ಬ್ರೇಕಿಂಗ್ ನ್ಯೂಸ್
10-04-21 04:21 pm Mysore Correspondent ಕರ್ನಾಟಕ
ಮೈಸೂರು, ಎ.10 : ಸುಮಾರು 11 ವರ್ಷಗಳಿಂದ 11 ಸಾವಿರ ಪುಸ್ತಕಗಳನ್ನು ಸಂಗ್ರಹಿಸಿ ಗ್ರಂಥಾಲಯ ನಿರ್ಮಿಸಿ ಸಾರ್ವಜನಿಕರ ಓದಿನ ದಾಹಕ್ಕೆ ಉಚಿತವಾಗಿ ಸೇವೆ ನೀಡುತ್ತಿದ್ದ ಕನ್ನಡ ಪ್ರೇಮಿ ಸೈಯದ್ ಇಸಾಕ್ ಅವರ ಗ್ರಂಥಾಲಯಕ್ಕೆ ಕಿಡಿಗೇಡಿಗಳು ಬೆಂಕಿಯಿಟ್ಟಿದ್ದು, ಗ್ರಂಥಾಲಯ ಸಂಪೂರ್ಣ ಭಸ್ಮವಾಗಿದೆ.
ಕನ್ನಡ ಪ್ರೇಮಿ ಸೈಯದ್ ಇಸಾಕ್ ಕಳೆದ 11 ವರ್ಷಗಳಿಂದ ಮೈಸೂರಿನ ರಾಜೀವ್ ನಗರದಲ್ಲಿ ಸುಮಾರು 3 ಸಾವಿರ ಕನ್ನಡ ಪುಸ್ತಕಗಳು, 3 ಸಾವಿರ ಭಗವಗೀತೆ ಕೃತಿಗಳು, 3 ಸಾವಿರ ಕುರಾನ್ ಪ್ರತಿಗಳು, ಒಂದು ಸಾವಿರ ಉರ್ದು ಪುಸ್ತಕಗಳು, 1 ಸಾವಿರ ಬೈಬಲ್ ಕನ್ನಡ ಪ್ರತಿಗಳು ಹಾಗೂ ಇತರ 1 ಸಾವಿರ ಕನ್ನಡ ಪುಸ್ತಕಗಳನ್ನು ಇಟ್ಟುಕೊಂಡು ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆ ವರೆಗೆ ಇಲ್ಲಿಗೆ ಬರುವ ಪುಸ್ತಕ ಪ್ರೇಮಿಗಳಿಗೆ ಉಚಿತವಾಗಿ ಗ್ರಂಥಾಲಯ ವ್ಯವಸ್ಥೆ ಒದಗಿಸಿದ್ದರು.
ರಾಜೀವ್ ನಗರದ ಮೂಡ ಪ್ರದೇಶಕ್ಕೆ ಸೇರಿದ್ದ ಈ ಸ್ಥಳದಲ್ಲಿ 2011 ರಲ್ಲಿ ಸೈಯ್ಯದ್ ಇಸಾಕ್ ಚಿಕ್ಕದೊಂದು ಗುಡಿಸಲು ಕಟ್ಟಿಕೊಂಡು ಗ್ರಂಥಾಲಯ ಆರಂಭಿಸಿದ್ದರು. ಬಳಿಕ ಶೀಟ್ ಹಾಕಿ ಮಳಿಗೆಯಾಗಿ ಮಾಡಿಕೊಂಡು 11 ಸಾವಿರ ಪುಸ್ತಕಗಳನ್ನು ಇಡುವುದರ ಜೊತೆಗೆ ನಿತ್ಯ 18 ದಿನ ಪತ್ರಿಕೆಗಳನ್ನು ತರಿಸುತ್ತಿದ್ದರು. ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆ ವರೆಗೆ ಪುಸ್ತಕ ಮತ್ತು ಪತ್ರಿಕೆಗಳನ್ನು ಸಾರ್ವಜನಿಕರಿಗೆ ಓದಲು ಉಚಿತವಾಗಿ ನೀಡುತ್ತಿದ್ದರು.

ಉರ್ದು ಭಾಷೆ ಮಾತನಾಡುವವರೇ ಹೆಚ್ಚಾಗಿರುವ ಈ ಪ್ರದೇಶದಲ್ಲಿ ಕನ್ನಡ ಹಾಗೂ ಜಾತ್ಯಾತೀತ ಮನೋಭಾವನೆ ಮೂಡಿಸುವ ಕೆಲಸವನ್ನು ಮಾಡುತ್ತಾ ಬಂದಿರುವೆ. ಗ್ರಂಥಾಲಯಕ್ಕೆ ಹಲವು ಭಾರೀ ಕಿಡಿಗೇಡಿಗಳು ತೊಂದರೆ ಕೊಟ್ಟಿದ್ದರು. ಶುಕ್ರವಾರ ಮುಂಜಾನೆ ಗ್ರಂಥಾಲಯಕ್ಕೆ ಕಿಡಿಗೇಡಿಗಳು ಬೆಂಕಿಯಿಟ್ಟು 11 ಸಾವಿರ ಪುಸ್ತಕಗಳನ್ನು ಬೆಂಕಿಯಲ್ಲಿ ಸುಟ್ಟು ಹಾಕಿದ್ದಾರೆ. ಅದರಲ್ಲಿ ದಾನಿಗಳು ನೀಡಿದ ಅಮೂಲ್ಯ ಪುಸ್ತಕಗಳು ಸೇರಿವೆ ಎಂದು ಸೈಯದ್ ಇಸಾಕ್ ಭಾವುಕರಾಗಿ ಹೇಳಿಕೊಂಡಿದ್ದಾರೆ.
ಈ ಬಗ್ಗೆ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಡಿಸಿಪಿ ಡಾ.ಪ್ರಕಾಶ್ ಗೌಡ ತಿಳಿಸಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm