ಬ್ರೇಕಿಂಗ್ ನ್ಯೂಸ್
            
                        15-04-21 11:48 am Headline Karnataka News Network ಕರ್ನಾಟಕ
            ಚಿಕ್ಕಮಗಳೂರು, ಎ.15: ಸಿದ್ದರಾಮಯ್ಯ, ಯಡಿಯೂರಪ್ಪ, ನರೇಂದ್ರ ಮೋದಿಯವರನ್ನು ನಾಯಕರೆಂದು ಒಪ್ಪಿಕೊಳ್ಳಬಹುದು. ಆದರೆ, ರಾಹುಲ್ ಗಾಂಧಿ, ಪ್ರಿಯಾಂಕ ಅಥವಾ ಸೋನಿಯಾ ಗಾಂಧಿಯನ್ನು ಲೀಡರ್ ಎಂದು ಹೇಳುವುದಕ್ಕೆ ಸಾಧ್ಯವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.
ಮಾಧ್ಯಮಕ್ಕೆ ಮಾತನಾಡಿದ ಅವರು, ಕಾಂಗ್ರೆಸ್ಸಿನವರು ಕೇರಳದಲ್ಲಿ ಕಮ್ಯುನಿಸ್ಟರನ್ನು ವಿರೋಧಿಸಿ, ತಮಿಳುನಾಡು, ಪ. ಬಂಗಾಳದಲ್ಲಿ ಅವರ ಜೊತೆಯೇ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ. ಕಾಂಗ್ರೆಸ್ನದ್ದು ನಿರ್ದಿಷ್ಟ ಸಿದ್ಧಾಂತವಾಗಲೀ, ಬದ್ಧತೆಯಾಗಲೀ ಇಲ್ಲದ ಎಡಬಿಡಂಗಿತನ ಎಂದು ಲೇವಡಿ ಮಾಡಿದರು. ಕಾಂಗ್ರೆಸ್ ನಾಯಕರು ಒಂದು ಕುಟುಂಬದ ನಾಯಕತ್ವವನ್ನ ಒಪ್ಪಿಕೊಳ್ಳಬೇಕೆಂದು ಬಯಸುತ್ತಾರೆ. ಆದರೆ, ಜನ ಒಪ್ಪಲ್ಲ. ಕಾಂಗ್ರೆಸ್ಗೆ ರಾಷ್ಟ್ರ ಮಟ್ಟದಲ್ಲಿ ನಾಯಕತ್ವ ಇಲ್ಲದೆ, ಆ ಪಕ್ಷ ಮುಳುಗುತ್ತಿರುವ ಹಡಗಿನಂತಾಗಿದೆ. ಅಲ್ಲಿರೋದು ಕುಟುಂಬ ನಾಯಕತ್ವ ಮಾತ್ರ ಎಂದು ಸಿ.ಟಿ. ರವಿ ಟೀಕಿಸಿದರು.

ಲಾಕ್ ಡೌನ್ ಮಾಡೋದಾದರೆ ಪ್ರತಿ ಕುಟುಂಬಕ್ಕೆ 10 ಸಾವಿರ ನೀಡಲಿ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯ ಬಗ್ಗೆ ಕಿಡಿಕಾರಿದ ಅವರು, ಮಾಜಿ ಸಿಎಂ ಸರ್ಕಾರದ ಖಜಾನೆಯನ್ನ ಭರ್ತಿ ಮಾಡಿ ಹೋಗಿಲ್ಲ. ಖಾಲಿ ಮಾಡಿ ಹೆಚ್ಚುವರಿ ಸಾಲ ಮಾಡಿ ಹೋಗಿದ್ದಾರೆ. ವಿಜಯನಗರದ ಅರಸರಂತೆ ಚಿನ್ನ- ಬೆಳ್ಳಿಯನ್ನ ರಸ್ತೆಯಲ್ಲಿ ಮಾರುವಂತಹ ಶ್ರೀಮಂತಿಕೆ ತುಂಬಿಸಿ ಹೋಗಿದ್ದರೆ ಈ ರೀತಿ ಹೇಳಬಹುದಿತ್ತು. ಅವರ ಮನೆ ಖಜಾನೆ ತುಂಬಿಸಿಕೊಂಡು ಹೋದರು. ಪಾರ್ಟಿ ಖಜಾನೆ ತುಂಬಿಸಿ, ರಾಜ್ಯದ ಖಜಾನೆ ಖಾಲಿ ಮಾಡಿ ಹೋಗಿದ್ದಾರೆ. ಅವರು ಇದ್ದಾಗ ಏನೇನು ಕೊಟ್ಟರು ಎನ್ನುವುದರ ಪಟ್ಟಿ ನಮ್ಮ ಬಳಿ ಇದೆ ಎಂದು ಸಿದ್ದರಾಮಯ್ಯ ಅವರನ್ನು ಕುಟುಕಿದರು.

ಲೋಕಸಭೆ ಚುನಾವಣೆ ವೇಳೆ ರಾಹುಲ್ ಗಾಂಧಿಯನ್ನು ಕರೆದುಕೊಂಡು ಬಂದು ಕನಕಪುರದಲ್ಲಿ ಪ್ರಚಾರ ಮಾಡಿದರೆ, ಅಲ್ಲಿಯೂ ಗೆಲುತ್ತಿದ್ದೆವು. ನಮ್ಮ ಪೂರ್ವ ತಯಾರಿಯ ಕೊರತೆಯಿಂದ ಆ ಒಂದು ಕ್ಷೇತ್ರ ಕಾಂಗ್ರೆಸ್ನವರು ಗೆದ್ದರು ಅಷ್ಟೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ಸ್ವತಃ ಮಲ್ಲಿಕಾರ್ಜುನ ಖರ್ಗೆಯೇ ಗೆಲ್ಲಲಿಲ್ಲ. ರಾಹುಲ್ ನೇತೃತ್ವದಲ್ಲಿ ಯಾವ ಚುನಾವಣೆ ಗೆದ್ದಿದ್ದಾರೆ ಎಂದು ಎಂದು ಸಿ.ಟಿ ರವಿ ಪ್ರಶ್ನಿಸಿದ್ದಾರೆ.
ರಾಹುಲ್ ನೇತೃತ್ವದ ಚುನಾವಣೆಯಲ್ಲಿ ರಾಜ್ಯದಲ್ಲಿ ಸಿಕ್ಕಿದ್ದು ಒಂದೇ ಕ್ಷೇತ್ರ. ಬಲವಾದ ಅಭ್ಯರ್ಥಿ ಹಾಕಿ ಪ್ರಚಾರ ನಡೆಸಿದ್ದರೆ ಅದನ್ನೂ ನಾವು ಬಿಡ್ತಿರ್ಲಿಲ್ಲ ಎಂದು ಕಾಂಗ್ರೆಸ್ ನಾಯಕರ ವೈಫಲ್ಯದ ವಿರುದ್ಧ ಲೇವಡಿ ಮಾಡಿದ್ದಾರೆ.
            
            
            Chikmagalur we can agree that siddaramaiah is a strong leader but not Rahul mocks ct Ravi.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm