ಬ್ರೇಕಿಂಗ್ ನ್ಯೂಸ್
10-04-21 04:21 pm Mysore Correspondent ಕರ್ನಾಟಕ
ಮೈಸೂರು, ಎ.10 : ಸುಮಾರು 11 ವರ್ಷಗಳಿಂದ 11 ಸಾವಿರ ಪುಸ್ತಕಗಳನ್ನು ಸಂಗ್ರಹಿಸಿ ಗ್ರಂಥಾಲಯ ನಿರ್ಮಿಸಿ ಸಾರ್ವಜನಿಕರ ಓದಿನ ದಾಹಕ್ಕೆ ಉಚಿತವಾಗಿ ಸೇವೆ ನೀಡುತ್ತಿದ್ದ ಕನ್ನಡ ಪ್ರೇಮಿ ಸೈಯದ್ ಇಸಾಕ್ ಅವರ ಗ್ರಂಥಾಲಯಕ್ಕೆ ಕಿಡಿಗೇಡಿಗಳು ಬೆಂಕಿಯಿಟ್ಟಿದ್ದು, ಗ್ರಂಥಾಲಯ ಸಂಪೂರ್ಣ ಭಸ್ಮವಾಗಿದೆ.
ಕನ್ನಡ ಪ್ರೇಮಿ ಸೈಯದ್ ಇಸಾಕ್ ಕಳೆದ 11 ವರ್ಷಗಳಿಂದ ಮೈಸೂರಿನ ರಾಜೀವ್ ನಗರದಲ್ಲಿ ಸುಮಾರು 3 ಸಾವಿರ ಕನ್ನಡ ಪುಸ್ತಕಗಳು, 3 ಸಾವಿರ ಭಗವಗೀತೆ ಕೃತಿಗಳು, 3 ಸಾವಿರ ಕುರಾನ್ ಪ್ರತಿಗಳು, ಒಂದು ಸಾವಿರ ಉರ್ದು ಪುಸ್ತಕಗಳು, 1 ಸಾವಿರ ಬೈಬಲ್ ಕನ್ನಡ ಪ್ರತಿಗಳು ಹಾಗೂ ಇತರ 1 ಸಾವಿರ ಕನ್ನಡ ಪುಸ್ತಕಗಳನ್ನು ಇಟ್ಟುಕೊಂಡು ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆ ವರೆಗೆ ಇಲ್ಲಿಗೆ ಬರುವ ಪುಸ್ತಕ ಪ್ರೇಮಿಗಳಿಗೆ ಉಚಿತವಾಗಿ ಗ್ರಂಥಾಲಯ ವ್ಯವಸ್ಥೆ ಒದಗಿಸಿದ್ದರು.
ರಾಜೀವ್ ನಗರದ ಮೂಡ ಪ್ರದೇಶಕ್ಕೆ ಸೇರಿದ್ದ ಈ ಸ್ಥಳದಲ್ಲಿ 2011 ರಲ್ಲಿ ಸೈಯ್ಯದ್ ಇಸಾಕ್ ಚಿಕ್ಕದೊಂದು ಗುಡಿಸಲು ಕಟ್ಟಿಕೊಂಡು ಗ್ರಂಥಾಲಯ ಆರಂಭಿಸಿದ್ದರು. ಬಳಿಕ ಶೀಟ್ ಹಾಕಿ ಮಳಿಗೆಯಾಗಿ ಮಾಡಿಕೊಂಡು 11 ಸಾವಿರ ಪುಸ್ತಕಗಳನ್ನು ಇಡುವುದರ ಜೊತೆಗೆ ನಿತ್ಯ 18 ದಿನ ಪತ್ರಿಕೆಗಳನ್ನು ತರಿಸುತ್ತಿದ್ದರು. ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆ ವರೆಗೆ ಪುಸ್ತಕ ಮತ್ತು ಪತ್ರಿಕೆಗಳನ್ನು ಸಾರ್ವಜನಿಕರಿಗೆ ಓದಲು ಉಚಿತವಾಗಿ ನೀಡುತ್ತಿದ್ದರು.

ಉರ್ದು ಭಾಷೆ ಮಾತನಾಡುವವರೇ ಹೆಚ್ಚಾಗಿರುವ ಈ ಪ್ರದೇಶದಲ್ಲಿ ಕನ್ನಡ ಹಾಗೂ ಜಾತ್ಯಾತೀತ ಮನೋಭಾವನೆ ಮೂಡಿಸುವ ಕೆಲಸವನ್ನು ಮಾಡುತ್ತಾ ಬಂದಿರುವೆ. ಗ್ರಂಥಾಲಯಕ್ಕೆ ಹಲವು ಭಾರೀ ಕಿಡಿಗೇಡಿಗಳು ತೊಂದರೆ ಕೊಟ್ಟಿದ್ದರು. ಶುಕ್ರವಾರ ಮುಂಜಾನೆ ಗ್ರಂಥಾಲಯಕ್ಕೆ ಕಿಡಿಗೇಡಿಗಳು ಬೆಂಕಿಯಿಟ್ಟು 11 ಸಾವಿರ ಪುಸ್ತಕಗಳನ್ನು ಬೆಂಕಿಯಲ್ಲಿ ಸುಟ್ಟು ಹಾಕಿದ್ದಾರೆ. ಅದರಲ್ಲಿ ದಾನಿಗಳು ನೀಡಿದ ಅಮೂಲ್ಯ ಪುಸ್ತಕಗಳು ಸೇರಿವೆ ಎಂದು ಸೈಯದ್ ಇಸಾಕ್ ಭಾವುಕರಾಗಿ ಹೇಳಿಕೊಂಡಿದ್ದಾರೆ.
ಈ ಬಗ್ಗೆ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಡಿಸಿಪಿ ಡಾ.ಪ್ರಕಾಶ್ ಗೌಡ ತಿಳಿಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm