ಬ್ರೇಕಿಂಗ್ ನ್ಯೂಸ್
14-04-21 02:26 pm Headline Karnataka News Network ಕರ್ನಾಟಕ
ಶಿರಸಿ, ಏ. 14: ಕೊರೊನಾ ನಿಯಂತ್ರಣ ಮತ್ತು ಲಸಿಕೆ ಪಡೆಯುವಂತೆ ಜನರಲ್ಲಿ ಜಾಗೃತಿ ಮೂಡಿಸಲು ಶಿರಸಿಯ 17 ವಿದ್ಯಾರ್ಥಿಗಳು ಬುಧವಾರ ಬನವಾಸಿಯಿಂದ ಶಿರಸಿವರೆಗೆ ಸ್ಕೇಟಿಂಗ್ ಮಾಡಿದರು.
ಬನವಾಸಿಯ ಕದಂಬ ವೃತ್ತದಿಂದ ಸ್ಕೇಟಿಂಗ್ ಆರಂಭಿಸಿದ ವಿದ್ಯಾರ್ಥಿಗಳು ಮುಖ್ಯ ರಸ್ತೆಯಲ್ಲಿ ಸಾಗಿದರು. ಗುಡ್ನಾಪುರ, ಉಂಚಳ್ಳಿ, ಅರೆಕೊಪ್ಪ ಸೇರಿದಂತೆ ಹಲವು ಗ್ರಾಮಗಳಲ್ಲಿ ಜನರಿಗೆ ಕೊರೊನಾ ಲಸಿಕೆ ಕುರಿತು ಅರಿವು ಮೂಡಿಸುವ ಕರಪತ್ರ ಹಂಚಿದರು.
ರಸ್ತೆಯ ಒಂದು ಬದಿಯಲ್ಲಿ ಶಿಸ್ತುಬದ್ಧವಾಗಿ ವಿದ್ಯಾರ್ಥಿಗಳು ಸ್ಕೇಟಿಂಗ್ ಮಾಡುತ್ತಿದ್ದರೆ, ಅವರ ಪಕ್ಕದಲ್ಲಿ ಪೊಲೀಸರು, ಪಾಲಕರು ಸುರಕ್ಷತೆ ಸಲುವಾಗಿ ಸಾಲಾಗಿ ವಾಹನ ಚಲಾಯಿಸುತ್ತ ಸಾಗಿದರು.

ಎರಡೂವರೆ ಗಂಟೆ ಬಳಿಕ ಶಿರಸಿ ನಗರಕ್ಕೆ ತಲುಪಿದ ವಿದ್ಯಾರ್ಥಿಗಳು ಇಲ್ಲಿನ ಹಳೆ ಬಸ್ ನಿಲ್ದಾಣ ವೃತ್ತದಲ್ಲಿ ಸೇರಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದರು.
'ಏ.11 ರಿಂದ 14ರವರೆಗೆ ದೇಶವ್ಯಾಪಿ ಕೊರೊನಾ ಲಸಿಕೋತ್ಸವಕ್ಕೆ ಪ್ರಧಾನಿ ನೀಡಿದ ಕರೆಯಂತೆ ವಿಶಿಷ್ಟ ರೀತಿ ಜಾಗೃತಿ ಮೂಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು' ಎಂದು ಕಾರ್ಯಕ್ರಮ ಆಯೋಜಕ ಅದ್ವೈತ ಸ್ಕೇಟಿಂಗ್ ಆ್ಯಂಡ್ ಸ್ಪೋರ್ಟ್ಸ್ ಕ್ಲಬ್ ನ ಕಿರಣಕುಮಾರ್ ತಿಳಿಸಿದರು.
'ಮೊದಲ ಬಾರಿಗೆ ಇಷ್ಟು ದೂರ ಸ್ಕೇಟಿಂಗ್ ಮಾಡುತ್ತ ಸಂಚರಿಸಿದ್ದು ಅವಿಸ್ಮರಣೀಯ ಅನುಭವ. ನಾವು ಮಾಡಿದ ಜಾಗೃತಿ ಜನರನ್ನು ತಲುಪಿದರೆ ಸಾರ್ಥಕ ಎನಿಸುತ್ತದೆ' ಎಂದು ವಿದ್ಯಾರ್ಥಿನಿ ಅನಘ ಪ್ರತಿಕ್ರಿಯಿಸಿದರು.
ಸ್ಕೇಟಿಂಗ್ ಮೂಲಕ ನಡೆಸಿದ ಜಾಗೃತಿ ಅಭಿಯಾನಕ್ಕೆ ಬನವಾಸಿಯಲ್ಲಿ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಶ್ರೀಲತಾ ಕಾಳೇರಮನೆ ಚಾಲನೆ ನೀಡಿದ್ದರು. ಸಿಪಿಐ ಬಿ.ಯು.ಪ್ರದೀಪ ನೇತೃತ್ವದಲ್ಲಿ ಸುರಕ್ಷತೆ ವಹಿಸಲಾಗಿತ್ತು.
Students in Sirsi go on Skating for 23 Kms to bring covid 19 vaccine awareness among people. The students were thrilled to travek so far.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm