ಬ್ರೇಕಿಂಗ್ ನ್ಯೂಸ್
16-04-21 12:31 pm Headline Karnataka News Network ಕರ್ನಾಟಕ
ಬೆಂಗಳೂರು, ಏಪ್ರಿಲ್ 16: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು, ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಸಾಂಕ್ರಾಮಿಕ ನಿಯಂತ್ರಣ ಕುರಿತಂತೆ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದ್ದಾರೆ.
ಸಭೆ ನಂತರ ಮಾತನಾಡಿದ ಅವರು, "8 ಜಿಲ್ಲೆಗಳಲ್ಲಿ ಏಪ್ರಿಲ್ 20ವರೆಗೂ ರಾತ್ರಿ ಕರ್ಫ್ಯೂ ಮುಂದುವರಿಯುವುದು. ರಾತ್ರಿ 10 ರಿಂದ ಬೆಳಿಗ್ಗೆ 6 ತನಕ ನೈಟ್ ಕರ್ಫ್ಯೂ ಇರುವುದು. ಇತರೆ ಜಿಲ್ಲೆಗಳಿಗೆ ಕರ್ಫ್ಯೂ ವಿಸ್ತರಣೆ ಕುರಿತು ಚರ್ಚೆ ನಡೆಸಿ ಕ್ರಮ ಕೈಗೊಳ್ಳಲಾಗುವುದು" ಎಂದು ತಿಳಿಸಿದರು.

ಕೋವಿಡ್ ಸಾಂಕ್ರಾಮಿಕ ನಿಯಂತ್ರಣ ಕುರಿತಂತೆ ಅಧಿಕಾರಿಗಳ ಸಭೆ ನಡೆಸಲಾಗಿದೆ. ಏಪ್ರಿಲ್ 20ರಂದು ಮತ್ತೊಮ್ಮೆ ಚರ್ಚೆ ನಡೆಸಿ, ಕರ್ಫ್ಯೂ ಬಗ್ಗೆ ನಿರ್ಧಾರ ಮಾಡಲಾಗುವುದು. ಲಾಕ್ ಡೌನ್, ಇನ್ನಷ್ಟು ಕಠಿಣ ಕ್ರಮ ಬಗ್ಗೆ ಪ್ರಧಾನಿ ಮೋದಿ ಹಾಗೂ ಆರೋಗ್ಯ ಸಚಿವಾಲಯದ ಸೂಚನೆಯಂತೆ ಕ್ರಮ ಜರುಗಿಸಲಾಗುವುದು. ಏಪ್ರಿಲ್ 18ರಂದು ಸರ್ವಪಕ್ಷಗಳ ಸಭೆಯಲ್ಲೂ ಚರ್ಚೆ ನಡೆಸಲಾಗುತ್ತದೆ ಎಂದು ಹೇಳಿದರು. ನಮ್ಮ ರಾಜ್ಯದ ಪರಿಸ್ಥಿತಿಯನ್ನು ಬೇರೆ ರಾಜ್ಯದ ಜೊತೆ ಹೋಲಿಸಬೇಡಿ ಎಂದರು.
ಗುರುವಾರ ರಾಜ್ಯದಲ್ಲಿ 14,738 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, 66 ಮಂದಿ ಸಾವನ್ನಪ್ಪಿದ್ದರು. ಬೆಂಗಳೂರು ಒಂದರಿಂದಲೇ 10,497 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಈ ಬೆನ್ನಲ್ಲೇ ತುರ್ತು ಸಭೆ ಕರೆದಿದ್ದರು. ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
Read: ರಾಜ್ಯದಲ್ಲಿ ಕೊರೊನಾ ಆರ್ಭಟ; ತುರ್ತು ಸಭೆ ಕರೆದ ಸಿಎಂ ಬಿ.ಎಸ್.ಯಡಿಯೂರಪ್ಪ
Night curfew in Karnataka to continue till April 20 says CM BS Yediyurappa after covid 19 review meeting with officials.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm