ಬ್ರೇಕಿಂಗ್ ನ್ಯೂಸ್
18-04-21 11:55 am Headline Karnataka News Network ಕರ್ನಾಟಕ
ಬೆಂಗಳೂರು, ಎ 18: ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ, ಪ್ರಸಂಗಕರ್ತೃ, ವಾಗ್ಮಿ ಪ್ರೊ. ಎಂ.ಎ.ಹೆಗಡೆ (73) ಅವರು ಭಾನುವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನರಾದರು.
ಎಂ.ಎ.ಹೆಗಡೆ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ಏಪ್ರಿಲ್ 13ರಂದು ದೃಢಪಟ್ಟಿತ್ತು. ಶನಿವಾರ ಮುಂಜಾನೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು.
ಯಕ್ಷಗಾನದ ಅರ್ಥಧಾರಿ ಹಾಗೂ ಪ್ರಸಂಗಕರ್ತರಾಗಿದ್ದ ಅವರು ಎರಡನೇ ಅವಧಿಗೆ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿದ್ದರು. ಕೋವಿಡ್–19 ಲಾಕ್ಡೌನ್ ಅವಧಿಯಲ್ಲಿ ಹಿರಿಯ ಹಾಗೂ ಪ್ರಸಿದ್ಧ ಯಕ್ಷಗಾನ ಹಿರಿಯ ಕಲಾವಿದರ ಜೊತೆ ವರ್ಚುವಲ್ ರೂಪದಲ್ಲಿ ‘ಮಾತಿನ ಮಂಟಪ’ ಮಾತುಕತೆ ಕಾರ್ಯಕ್ರಮ ಆಯೋಜಿಸಿದ್ದರು. ಈ ಕಾರ್ಯಕ್ರಮದಡಿ 100ಕ್ಕೂ ಅಧಿಕ ಕಲಾವಿದರ ಬದುಕಿನ ಚಿತ್ರಣವನ್ನು ಕಟ್ಟಿಕೊಟ್ಟಿದ್ದರು. ‘ಮಾತಿನ ಮಂಟಪ’ ಕಾರ್ಯಕ್ರಮದ ಮೂಲಕ 70 ವರ್ಷ ಮೀರಿದ ಕಲಾವಿದ ಸಂದರ್ಶನವನ್ನು ವರ್ಚುವಲ್ ರೂಪದಲ್ಲಿ ಕಟ್ಟಿಕೊಟ್ಟಿದ್ದರು. ಈ ಸರಣಿಯಲ್ಲಿ 50ಕ್ಕೂ ಅಧಿಕ ಕಾರ್ಯಕ್ರಮಗಳನ್ನು ಅಕಾಡೆಮಿಯು ರೂಪಿಸಿತ್ತು. ಕಲಾವಿದರ ಸಾಧನೆ, ಚಿಂತನೆ ಹಾಗೂ ಅವರ ಕಲಾ ಬದುಕನ್ನು ಯಕ್ಷಗಾನದ ಅಭಿಮಾನಿಗಳಿಗೆ ತಿಳಿಸುವ ಈ ಕಾರ್ಯಕ್ರಮ ಸರಣಿಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.
ಅಕಾಡೆಮಿ ಅಧ್ಯಕ್ಷರಾಗಿ ಕಲೆ, ಕಲಾವಿದರ ಉನ್ನತಿಗಾಗಿ ಎಂ.ಎ.ಹೆಗಡೆ ಅವರು ಸಾಕಷ್ಟು ಶ್ರಮಿಸಿದ್ದರು. ಕಲಾವಿದರ ವಲಯದಲ್ಲಿಯೂ ಹೆಗಡೆ ಅವರ ಬಗ್ಗೆ ಅಪಾರ ಗೌರವವಿತ್ತು.
President of Karnataka Yakshagana Bayalata Academy, well-known author of Yakshagana Prasangas and gifted orator Prof M A Hegde (73) passed away in the city on Sunday April 18 morning on account of breathing difficulties.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm