ಬ್ರೇಕಿಂಗ್ ನ್ಯೂಸ್
            
                        14-04-21 02:26 pm Headline Karnataka News Network ಕರ್ನಾಟಕ
            ಶಿರಸಿ, ಏ. 14: ಕೊರೊನಾ ನಿಯಂತ್ರಣ ಮತ್ತು ಲಸಿಕೆ ಪಡೆಯುವಂತೆ ಜನರಲ್ಲಿ ಜಾಗೃತಿ ಮೂಡಿಸಲು ಶಿರಸಿಯ 17 ವಿದ್ಯಾರ್ಥಿಗಳು ಬುಧವಾರ ಬನವಾಸಿಯಿಂದ ಶಿರಸಿವರೆಗೆ ಸ್ಕೇಟಿಂಗ್ ಮಾಡಿದರು.
ಬನವಾಸಿಯ ಕದಂಬ ವೃತ್ತದಿಂದ ಸ್ಕೇಟಿಂಗ್ ಆರಂಭಿಸಿದ ವಿದ್ಯಾರ್ಥಿಗಳು ಮುಖ್ಯ ರಸ್ತೆಯಲ್ಲಿ ಸಾಗಿದರು. ಗುಡ್ನಾಪುರ, ಉಂಚಳ್ಳಿ, ಅರೆಕೊಪ್ಪ ಸೇರಿದಂತೆ ಹಲವು ಗ್ರಾಮಗಳಲ್ಲಿ ಜನರಿಗೆ ಕೊರೊನಾ ಲಸಿಕೆ ಕುರಿತು ಅರಿವು ಮೂಡಿಸುವ ಕರಪತ್ರ ಹಂಚಿದರು.
ರಸ್ತೆಯ ಒಂದು ಬದಿಯಲ್ಲಿ ಶಿಸ್ತುಬದ್ಧವಾಗಿ ವಿದ್ಯಾರ್ಥಿಗಳು ಸ್ಕೇಟಿಂಗ್ ಮಾಡುತ್ತಿದ್ದರೆ, ಅವರ ಪಕ್ಕದಲ್ಲಿ ಪೊಲೀಸರು, ಪಾಲಕರು ಸುರಕ್ಷತೆ ಸಲುವಾಗಿ ಸಾಲಾಗಿ ವಾಹನ ಚಲಾಯಿಸುತ್ತ ಸಾಗಿದರು.

ಎರಡೂವರೆ ಗಂಟೆ ಬಳಿಕ ಶಿರಸಿ ನಗರಕ್ಕೆ ತಲುಪಿದ ವಿದ್ಯಾರ್ಥಿಗಳು ಇಲ್ಲಿನ ಹಳೆ ಬಸ್ ನಿಲ್ದಾಣ ವೃತ್ತದಲ್ಲಿ ಸೇರಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದರು.
'ಏ.11 ರಿಂದ 14ರವರೆಗೆ ದೇಶವ್ಯಾಪಿ ಕೊರೊನಾ ಲಸಿಕೋತ್ಸವಕ್ಕೆ ಪ್ರಧಾನಿ ನೀಡಿದ ಕರೆಯಂತೆ ವಿಶಿಷ್ಟ ರೀತಿ ಜಾಗೃತಿ ಮೂಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು' ಎಂದು ಕಾರ್ಯಕ್ರಮ ಆಯೋಜಕ ಅದ್ವೈತ ಸ್ಕೇಟಿಂಗ್ ಆ್ಯಂಡ್ ಸ್ಪೋರ್ಟ್ಸ್ ಕ್ಲಬ್ ನ ಕಿರಣಕುಮಾರ್ ತಿಳಿಸಿದರು.
'ಮೊದಲ ಬಾರಿಗೆ ಇಷ್ಟು ದೂರ ಸ್ಕೇಟಿಂಗ್ ಮಾಡುತ್ತ ಸಂಚರಿಸಿದ್ದು ಅವಿಸ್ಮರಣೀಯ ಅನುಭವ. ನಾವು ಮಾಡಿದ ಜಾಗೃತಿ ಜನರನ್ನು ತಲುಪಿದರೆ ಸಾರ್ಥಕ ಎನಿಸುತ್ತದೆ' ಎಂದು ವಿದ್ಯಾರ್ಥಿನಿ ಅನಘ ಪ್ರತಿಕ್ರಿಯಿಸಿದರು.
ಸ್ಕೇಟಿಂಗ್ ಮೂಲಕ ನಡೆಸಿದ ಜಾಗೃತಿ ಅಭಿಯಾನಕ್ಕೆ ಬನವಾಸಿಯಲ್ಲಿ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಶ್ರೀಲತಾ ಕಾಳೇರಮನೆ ಚಾಲನೆ ನೀಡಿದ್ದರು. ಸಿಪಿಐ ಬಿ.ಯು.ಪ್ರದೀಪ ನೇತೃತ್ವದಲ್ಲಿ ಸುರಕ್ಷತೆ ವಹಿಸಲಾಗಿತ್ತು.
            
            
            Students in Sirsi go on Skating for 23 Kms to bring covid 19 vaccine awareness among people. The students were thrilled to travek so far.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm