ಬ್ರೇಕಿಂಗ್ ನ್ಯೂಸ್
15-04-21 11:48 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಎ.15: ಸಿದ್ದರಾಮಯ್ಯ, ಯಡಿಯೂರಪ್ಪ, ನರೇಂದ್ರ ಮೋದಿಯವರನ್ನು ನಾಯಕರೆಂದು ಒಪ್ಪಿಕೊಳ್ಳಬಹುದು. ಆದರೆ, ರಾಹುಲ್ ಗಾಂಧಿ, ಪ್ರಿಯಾಂಕ ಅಥವಾ ಸೋನಿಯಾ ಗಾಂಧಿಯನ್ನು ಲೀಡರ್ ಎಂದು ಹೇಳುವುದಕ್ಕೆ ಸಾಧ್ಯವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.
ಮಾಧ್ಯಮಕ್ಕೆ ಮಾತನಾಡಿದ ಅವರು, ಕಾಂಗ್ರೆಸ್ಸಿನವರು ಕೇರಳದಲ್ಲಿ ಕಮ್ಯುನಿಸ್ಟರನ್ನು ವಿರೋಧಿಸಿ, ತಮಿಳುನಾಡು, ಪ. ಬಂಗಾಳದಲ್ಲಿ ಅವರ ಜೊತೆಯೇ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ. ಕಾಂಗ್ರೆಸ್ನದ್ದು ನಿರ್ದಿಷ್ಟ ಸಿದ್ಧಾಂತವಾಗಲೀ, ಬದ್ಧತೆಯಾಗಲೀ ಇಲ್ಲದ ಎಡಬಿಡಂಗಿತನ ಎಂದು ಲೇವಡಿ ಮಾಡಿದರು. ಕಾಂಗ್ರೆಸ್ ನಾಯಕರು ಒಂದು ಕುಟುಂಬದ ನಾಯಕತ್ವವನ್ನ ಒಪ್ಪಿಕೊಳ್ಳಬೇಕೆಂದು ಬಯಸುತ್ತಾರೆ. ಆದರೆ, ಜನ ಒಪ್ಪಲ್ಲ. ಕಾಂಗ್ರೆಸ್ಗೆ ರಾಷ್ಟ್ರ ಮಟ್ಟದಲ್ಲಿ ನಾಯಕತ್ವ ಇಲ್ಲದೆ, ಆ ಪಕ್ಷ ಮುಳುಗುತ್ತಿರುವ ಹಡಗಿನಂತಾಗಿದೆ. ಅಲ್ಲಿರೋದು ಕುಟುಂಬ ನಾಯಕತ್ವ ಮಾತ್ರ ಎಂದು ಸಿ.ಟಿ. ರವಿ ಟೀಕಿಸಿದರು.

ಲಾಕ್ ಡೌನ್ ಮಾಡೋದಾದರೆ ಪ್ರತಿ ಕುಟುಂಬಕ್ಕೆ 10 ಸಾವಿರ ನೀಡಲಿ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯ ಬಗ್ಗೆ ಕಿಡಿಕಾರಿದ ಅವರು, ಮಾಜಿ ಸಿಎಂ ಸರ್ಕಾರದ ಖಜಾನೆಯನ್ನ ಭರ್ತಿ ಮಾಡಿ ಹೋಗಿಲ್ಲ. ಖಾಲಿ ಮಾಡಿ ಹೆಚ್ಚುವರಿ ಸಾಲ ಮಾಡಿ ಹೋಗಿದ್ದಾರೆ. ವಿಜಯನಗರದ ಅರಸರಂತೆ ಚಿನ್ನ- ಬೆಳ್ಳಿಯನ್ನ ರಸ್ತೆಯಲ್ಲಿ ಮಾರುವಂತಹ ಶ್ರೀಮಂತಿಕೆ ತುಂಬಿಸಿ ಹೋಗಿದ್ದರೆ ಈ ರೀತಿ ಹೇಳಬಹುದಿತ್ತು. ಅವರ ಮನೆ ಖಜಾನೆ ತುಂಬಿಸಿಕೊಂಡು ಹೋದರು. ಪಾರ್ಟಿ ಖಜಾನೆ ತುಂಬಿಸಿ, ರಾಜ್ಯದ ಖಜಾನೆ ಖಾಲಿ ಮಾಡಿ ಹೋಗಿದ್ದಾರೆ. ಅವರು ಇದ್ದಾಗ ಏನೇನು ಕೊಟ್ಟರು ಎನ್ನುವುದರ ಪಟ್ಟಿ ನಮ್ಮ ಬಳಿ ಇದೆ ಎಂದು ಸಿದ್ದರಾಮಯ್ಯ ಅವರನ್ನು ಕುಟುಕಿದರು.

ಲೋಕಸಭೆ ಚುನಾವಣೆ ವೇಳೆ ರಾಹುಲ್ ಗಾಂಧಿಯನ್ನು ಕರೆದುಕೊಂಡು ಬಂದು ಕನಕಪುರದಲ್ಲಿ ಪ್ರಚಾರ ಮಾಡಿದರೆ, ಅಲ್ಲಿಯೂ ಗೆಲುತ್ತಿದ್ದೆವು. ನಮ್ಮ ಪೂರ್ವ ತಯಾರಿಯ ಕೊರತೆಯಿಂದ ಆ ಒಂದು ಕ್ಷೇತ್ರ ಕಾಂಗ್ರೆಸ್ನವರು ಗೆದ್ದರು ಅಷ್ಟೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ಸ್ವತಃ ಮಲ್ಲಿಕಾರ್ಜುನ ಖರ್ಗೆಯೇ ಗೆಲ್ಲಲಿಲ್ಲ. ರಾಹುಲ್ ನೇತೃತ್ವದಲ್ಲಿ ಯಾವ ಚುನಾವಣೆ ಗೆದ್ದಿದ್ದಾರೆ ಎಂದು ಎಂದು ಸಿ.ಟಿ ರವಿ ಪ್ರಶ್ನಿಸಿದ್ದಾರೆ.
ರಾಹುಲ್ ನೇತೃತ್ವದ ಚುನಾವಣೆಯಲ್ಲಿ ರಾಜ್ಯದಲ್ಲಿ ಸಿಕ್ಕಿದ್ದು ಒಂದೇ ಕ್ಷೇತ್ರ. ಬಲವಾದ ಅಭ್ಯರ್ಥಿ ಹಾಕಿ ಪ್ರಚಾರ ನಡೆಸಿದ್ದರೆ ಅದನ್ನೂ ನಾವು ಬಿಡ್ತಿರ್ಲಿಲ್ಲ ಎಂದು ಕಾಂಗ್ರೆಸ್ ನಾಯಕರ ವೈಫಲ್ಯದ ವಿರುದ್ಧ ಲೇವಡಿ ಮಾಡಿದ್ದಾರೆ.
Chikmagalur we can agree that siddaramaiah is a strong leader but not Rahul mocks ct Ravi.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm