನು ಇಟ್ಟುಕೊಂಡು ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆ ವರೆಗೆ ಇಲ್ಲಿಗೆ ಬರುವ ಪುಸ್ತಕ ಪ್ರೇಮಿಗಳಿಗೆ ಉಚಿತವಾಗಿ ಗ್ರಂಥಾಲಯ ವ್ಯವಸ್ಥೆ ಒದಗಿಸಿದ್ದರು.
ರಾಜೀವ್ ನಗರದ ಮೂಡ ಪ್ರದೇಶಕ್ಕೆ ಸೇರಿದ್ದ ಈ ಸ್ಥಳದಲ್ಲಿ 2011 ರಲ್ಲಿ ಸೈಯ್ಯದ್ ಇಸಾಕ್ ಚಿಕ್ಕದೊಂದು ಗುಡಿಸಲು ಕಟ್ಟಿಕೊಂಡು ಗ್ರಂಥಾಲಯ ಆರಂಭಿಸಿದ್ದರು. ಬಳಿಕ ಶೀಟ್ ಹಾಕಿ ಮಳಿಗೆಯಾಗಿ ಮಾಡಿಕೊಂಡು 11 ಸಾವಿರ ಪುಸ್ತಕಗಳನ್ನು ಇಡುವುದರ ಜೊತೆಗೆ ನಿತ್ಯ 18 ದಿನ ಪತ್ರಿಕೆಗಳನ್ನು ತರಿಸುತ್ತಿದ್ದರು. ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆ ವರೆಗೆ ಪುಸ್ತಕ ಮತ್ತು ಪತ್ರಿಕೆಗಳನ್ನು ಸಾರ್ವಜನಿಕರಿಗೆ ಓದಲು ಉಚಿತವಾಗಿ ನೀಡುತ್ತಿದ್ದರು.
ಉರ್ದು ಭಾಷೆ ಮಾತನಾಡುವವರೇ ಹೆಚ್ಚಾಗಿರುವ ಈ ಪ್ರದೇಶದಲ್ಲಿ ಕನ್ನಡ ಹಾಗೂ ಜಾತ್ಯಾತೀತ ಮನೋಭಾವನೆ ಮೂಡಿಸುವ ಕೆಲಸವನ್ನು ಮಾಡುತ್ತಾ ಬಂದಿರುವೆ. ಗ್ರಂಥಾಲಯಕ್ಕೆ ಹಲವು ಭಾರೀ ಕಿಡಿಗೇಡಿಗಳು ತೊಂದರೆ ಕೊಟ್ಟಿದ್ದರು. ಶುಕ್ರವಾರ ಮುಂಜಾನೆ ಗ್ರಂಥಾಲಯಕ್ಕೆ ಕಿಡಿಗೇಡಿಗಳು ಬೆಂಕಿಯಿಟ್ಟು 11 ಸಾವಿರ ಪುಸ್ತಕಗಳನ್ನು ಬೆಂಕಿಯಲ್ಲಿ ಸುಟ್ಟು ಹಾಕಿದ್ದಾರೆ. ಅದರಲ್ಲಿ ದಾನಿಗಳು ನೀಡಿದ ಅಮೂಲ್ಯ ಪುಸ್ತಕಗಳು ಸೇರಿವೆ ಎಂದು ಸೈಯದ್ ಇಸಾಕ್ ಭಾವುಕರಾಗಿ ಹೇಳಿಕೊಂಡಿದ್ದಾರೆ.
ಈ ಬಗ್ಗೆ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಡಿಸಿಪಿ ಡಾ.ಪ್ರಕಾಶ್ ಗೌಡ ತಿಳಿಸಿದ್ದಾರೆ.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 11:27 am
Mangalore Correspondent
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm