ಬ್ರೇಕಿಂಗ್ ನ್ಯೂಸ್
10-04-21 04:21 pm Mysore Correspondent ಕರ್ನಾಟಕ
ಮೈಸೂರು, ಎ.10 : ಸುಮಾರು 11 ವರ್ಷಗಳಿಂದ 11 ಸಾವಿರ ಪುಸ್ತಕಗಳನ್ನು ಸಂಗ್ರಹಿಸಿ ಗ್ರಂಥಾಲಯ ನಿರ್ಮಿಸಿ ಸಾರ್ವಜನಿಕರ ಓದಿನ ದಾಹಕ್ಕೆ ಉಚಿತವಾಗಿ ಸೇವೆ ನೀಡುತ್ತಿದ್ದ ಕನ್ನಡ ಪ್ರೇಮಿ ಸೈಯದ್ ಇಸಾಕ್ ಅವರ ಗ್ರಂಥಾಲಯಕ್ಕೆ ಕಿಡಿಗೇಡಿಗಳು ಬೆಂಕಿಯಿಟ್ಟಿದ್ದು, ಗ್ರಂಥಾಲಯ ಸಂಪೂರ್ಣ ಭಸ್ಮವಾಗಿದೆ.
ಕನ್ನಡ ಪ್ರೇಮಿ ಸೈಯದ್ ಇಸಾಕ್ ಕಳೆದ 11 ವರ್ಷಗಳಿಂದ ಮೈಸೂರಿನ ರಾಜೀವ್ ನಗರದಲ್ಲಿ ಸುಮಾರು 3 ಸಾವಿರ ಕನ್ನಡ ಪುಸ್ತಕಗಳು, 3 ಸಾವಿರ ಭಗವಗೀತೆ ಕೃತಿಗಳು, 3 ಸಾವಿರ ಕುರಾನ್ ಪ್ರತಿಗಳು, ಒಂದು ಸಾವಿರ ಉರ್ದು ಪುಸ್ತಕಗಳು, 1 ಸಾವಿರ ಬೈಬಲ್ ಕನ್ನಡ ಪ್ರತಿಗಳು ಹಾಗೂ ಇತರ 1 ಸಾವಿರ ಕನ್ನಡ ಪುಸ್ತಕಗಳನ್ನು ಇಟ್ಟುಕೊಂಡು ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆ ವರೆಗೆ ಇಲ್ಲಿಗೆ ಬರುವ ಪುಸ್ತಕ ಪ್ರೇಮಿಗಳಿಗೆ ಉಚಿತವಾಗಿ ಗ್ರಂಥಾಲಯ ವ್ಯವಸ್ಥೆ ಒದಗಿಸಿದ್ದರು.
ರಾಜೀವ್ ನಗರದ ಮೂಡ ಪ್ರದೇಶಕ್ಕೆ ಸೇರಿದ್ದ ಈ ಸ್ಥಳದಲ್ಲಿ 2011 ರಲ್ಲಿ ಸೈಯ್ಯದ್ ಇಸಾಕ್ ಚಿಕ್ಕದೊಂದು ಗುಡಿಸಲು ಕಟ್ಟಿಕೊಂಡು ಗ್ರಂಥಾಲಯ ಆರಂಭಿಸಿದ್ದರು. ಬಳಿಕ ಶೀಟ್ ಹಾಕಿ ಮಳಿಗೆಯಾಗಿ ಮಾಡಿಕೊಂಡು 11 ಸಾವಿರ ಪುಸ್ತಕಗಳನ್ನು ಇಡುವುದರ ಜೊತೆಗೆ ನಿತ್ಯ 18 ದಿನ ಪತ್ರಿಕೆಗಳನ್ನು ತರಿಸುತ್ತಿದ್ದರು. ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆ ವರೆಗೆ ಪುಸ್ತಕ ಮತ್ತು ಪತ್ರಿಕೆಗಳನ್ನು ಸಾರ್ವಜನಿಕರಿಗೆ ಓದಲು ಉಚಿತವಾಗಿ ನೀಡುತ್ತಿದ್ದರು.

ಉರ್ದು ಭಾಷೆ ಮಾತನಾಡುವವರೇ ಹೆಚ್ಚಾಗಿರುವ ಈ ಪ್ರದೇಶದಲ್ಲಿ ಕನ್ನಡ ಹಾಗೂ ಜಾತ್ಯಾತೀತ ಮನೋಭಾವನೆ ಮೂಡಿಸುವ ಕೆಲಸವನ್ನು ಮಾಡುತ್ತಾ ಬಂದಿರುವೆ. ಗ್ರಂಥಾಲಯಕ್ಕೆ ಹಲವು ಭಾರೀ ಕಿಡಿಗೇಡಿಗಳು ತೊಂದರೆ ಕೊಟ್ಟಿದ್ದರು. ಶುಕ್ರವಾರ ಮುಂಜಾನೆ ಗ್ರಂಥಾಲಯಕ್ಕೆ ಕಿಡಿಗೇಡಿಗಳು ಬೆಂಕಿಯಿಟ್ಟು 11 ಸಾವಿರ ಪುಸ್ತಕಗಳನ್ನು ಬೆಂಕಿಯಲ್ಲಿ ಸುಟ್ಟು ಹಾಕಿದ್ದಾರೆ. ಅದರಲ್ಲಿ ದಾನಿಗಳು ನೀಡಿದ ಅಮೂಲ್ಯ ಪುಸ್ತಕಗಳು ಸೇರಿವೆ ಎಂದು ಸೈಯದ್ ಇಸಾಕ್ ಭಾವುಕರಾಗಿ ಹೇಳಿಕೊಂಡಿದ್ದಾರೆ.
ಈ ಬಗ್ಗೆ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಡಿಸಿಪಿ ಡಾ.ಪ್ರಕಾಶ್ ಗೌಡ ತಿಳಿಸಿದ್ದಾರೆ.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm