ಬ್ರೇಕಿಂಗ್ ನ್ಯೂಸ್
15-04-21 11:48 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಎ.15: ಸಿದ್ದರಾಮಯ್ಯ, ಯಡಿಯೂರಪ್ಪ, ನರೇಂದ್ರ ಮೋದಿಯವರನ್ನು ನಾಯಕರೆಂದು ಒಪ್ಪಿಕೊಳ್ಳಬಹುದು. ಆದರೆ, ರಾಹುಲ್ ಗಾಂಧಿ, ಪ್ರಿಯಾಂಕ ಅಥವಾ ಸೋನಿಯಾ ಗಾಂಧಿಯನ್ನು ಲೀಡರ್ ಎಂದು ಹೇಳುವುದಕ್ಕೆ ಸಾಧ್ಯವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.
ಮಾಧ್ಯಮಕ್ಕೆ ಮಾತನಾಡಿದ ಅವರು, ಕಾಂಗ್ರೆಸ್ಸಿನವರು ಕೇರಳದಲ್ಲಿ ಕಮ್ಯುನಿಸ್ಟರನ್ನು ವಿರೋಧಿಸಿ, ತಮಿಳುನಾಡು, ಪ. ಬಂಗಾಳದಲ್ಲಿ ಅವರ ಜೊತೆಯೇ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ. ಕಾಂಗ್ರೆಸ್ನದ್ದು ನಿರ್ದಿಷ್ಟ ಸಿದ್ಧಾಂತವಾಗಲೀ, ಬದ್ಧತೆಯಾಗಲೀ ಇಲ್ಲದ ಎಡಬಿಡಂಗಿತನ ಎಂದು ಲೇವಡಿ ಮಾಡಿದರು. ಕಾಂಗ್ರೆಸ್ ನಾಯಕರು ಒಂದು ಕುಟುಂಬದ ನಾಯಕತ್ವವನ್ನ ಒಪ್ಪಿಕೊಳ್ಳಬೇಕೆಂದು ಬಯಸುತ್ತಾರೆ. ಆದರೆ, ಜನ ಒಪ್ಪಲ್ಲ. ಕಾಂಗ್ರೆಸ್ಗೆ ರಾಷ್ಟ್ರ ಮಟ್ಟದಲ್ಲಿ ನಾಯಕತ್ವ ಇಲ್ಲದೆ, ಆ ಪಕ್ಷ ಮುಳುಗುತ್ತಿರುವ ಹಡಗಿನಂತಾಗಿದೆ. ಅಲ್ಲಿರೋದು ಕುಟುಂಬ ನಾಯಕತ್ವ ಮಾತ್ರ ಎಂದು ಸಿ.ಟಿ. ರವಿ ಟೀಕಿಸಿದರು.

ಲಾಕ್ ಡೌನ್ ಮಾಡೋದಾದರೆ ಪ್ರತಿ ಕುಟುಂಬಕ್ಕೆ 10 ಸಾವಿರ ನೀಡಲಿ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯ ಬಗ್ಗೆ ಕಿಡಿಕಾರಿದ ಅವರು, ಮಾಜಿ ಸಿಎಂ ಸರ್ಕಾರದ ಖಜಾನೆಯನ್ನ ಭರ್ತಿ ಮಾಡಿ ಹೋಗಿಲ್ಲ. ಖಾಲಿ ಮಾಡಿ ಹೆಚ್ಚುವರಿ ಸಾಲ ಮಾಡಿ ಹೋಗಿದ್ದಾರೆ. ವಿಜಯನಗರದ ಅರಸರಂತೆ ಚಿನ್ನ- ಬೆಳ್ಳಿಯನ್ನ ರಸ್ತೆಯಲ್ಲಿ ಮಾರುವಂತಹ ಶ್ರೀಮಂತಿಕೆ ತುಂಬಿಸಿ ಹೋಗಿದ್ದರೆ ಈ ರೀತಿ ಹೇಳಬಹುದಿತ್ತು. ಅವರ ಮನೆ ಖಜಾನೆ ತುಂಬಿಸಿಕೊಂಡು ಹೋದರು. ಪಾರ್ಟಿ ಖಜಾನೆ ತುಂಬಿಸಿ, ರಾಜ್ಯದ ಖಜಾನೆ ಖಾಲಿ ಮಾಡಿ ಹೋಗಿದ್ದಾರೆ. ಅವರು ಇದ್ದಾಗ ಏನೇನು ಕೊಟ್ಟರು ಎನ್ನುವುದರ ಪಟ್ಟಿ ನಮ್ಮ ಬಳಿ ಇದೆ ಎಂದು ಸಿದ್ದರಾಮಯ್ಯ ಅವರನ್ನು ಕುಟುಕಿದರು.

ಲೋಕಸಭೆ ಚುನಾವಣೆ ವೇಳೆ ರಾಹುಲ್ ಗಾಂಧಿಯನ್ನು ಕರೆದುಕೊಂಡು ಬಂದು ಕನಕಪುರದಲ್ಲಿ ಪ್ರಚಾರ ಮಾಡಿದರೆ, ಅಲ್ಲಿಯೂ ಗೆಲುತ್ತಿದ್ದೆವು. ನಮ್ಮ ಪೂರ್ವ ತಯಾರಿಯ ಕೊರತೆಯಿಂದ ಆ ಒಂದು ಕ್ಷೇತ್ರ ಕಾಂಗ್ರೆಸ್ನವರು ಗೆದ್ದರು ಅಷ್ಟೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ಸ್ವತಃ ಮಲ್ಲಿಕಾರ್ಜುನ ಖರ್ಗೆಯೇ ಗೆಲ್ಲಲಿಲ್ಲ. ರಾಹುಲ್ ನೇತೃತ್ವದಲ್ಲಿ ಯಾವ ಚುನಾವಣೆ ಗೆದ್ದಿದ್ದಾರೆ ಎಂದು ಎಂದು ಸಿ.ಟಿ ರವಿ ಪ್ರಶ್ನಿಸಿದ್ದಾರೆ.
ರಾಹುಲ್ ನೇತೃತ್ವದ ಚುನಾವಣೆಯಲ್ಲಿ ರಾಜ್ಯದಲ್ಲಿ ಸಿಕ್ಕಿದ್ದು ಒಂದೇ ಕ್ಷೇತ್ರ. ಬಲವಾದ ಅಭ್ಯರ್ಥಿ ಹಾಕಿ ಪ್ರಚಾರ ನಡೆಸಿದ್ದರೆ ಅದನ್ನೂ ನಾವು ಬಿಡ್ತಿರ್ಲಿಲ್ಲ ಎಂದು ಕಾಂಗ್ರೆಸ್ ನಾಯಕರ ವೈಫಲ್ಯದ ವಿರುದ್ಧ ಲೇವಡಿ ಮಾಡಿದ್ದಾರೆ.
Chikmagalur we can agree that siddaramaiah is a strong leader but not Rahul mocks ct Ravi.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
07-12-25 12:31 pm
HK News Desk
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
06-12-25 06:12 pm
Mangalore Correspondent
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm