ಬ್ರೇಕಿಂಗ್ ನ್ಯೂಸ್
12-04-21 10:45 pm Headline Karnataka News Network ಕರ್ನಾಟಕ
ಬೆಂಗಳೂರು, ಎ 12: ಕರ್ನಾಟಕ ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ನಾಲ್ಕರಿಂದ ಐದು ದಿನಗಳಲ್ಲಿ, ಅಂದರೆ ಏಪ್ರಿಲ್ 13ರಿಂದ 15ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮತ್ತು ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಏಪ್ರಿಲ್ 13ರಿಂದ 15ರವರೆಗೆ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ. ಏಪ್ರಿಲ್ 14ರಂದು ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಅತಿ ಹೆಚ್ಚೆಂದರೆ 34 ಡಿಗ್ರಿ ತಾಪಮಾನ ದಾಖಲಾಗಬಹುದು, ಅತಿ ಕಡಿಮೆಯೆಂದರೆ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ತಾಪಮಾನ ಗರಿಷ್ಠ ಮಟ್ಟವನ್ನು ತಲುಪಿದ್ದು, ಜನಸಾಮಾನ್ಯರು ಬೆವರಿ ಬಳಲುತ್ತಿದ್ದಾರೆ. ಸುಡು ಬಿಸಿಲಿಗೆ ಕಂಗಾಲಾಗಿ ಒಂದು ಮಳೆ ಬರಲಿ ಎಂದು ಕಾಯುತ್ತಿದ್ದಾರೆ. ಹೀಗಾಗಿ ಈಗ ಹವಾಮಾನ ಇಲಾಖೆ ನುಡಿದಿರುವ ಭವಿಷ್ಯ ನಿಜವಾದಲ್ಲಿ ಜನರು ಕೊಂಚ ನಿರಾಳರಾಗಲಿದ್ದಾರೆ.

ಮಾರ್ಚ್ ತಿಂಗಳು ಪೂರ್ತಿ ಭಾರತದಲ್ಲಿ ತಾಪಮಾನ ಏರುಗತಿಯಲ್ಲೇ ಸಾಗಿದ್ದು, ಕಳೆದ 121 ವರ್ಷಗಳಲ್ಲಿ ಮಾರ್ಚ್ ತಿಂಗಳಲ್ಲಿ ಮೂರನೇ ಬಾರಿಗೆ ಈ ಪ್ರಮಾಣದ ಉಷ್ಣಾಂಶ ದಾಖಲಾಗಿದೆ ಎಂದು ವರದಿಗಳು ತಿಳಿಸಿವೆ. ಅಂತೆಯೇ ಕಳೆದ 11 ವರ್ಷಗಳಲ್ಲಿ ಇದು ತಿಂಗಳ ಗರಿಷ್ಠ ತಾಪಮಾನವಾಗಿದ್ದು, ಈ ಬಾರಿಯ ಮಾರ್ಚ್ನಲ್ಲಿ ದೇಶದಲ್ಲಿ ಸರಾಸರಿ 32.65 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಹೀಗೆಯೇ ಏಪ್ರಿಲ್ನಲ್ಲಿಯೂ ತಾಪಮಾನ ಏರುತ್ತಲೇ ಸಾಗಿತ್ತು. ಅಲ್ಲದೇ ಕೆಲವು ಪ್ರದೇಶಗಳಲ್ಲಿ ಮಳೆ ಸುರಿದಿತ್ತು ಎಂಬುದನ್ನು ಇಲ್ಲಿ ಸ್ಮರಿಸಬಹುದು.
Weather forecast has started that heavy rains will be seen in Karnatakas few district by April 13th to 15th.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm