ಬ್ರೇಕಿಂಗ್ ನ್ಯೂಸ್
18-04-21 04:23 pm Headline Karnataka News Network ಕರ್ನಾಟಕ
ಬೆಂಗಳೂರು, ಎ 18: ನಗರದಲ್ಲಿ ಟಫ್ ರೂಲ್ಸ್ ಜಾರಿ ಮಾಡಲೇಬೇಕು. ಆದ್ರೆ ಲಾಕ್ಡೌನ್ ಮಾಡೋದಿಲ್ಲ ಅಂತ ಕಂದಾಯ ಸಚಿವ ಆರ್.ಅಶೋಕ್ ಸ್ಪಷ್ಟಪಡಿಸಿದ್ದಾರೆ.
ಕೊರೊನಾ ಸೋಂಕು ಹೆಚ್ಚಳವಾಗ್ತಿರೋ ಹಿನ್ನೆಲೆ ಇಂದು ಅಶೋಕ್, ಬಿಬಿಎಂಪಿ ವ್ಯಾಪ್ತಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಬೆಂಗಳೂರಿನ ಕುಮಾರಕೃಪಾದಲ್ಲಿ ನಡೆದ ಸಭೆಯಲ್ಲಿ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವೇದ್ ಆಕ್ತರ್ ಭಾಗಿಯಾಗಿದ್ರು.

ಕೊರೊನಾ ನಿಯಂತ್ರಣದ ಬಗ್ಗೆ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅಶೋಕ್, There is no lockdown, no lockdown, no lockdown ಎಂದು ಪುನರುಚ್ಛರಿಸಿದ್ರು. ದಿನನಿತ್ಯದ ಜೀವನಕ್ಕೆ ಯಾವುದೇ ತೊಂದರೆಯಾಗದೇ ವ್ಯವಸ್ಥೆಯನ್ನ ನಾವು ನಿರ್ಮಾಣ ಮಾಡಬೇಕು. ಕೆಲವೊಂದು ಕ್ಷೇತ್ರದಲ್ಲಿ ಎಸಿಗಳಲ್ಲೇ ಕಾರ್ಯನಿರ್ವಹಿಸುವವರಿಗೆ ಕಠಿಣ ಕ್ರಮ ಆಗಬೇಕಿದೆ ಎಂದರು. ಅಕ್ಕಪಕ್ಕದ ರಾಜ್ಯಗಳನ್ನು ನೋಡಿ.. ಮಹಾರಾಷ್ಟ್ರ, ದೆಹಲಿ ರಾಜ್ಯಗಳಲ್ಲಿ ಸೋಂಕು ಹೆಚ್ಚಾಗಿದೆ. ಅದನ್ನು ಗಮನಿಸಿ ನಾವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ಹೇಳಿದ್ರು.

ನಾಳೆ ಬೆಂಗಳೂರಿನ ಮಟ್ಟಿಗೆ ಸರ್ವಪಕ್ಷ ಮುಖಂಡರ ಸಭೆ ಕರೆಯಲಾಗಿದೆ. ಹೀಗಾಗಿ ನಾಳೆ ಬೆಂಗಳೂರಿನ ಪಾಲಿಗೆ ಮಹತ್ವದ ದಿನ ನಿಜ. ಕೊರೊನಾ ಸೋಂಕು ತಡೆಗಟ್ಟಲು ಟಫ್ ರೂಲ್ಸ್ ಜಾರಿ ಮಾಡುವ ಉದ್ದೇಶದಿಂದಲೇ ಸಭೆ ಕರೆಯಲಾಗಿದೆ. ಇದನ್ನು ಬಿಟ್ಟು ಲಾಕ್ಡೌನ್ ಮಾಡುವ ಉದ್ದೇಶ ಸರ್ಕಾರಕ್ಕಿಲ್ಲ. ಲಾಕ್ಡೌನ್ ಮಾಡುವುದಿಲ್ಲ. ಲಾಕ್ಡೌನ್ ಮಾಡಿ, ಜನಸಾಮಾನ್ಯರಿಗೆ ಸಂಕಷ್ಟಕ್ಕೆ ದೂಡುವುದಿಲ್ಲ. ಕಳೆದ ಲಾಕ್ಡೌನ್ ಮಾಡಿದಾಗ ಏನೆಲ್ಲಾ ಘಟನೆಗಳು ಸಂಭವಿಸಿದೆ ಎಂಬುದು ತಿಳಿದಿದೆ. ಯಾವುದೇ ಕಾರಣಕ್ಕೂ ಲಾಕ್ಡೌನ್ ಮಾತ್ರ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ರು.

ನಾಳೆ ವಿಪತ್ತು ನಿರ್ವಹಣಾ ತಂಡದಿಂದ ಸಭೆ ಕರೆಯಲಾಗಿದೆ. ಮುಖ್ಯಮಂತ್ರಿಗಳು ವಿಪತ್ತು ನಿರ್ವಹಣಾ ದಳದ ಅಧ್ಯಕ್ಷರಾಗಿರುತ್ತಾರೆ, ಕಂದಾಯ ಸಚಿವರು ಉಪಾಧ್ಯಕ್ಷರಾಗಿರುತ್ತಾರೆ. ಸಿಎಂ ಅನುಪಸ್ಥಿತಿಯಲ್ಲಿ ನಾಳೆ ನಾನು ಸಭೆ ನಡೆಸಲಿದ್ದೇನೆ. ಬೆಂಗಳೂರಿನ ಮಟ್ಟಿಗೆ ನಾಳೆ ಮಹತ್ವದ ದಿನ.ನಾಳೆ ಸರ್ವಪಕ್ಷ ಮುಖಂಡರ ಸಭೆಯಲ್ಲಿ ಎಲ್ಲಾ ಪಕ್ಷಗಳ ನಾಯಕರ ಮಾತನ್ನು ಪರಿಗಣಿಸಲಾಗುತ್ತದೆ. ಬಳಿಕ ಟಫ್ರೂಲ್ಸ್ ಜಾರಿ ಹೇಗಿರಲಿದೆ? ಎಂಬುದನ್ನು ತಿಳಿಸುತ್ತೇವೆ ಎಂದು ಹೇಳಿದ್ರು.
Covid second wave but no lockdown in Karnataka clarified minister R Ashok to media persons here in Bangalore.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm