ಬ್ರೇಕಿಂಗ್ ನ್ಯೂಸ್
10-04-21 05:52 pm Headline Karnataka News Network ಕರ್ನಾಟಕ
ಮಡಿಕೇರಿ,ಎ.10 : ಕೊಡಗು ಜಿಲ್ಲೆಯ ರೈತರಿಗೆ ಆನೆಗಳಿಂದಾಗುವ ಸಮಸ್ಯೆಗಳು ಒಂದೆರಡಲ್ಲ. ಬೆಳೆ ಇನ್ನೇನು ರೈತನ ಕೈಗೆ ಸಿಗುವ ಹೊತ್ತಿಗೆ ಆನೆಗಳು ಬೆಳೆಗಳ ಮೇಲೆ ದಾಳಿ ನಡೆಸುತ್ತವೆ. ಜಿಲ್ಲೆಯ ಬಹುತೇಕ ರೈತರು ಆನೆಗಳ ಬಗ್ಗೆ ತೀರಾ ತಲೆಕೆಡಿಸಿಕೊಂಡಿದ್ದಾರೆ. ಕೇವಲ ಬೆಳೆ ಮಾತ್ರವಲ್ಲ. ಈಗಾಗಲೇ ಜಿಲ್ಲೆಯ ಹಲವರ ಮೇಲೆ ಆನೆಗಳು ದಾಳಿ ಮಾಡಿ ಜೀವ ತೆಗೆದಿವೆ. ಹೀಗೆ ರೈತರ ಜಮೀನುಗಳಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿದ್ದ ಆನೆಯನ್ನು ಇದೀಗ ಸೆರೆ ಹಿಡಿಯಲಾಗಿದೆ.
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪಲು ಸಮೀಪದ ಕಳತ್ಮಾಡು ಕಾಫಿ ಎಸ್ಟೇಟ್ನಲ್ಲಿ 30 ವರ್ಷದ ಗಂಡಾನೆಯನ್ನು ಸೆರೆ ಹಿಡಿಯಲಾಗಿದೆ. ಮತ್ತಿಗೋಡು ಆನೆ ಶಿಬಿರದ ಸಾಕಾನೆ ಬಳಸಿ ಸೆರೆ ಕಾರ್ಯಚರಣೆಯನ್ನು ನಡೆಸಿದ 50ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿ ಸೆರೆ ಸಿಕ್ಕ ಕಾಡಾನೆಯನ್ನು ಬಂಡೀಪುರ ಅಭಯಾರಣ್ಯಕ್ಕೆ ಸ್ಥಳಾಂತರ ಮಾಡಿದ್ದಾರೆ.

ಈ ಹಿಂದೆ ಅಂದರೆ ಏಪ್ರಿಲ್ 6 ರಂದು ಕಾಡಾನೆ ದಾಳಿಯಿಂದ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಬಿಬಿಟಿಸಿ ಎಸ್ಟೇಟ್ ಬಳಿ ನಡೆದಿತ್ತು. ರಾತ್ರಿ ಬಹಿರ್ದೆಸೆಗೆ ತೆರಳಿದ್ದಾಗ ಕಾರ್ಮಿಕ ಮಹಿಳೆ ಮೇಲೆ ಆನೆ ದಾಳಿ ನಡೆಸಿತ್ತು. ತೀವ್ರ ಗಾಯಗೊಂಡಿದ್ದ 80 ವರ್ಷದ ಲಕ್ಷ್ಮೀ ಎಂಬ ವೃದ್ಧೆಯನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಪ್ರಕರಣ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.
The elephant which has destroyed farming property has been rescued by the forest officials in Madikeri.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm