ಬ್ರೇಕಿಂಗ್ ನ್ಯೂಸ್
10-04-21 05:52 pm Headline Karnataka News Network ಕರ್ನಾಟಕ
ಮಡಿಕೇರಿ,ಎ.10 : ಕೊಡಗು ಜಿಲ್ಲೆಯ ರೈತರಿಗೆ ಆನೆಗಳಿಂದಾಗುವ ಸಮಸ್ಯೆಗಳು ಒಂದೆರಡಲ್ಲ. ಬೆಳೆ ಇನ್ನೇನು ರೈತನ ಕೈಗೆ ಸಿಗುವ ಹೊತ್ತಿಗೆ ಆನೆಗಳು ಬೆಳೆಗಳ ಮೇಲೆ ದಾಳಿ ನಡೆಸುತ್ತವೆ. ಜಿಲ್ಲೆಯ ಬಹುತೇಕ ರೈತರು ಆನೆಗಳ ಬಗ್ಗೆ ತೀರಾ ತಲೆಕೆಡಿಸಿಕೊಂಡಿದ್ದಾರೆ. ಕೇವಲ ಬೆಳೆ ಮಾತ್ರವಲ್ಲ. ಈಗಾಗಲೇ ಜಿಲ್ಲೆಯ ಹಲವರ ಮೇಲೆ ಆನೆಗಳು ದಾಳಿ ಮಾಡಿ ಜೀವ ತೆಗೆದಿವೆ. ಹೀಗೆ ರೈತರ ಜಮೀನುಗಳಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿದ್ದ ಆನೆಯನ್ನು ಇದೀಗ ಸೆರೆ ಹಿಡಿಯಲಾಗಿದೆ.
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪಲು ಸಮೀಪದ ಕಳತ್ಮಾಡು ಕಾಫಿ ಎಸ್ಟೇಟ್ನಲ್ಲಿ 30 ವರ್ಷದ ಗಂಡಾನೆಯನ್ನು ಸೆರೆ ಹಿಡಿಯಲಾಗಿದೆ. ಮತ್ತಿಗೋಡು ಆನೆ ಶಿಬಿರದ ಸಾಕಾನೆ ಬಳಸಿ ಸೆರೆ ಕಾರ್ಯಚರಣೆಯನ್ನು ನಡೆಸಿದ 50ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿ ಸೆರೆ ಸಿಕ್ಕ ಕಾಡಾನೆಯನ್ನು ಬಂಡೀಪುರ ಅಭಯಾರಣ್ಯಕ್ಕೆ ಸ್ಥಳಾಂತರ ಮಾಡಿದ್ದಾರೆ.
ಈ ಹಿಂದೆ ಅಂದರೆ ಏಪ್ರಿಲ್ 6 ರಂದು ಕಾಡಾನೆ ದಾಳಿಯಿಂದ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಬಿಬಿಟಿಸಿ ಎಸ್ಟೇಟ್ ಬಳಿ ನಡೆದಿತ್ತು. ರಾತ್ರಿ ಬಹಿರ್ದೆಸೆಗೆ ತೆರಳಿದ್ದಾಗ ಕಾರ್ಮಿಕ ಮಹಿಳೆ ಮೇಲೆ ಆನೆ ದಾಳಿ ನಡೆಸಿತ್ತು. ತೀವ್ರ ಗಾಯಗೊಂಡಿದ್ದ 80 ವರ್ಷದ ಲಕ್ಷ್ಮೀ ಎಂಬ ವೃದ್ಧೆಯನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಪ್ರಕರಣ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.
The elephant which has destroyed farming property has been rescued by the forest officials in Madikeri.
09-08-25 10:12 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
09-08-25 10:53 pm
Mangalore Correspondent
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
ಧರ್ಮಸ್ಥಳ ಕ್ಷೇತ್ರದ ಘನತೆ ಕುಗ್ಗಿಸಲೆತ್ನಿಸುತ್ತಿರುವ...
09-08-25 08:10 pm
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm