ಬ್ರೇಕಿಂಗ್ ನ್ಯೂಸ್
17-04-21 01:30 pm Headline Karnataka News Network ಕರ್ನಾಟಕ
ಬೆಂಗಳೂರು, ಎ.17: ಕೋವಿಡ್ ಸೋಂಕಿಗೆ ಒಳಗಾಗಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿಗೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಬೆಡ್ ಸಿಕ್ಕಿಲ್ಲ. ಕೋವಿಡ್ ಪಾಸಿಟಿವ್ ಆದಬಳಿಕ ಅವರನ್ನು ವೈದ್ಯರು ಆಸ್ಪತ್ರಗೆ ಅಡ್ಮಿಟ್ ಆಗಲು ಸಲಹೆ ಮಾಡಿದ್ದಾರೆ.
ಈ ವೇಳೆ, ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಲು ಬಯಸಿದಾಗ ಅಲ್ಲಿ ಕುಮಾರಸ್ವಾಮಿಯವರಿಗೆ ಬೆಡ್ ಇಲ್ಲವೆಂದು ವೈದ್ಯರು ತಿಳಿಸಿದ್ದಾರೆ.
ಕುಮಾರಸ್ವಾಮಿಯಂತಹ ಪ್ರಭಾವಿಗಳಿಗೇ ಮಣಿಪಾಲ ಆಸ್ಪತ್ರೆಯಲ್ಲಿ ಬೆಡ್ ಸಿಕ್ಕಿಲ್ಲ ಎಂದ್ರೆ ಸಾಮಾನ್ಯ ಜನರ ಪಾಡೇನು ಎನ್ನುವ ಮಾತು ಕೇಳಿಬಂದಿದೆ. ಬಸವಕಲ್ಯಾಣದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಕುಮಾರಸ್ವಾಮಿಯವರಿಗೆ ಶುಕ್ರವಾರ ಸಂಜೆ ದಣಿವು ಕಾಣಿಸಿಕೊಂಡಿತ್ತು. ಹೀಗಾಗಿ ಇಂದು ಬೆಳಗ್ಗೆ ಅವರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಿದ್ದು, ಪಾಸಿಟಿವ್ ಕಂಡುಬಂದಿತ್ತು.
ರೋಗ ಲಕ್ಷಣಗಳಿಲ್ಲದ ಕಾರಣ ತಮ್ಮ ತೋಟದ ಮನೆಯಲ್ಲಿ ವಿಶ್ರಾಂತಿ ಪಡೆದುಕೊಳ್ಳಲು ಕುಮಾರಸ್ವಾಮಿ ನಿರ್ಧರಿಸಿದ್ದರು. ಆದರೆ, ವೈದ್ಯರು ಈ ವಿಷಯದಲ್ಲಿ ರಿಸ್ಕ್ ಬೇಡ, ಆಸ್ಪತ್ರೆಯಲ್ಲಿ ಅಡ್ಮಿಟ್ ಆಗುವಂತೆ ಸೂಚಿಸಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಆಪ್ತರು ಮಣಿಪಾಲ ಆಸ್ಪತ್ರೆಯಲ್ಲಿ ವಿಚಾರಿಸಿದಾಗ ಅಲ್ಲಿ ಬೆಡ್ ಇಲ್ಲ ಎಂಬ ಉತ್ತರ ಸಿಕ್ಕಿದೆ. ವಿಷಯ ಅರಿತ ಆರೋಗ್ಯ ಸಚಿವ ಸುಧಾಕರ್ ಮಣಿಪಾಲ್ ಆಸ್ಪತ್ರೆಯಲ್ಲಿ ವಿಚಾರಿಸಿದ್ದು, ಬೆಡ್ ಕೊಡಿಸಲು ಪ್ರಯತ್ನಿಸಿದ್ದಾರೆ. ಆದರೆ, ಅದು ಸಾಧ್ಯವಾಗಿಲ್ಲ.
ಇದೇ ವೇಳೆ, ಕುಮಾರಸ್ವಾಮಿಗೆ ಬೇರೊಂದು ಖಾಸಗಿ ಆಸ್ಪತ್ರೆಯಲ್ಲಿ ಬೆಡ್ ಲಭ್ಯವಾಗಿದ್ದು, ಅಲ್ಲಿ ದಾಖಲಾಗಲು ಮುಂದಾಗಿದ್ದಾರೆ. ಆದರೆ ಬೆಡ್ ಸಿಕ್ಕರೂ ಆಸ್ಪತ್ರೆಯಲ್ಲಿ ದಾಖಲಾಗಲು ಕುಮಾರಸ್ವಾಮಿಗೆ ಸಾಧ್ಯವಾಗಿಲ್ಲ. ಪ್ರಕರಣ ಒಂದರಲ್ಲಿ ತುರ್ತಾಗಿ ಕುಮಾರಸ್ವಾಮಿ ಕೋರ್ಟಿಗೆ ಹಾಜರಾಗಬೇಕಿದ್ದರಿಂದ ಕಾವಿಡ್ ಕಾರಣ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದಾರೆ.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm