ಬ್ರೇಕಿಂಗ್ ನ್ಯೂಸ್
17-04-21 01:30 pm Headline Karnataka News Network ಕರ್ನಾಟಕ
ಬೆಂಗಳೂರು, ಎ.17: ಕೋವಿಡ್ ಸೋಂಕಿಗೆ ಒಳಗಾಗಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿಗೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಬೆಡ್ ಸಿಕ್ಕಿಲ್ಲ. ಕೋವಿಡ್ ಪಾಸಿಟಿವ್ ಆದಬಳಿಕ ಅವರನ್ನು ವೈದ್ಯರು ಆಸ್ಪತ್ರಗೆ ಅಡ್ಮಿಟ್ ಆಗಲು ಸಲಹೆ ಮಾಡಿದ್ದಾರೆ.
ಈ ವೇಳೆ, ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಲು ಬಯಸಿದಾಗ ಅಲ್ಲಿ ಕುಮಾರಸ್ವಾಮಿಯವರಿಗೆ ಬೆಡ್ ಇಲ್ಲವೆಂದು ವೈದ್ಯರು ತಿಳಿಸಿದ್ದಾರೆ.
ಕುಮಾರಸ್ವಾಮಿಯಂತಹ ಪ್ರಭಾವಿಗಳಿಗೇ ಮಣಿಪಾಲ ಆಸ್ಪತ್ರೆಯಲ್ಲಿ ಬೆಡ್ ಸಿಕ್ಕಿಲ್ಲ ಎಂದ್ರೆ ಸಾಮಾನ್ಯ ಜನರ ಪಾಡೇನು ಎನ್ನುವ ಮಾತು ಕೇಳಿಬಂದಿದೆ. ಬಸವಕಲ್ಯಾಣದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಕುಮಾರಸ್ವಾಮಿಯವರಿಗೆ ಶುಕ್ರವಾರ ಸಂಜೆ ದಣಿವು ಕಾಣಿಸಿಕೊಂಡಿತ್ತು. ಹೀಗಾಗಿ ಇಂದು ಬೆಳಗ್ಗೆ ಅವರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಿದ್ದು, ಪಾಸಿಟಿವ್ ಕಂಡುಬಂದಿತ್ತು.

ರೋಗ ಲಕ್ಷಣಗಳಿಲ್ಲದ ಕಾರಣ ತಮ್ಮ ತೋಟದ ಮನೆಯಲ್ಲಿ ವಿಶ್ರಾಂತಿ ಪಡೆದುಕೊಳ್ಳಲು ಕುಮಾರಸ್ವಾಮಿ ನಿರ್ಧರಿಸಿದ್ದರು. ಆದರೆ, ವೈದ್ಯರು ಈ ವಿಷಯದಲ್ಲಿ ರಿಸ್ಕ್ ಬೇಡ, ಆಸ್ಪತ್ರೆಯಲ್ಲಿ ಅಡ್ಮಿಟ್ ಆಗುವಂತೆ ಸೂಚಿಸಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಆಪ್ತರು ಮಣಿಪಾಲ ಆಸ್ಪತ್ರೆಯಲ್ಲಿ ವಿಚಾರಿಸಿದಾಗ ಅಲ್ಲಿ ಬೆಡ್ ಇಲ್ಲ ಎಂಬ ಉತ್ತರ ಸಿಕ್ಕಿದೆ. ವಿಷಯ ಅರಿತ ಆರೋಗ್ಯ ಸಚಿವ ಸುಧಾಕರ್ ಮಣಿಪಾಲ್ ಆಸ್ಪತ್ರೆಯಲ್ಲಿ ವಿಚಾರಿಸಿದ್ದು, ಬೆಡ್ ಕೊಡಿಸಲು ಪ್ರಯತ್ನಿಸಿದ್ದಾರೆ. ಆದರೆ, ಅದು ಸಾಧ್ಯವಾಗಿಲ್ಲ.
ಇದೇ ವೇಳೆ, ಕುಮಾರಸ್ವಾಮಿಗೆ ಬೇರೊಂದು ಖಾಸಗಿ ಆಸ್ಪತ್ರೆಯಲ್ಲಿ ಬೆಡ್ ಲಭ್ಯವಾಗಿದ್ದು, ಅಲ್ಲಿ ದಾಖಲಾಗಲು ಮುಂದಾಗಿದ್ದಾರೆ. ಆದರೆ ಬೆಡ್ ಸಿಕ್ಕರೂ ಆಸ್ಪತ್ರೆಯಲ್ಲಿ ದಾಖಲಾಗಲು ಕುಮಾರಸ್ವಾಮಿಗೆ ಸಾಧ್ಯವಾಗಿಲ್ಲ. ಪ್ರಕರಣ ಒಂದರಲ್ಲಿ ತುರ್ತಾಗಿ ಕುಮಾರಸ್ವಾಮಿ ಕೋರ್ಟಿಗೆ ಹಾಜರಾಗಬೇಕಿದ್ದರಿಂದ ಕಾವಿಡ್ ಕಾರಣ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm