ಬ್ರೇಕಿಂಗ್ ನ್ಯೂಸ್
18-04-21 04:23 pm Headline Karnataka News Network ಕರ್ನಾಟಕ
ಬೆಂಗಳೂರು, ಎ 18: ನಗರದಲ್ಲಿ ಟಫ್ ರೂಲ್ಸ್ ಜಾರಿ ಮಾಡಲೇಬೇಕು. ಆದ್ರೆ ಲಾಕ್ಡೌನ್ ಮಾಡೋದಿಲ್ಲ ಅಂತ ಕಂದಾಯ ಸಚಿವ ಆರ್.ಅಶೋಕ್ ಸ್ಪಷ್ಟಪಡಿಸಿದ್ದಾರೆ.
ಕೊರೊನಾ ಸೋಂಕು ಹೆಚ್ಚಳವಾಗ್ತಿರೋ ಹಿನ್ನೆಲೆ ಇಂದು ಅಶೋಕ್, ಬಿಬಿಎಂಪಿ ವ್ಯಾಪ್ತಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಬೆಂಗಳೂರಿನ ಕುಮಾರಕೃಪಾದಲ್ಲಿ ನಡೆದ ಸಭೆಯಲ್ಲಿ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವೇದ್ ಆಕ್ತರ್ ಭಾಗಿಯಾಗಿದ್ರು.

ಕೊರೊನಾ ನಿಯಂತ್ರಣದ ಬಗ್ಗೆ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅಶೋಕ್, There is no lockdown, no lockdown, no lockdown ಎಂದು ಪುನರುಚ್ಛರಿಸಿದ್ರು. ದಿನನಿತ್ಯದ ಜೀವನಕ್ಕೆ ಯಾವುದೇ ತೊಂದರೆಯಾಗದೇ ವ್ಯವಸ್ಥೆಯನ್ನ ನಾವು ನಿರ್ಮಾಣ ಮಾಡಬೇಕು. ಕೆಲವೊಂದು ಕ್ಷೇತ್ರದಲ್ಲಿ ಎಸಿಗಳಲ್ಲೇ ಕಾರ್ಯನಿರ್ವಹಿಸುವವರಿಗೆ ಕಠಿಣ ಕ್ರಮ ಆಗಬೇಕಿದೆ ಎಂದರು. ಅಕ್ಕಪಕ್ಕದ ರಾಜ್ಯಗಳನ್ನು ನೋಡಿ.. ಮಹಾರಾಷ್ಟ್ರ, ದೆಹಲಿ ರಾಜ್ಯಗಳಲ್ಲಿ ಸೋಂಕು ಹೆಚ್ಚಾಗಿದೆ. ಅದನ್ನು ಗಮನಿಸಿ ನಾವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ಹೇಳಿದ್ರು.

ನಾಳೆ ಬೆಂಗಳೂರಿನ ಮಟ್ಟಿಗೆ ಸರ್ವಪಕ್ಷ ಮುಖಂಡರ ಸಭೆ ಕರೆಯಲಾಗಿದೆ. ಹೀಗಾಗಿ ನಾಳೆ ಬೆಂಗಳೂರಿನ ಪಾಲಿಗೆ ಮಹತ್ವದ ದಿನ ನಿಜ. ಕೊರೊನಾ ಸೋಂಕು ತಡೆಗಟ್ಟಲು ಟಫ್ ರೂಲ್ಸ್ ಜಾರಿ ಮಾಡುವ ಉದ್ದೇಶದಿಂದಲೇ ಸಭೆ ಕರೆಯಲಾಗಿದೆ. ಇದನ್ನು ಬಿಟ್ಟು ಲಾಕ್ಡೌನ್ ಮಾಡುವ ಉದ್ದೇಶ ಸರ್ಕಾರಕ್ಕಿಲ್ಲ. ಲಾಕ್ಡೌನ್ ಮಾಡುವುದಿಲ್ಲ. ಲಾಕ್ಡೌನ್ ಮಾಡಿ, ಜನಸಾಮಾನ್ಯರಿಗೆ ಸಂಕಷ್ಟಕ್ಕೆ ದೂಡುವುದಿಲ್ಲ. ಕಳೆದ ಲಾಕ್ಡೌನ್ ಮಾಡಿದಾಗ ಏನೆಲ್ಲಾ ಘಟನೆಗಳು ಸಂಭವಿಸಿದೆ ಎಂಬುದು ತಿಳಿದಿದೆ. ಯಾವುದೇ ಕಾರಣಕ್ಕೂ ಲಾಕ್ಡೌನ್ ಮಾತ್ರ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ರು.

ನಾಳೆ ವಿಪತ್ತು ನಿರ್ವಹಣಾ ತಂಡದಿಂದ ಸಭೆ ಕರೆಯಲಾಗಿದೆ. ಮುಖ್ಯಮಂತ್ರಿಗಳು ವಿಪತ್ತು ನಿರ್ವಹಣಾ ದಳದ ಅಧ್ಯಕ್ಷರಾಗಿರುತ್ತಾರೆ, ಕಂದಾಯ ಸಚಿವರು ಉಪಾಧ್ಯಕ್ಷರಾಗಿರುತ್ತಾರೆ. ಸಿಎಂ ಅನುಪಸ್ಥಿತಿಯಲ್ಲಿ ನಾಳೆ ನಾನು ಸಭೆ ನಡೆಸಲಿದ್ದೇನೆ. ಬೆಂಗಳೂರಿನ ಮಟ್ಟಿಗೆ ನಾಳೆ ಮಹತ್ವದ ದಿನ.ನಾಳೆ ಸರ್ವಪಕ್ಷ ಮುಖಂಡರ ಸಭೆಯಲ್ಲಿ ಎಲ್ಲಾ ಪಕ್ಷಗಳ ನಾಯಕರ ಮಾತನ್ನು ಪರಿಗಣಿಸಲಾಗುತ್ತದೆ. ಬಳಿಕ ಟಫ್ರೂಲ್ಸ್ ಜಾರಿ ಹೇಗಿರಲಿದೆ? ಎಂಬುದನ್ನು ತಿಳಿಸುತ್ತೇವೆ ಎಂದು ಹೇಳಿದ್ರು.
Covid second wave but no lockdown in Karnataka clarified minister R Ashok to media persons here in Bangalore.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm