ಬ್ರೇಕಿಂಗ್ ನ್ಯೂಸ್
11-04-21 07:24 pm Headline Karnataka News Network ಕರ್ನಾಟಕ
ಉಡುಪಿ, ಎ 11: ಜಿಲ್ಲಾಧಿಕಾರಿ ಜಿ.ಜಗದೀಶ್ ಮಲಾಲಗದ್ದೆ ಹೆಸರಲ್ಲಿ ನಕಲಿ ಫೇಸ್ ಬುಕ್ ಅಕೌಂಟ್ ಮಾಡಿ ಹಣ ಬೇಡಿಕೆ ಇಟ್ಟಿರುವ ಆರೋಪ ಕೇಳಿ ಬಂದಿದೆ.
ಜಿಲ್ಲಾಧಿಕಾರಿ ಅವರದೇ ನಕಲಿ ಅಕೌಂಟ್ ಮಾಡಿ ಫೋನ್ ಪೇ ಮೂಲಕ ಹಣ ಪಾವತಿಸಿ ಎಂಬ ಬೇಡಿಕೆ ಇಟ್ಟಿರುವ ಮಾಹಿತಿ ತಿಳಿದುಬಂದಿದೆ.
ಆರೋಪಿಗಳು ಸಂಬಂಧಿಕರ ಅಕೌಂಟಿಗೆ ಹಣ ವರ್ಗಾಯಿಸುವಂತೆ ಮೆಸೇಜ್ ಮಾಡಿದ್ದಾರೆ. ಅಧಿಕಾರಿಗಳನ್ನೇ ಟಾರ್ಗೆಟ್ ಮಾಡಿ ಹಣ ವಸೂಲಿ ಮಾಡಲು ಮುಂದಾಗಿದ್ದಾರೆ. ಇತ್ತೀಚೆಗೆ ಕೆಲ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲೂ ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು. ದೂರು ನೀಡಿದ್ದೇನೆ ಯಾರೂ ಹಣ ಕೊಡಬೇಡಿ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಫೇಸ್ ಬುಕ್ ಮೂಲಕ ವಿನಂತಿಸಿಕೊಂಡಿದ್ದಾರೆ.

ಈ ಮೊದಲು ಸಚಿವ ಸುರೇಶ್ ಕುಮಾರ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದಿದ್ದರು:
ಸಾರ್ವಜನಿಕರ ಹೆಸರಲ್ಲಿ ಫೇಸ್ಬುಕ್ ನಕಲಿ ಖಾತೆಗಳನ್ನು ತೆರೆದಿರುವುದು ಕೇಳಿದ್ದೇವೆ. ಅದಾದಮೇಲೆ ಹಿರಿಯ ಪೊಲೀಸ್ ಅಧಿಕಾರಿಗಳಿಗೇ ಚಳ್ಳೆಹಣ್ಣು ತಿನ್ನಿಸುವಂತೆ ಕೆಲ ಅಧಿಕಾರಿಗಳ ಹೆಸರಿನಲ್ಲಿಯೂ ಫೇಸ್ಬುಕ್ ನಕಲಿ ಖಾತೆಗಳನ್ನು ತೆರೆದು ಒಂದಷ್ಟು ದುಡ್ಡು ಮಾಡಿಕೊಂಡಿದ್ದಾರೆ ಖದೀಮರು! ಸಚಿವರ ಹೆಸರಲ್ಲೂ ಫೇಸ್ಬುಕ್ ನಕಲಿ ಖಾತೆಗಳು ತೆರೆಯುವ ಆಟ ಶುರುವಾಗಿತ್ತು. ಯಾವುದೇ ಆತಂಕ, ಭಯವಿಲ್ಲದೇ ಈ ರೀತಿಯ ಕೆಲಸಗಳು ನಡೆಯುತ್ತಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆಯನ್ನು ತೆರೆದಿದ್ದರು. ನಕಲಿ ಖಾತೆಗಳನ್ನು ತೆರೆದು ಸಾಮಾನ್ಯವಾಗಿ ವಂಚಕರು ದುಡ್ಡನ್ನು ಬೇಡಿಕೆ ಇಡುತ್ತಾರೆ. ಅದರಂತೆ ಸಚಿವ ಸುರೇಶ್ ಕುಮಾರ್ ಹೆಸರಲ್ಲಿ ನಕಲಿ ಖಾತೆ ತೆರೆದ ಖಾತೆದಾರರು ಇದೇ ರೀತಿಯ ಬೇಡಿಕೆಯನ್ನು ಇಟ್ಟಿರುವುದು ಈ ಹಿಂದೆ ತಿಳಿದುಬಂದಿತ್ತು.
A fake Facebook account has been created in the name of Udipi DC Jagadish demanding money through phonepay by using messenger.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm