ಬ್ರೇಕಿಂಗ್ ನ್ಯೂಸ್
12-04-21 10:45 pm Headline Karnataka News Network ಕರ್ನಾಟಕ
ಬೆಂಗಳೂರು, ಎ 12: ಕರ್ನಾಟಕ ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ನಾಲ್ಕರಿಂದ ಐದು ದಿನಗಳಲ್ಲಿ, ಅಂದರೆ ಏಪ್ರಿಲ್ 13ರಿಂದ 15ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮತ್ತು ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಏಪ್ರಿಲ್ 13ರಿಂದ 15ರವರೆಗೆ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ. ಏಪ್ರಿಲ್ 14ರಂದು ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಅತಿ ಹೆಚ್ಚೆಂದರೆ 34 ಡಿಗ್ರಿ ತಾಪಮಾನ ದಾಖಲಾಗಬಹುದು, ಅತಿ ಕಡಿಮೆಯೆಂದರೆ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ತಾಪಮಾನ ಗರಿಷ್ಠ ಮಟ್ಟವನ್ನು ತಲುಪಿದ್ದು, ಜನಸಾಮಾನ್ಯರು ಬೆವರಿ ಬಳಲುತ್ತಿದ್ದಾರೆ. ಸುಡು ಬಿಸಿಲಿಗೆ ಕಂಗಾಲಾಗಿ ಒಂದು ಮಳೆ ಬರಲಿ ಎಂದು ಕಾಯುತ್ತಿದ್ದಾರೆ. ಹೀಗಾಗಿ ಈಗ ಹವಾಮಾನ ಇಲಾಖೆ ನುಡಿದಿರುವ ಭವಿಷ್ಯ ನಿಜವಾದಲ್ಲಿ ಜನರು ಕೊಂಚ ನಿರಾಳರಾಗಲಿದ್ದಾರೆ.

ಮಾರ್ಚ್ ತಿಂಗಳು ಪೂರ್ತಿ ಭಾರತದಲ್ಲಿ ತಾಪಮಾನ ಏರುಗತಿಯಲ್ಲೇ ಸಾಗಿದ್ದು, ಕಳೆದ 121 ವರ್ಷಗಳಲ್ಲಿ ಮಾರ್ಚ್ ತಿಂಗಳಲ್ಲಿ ಮೂರನೇ ಬಾರಿಗೆ ಈ ಪ್ರಮಾಣದ ಉಷ್ಣಾಂಶ ದಾಖಲಾಗಿದೆ ಎಂದು ವರದಿಗಳು ತಿಳಿಸಿವೆ. ಅಂತೆಯೇ ಕಳೆದ 11 ವರ್ಷಗಳಲ್ಲಿ ಇದು ತಿಂಗಳ ಗರಿಷ್ಠ ತಾಪಮಾನವಾಗಿದ್ದು, ಈ ಬಾರಿಯ ಮಾರ್ಚ್ನಲ್ಲಿ ದೇಶದಲ್ಲಿ ಸರಾಸರಿ 32.65 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಹೀಗೆಯೇ ಏಪ್ರಿಲ್ನಲ್ಲಿಯೂ ತಾಪಮಾನ ಏರುತ್ತಲೇ ಸಾಗಿತ್ತು. ಅಲ್ಲದೇ ಕೆಲವು ಪ್ರದೇಶಗಳಲ್ಲಿ ಮಳೆ ಸುರಿದಿತ್ತು ಎಂಬುದನ್ನು ಇಲ್ಲಿ ಸ್ಮರಿಸಬಹುದು.
Weather forecast has started that heavy rains will be seen in Karnatakas few district by April 13th to 15th.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm