ಬ್ರೇಕಿಂಗ್ ನ್ಯೂಸ್
18-04-21 04:23 pm Headline Karnataka News Network ಕರ್ನಾಟಕ
ಬೆಂಗಳೂರು, ಎ 18: ನಗರದಲ್ಲಿ ಟಫ್ ರೂಲ್ಸ್ ಜಾರಿ ಮಾಡಲೇಬೇಕು. ಆದ್ರೆ ಲಾಕ್ಡೌನ್ ಮಾಡೋದಿಲ್ಲ ಅಂತ ಕಂದಾಯ ಸಚಿವ ಆರ್.ಅಶೋಕ್ ಸ್ಪಷ್ಟಪಡಿಸಿದ್ದಾರೆ.
ಕೊರೊನಾ ಸೋಂಕು ಹೆಚ್ಚಳವಾಗ್ತಿರೋ ಹಿನ್ನೆಲೆ ಇಂದು ಅಶೋಕ್, ಬಿಬಿಎಂಪಿ ವ್ಯಾಪ್ತಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಬೆಂಗಳೂರಿನ ಕುಮಾರಕೃಪಾದಲ್ಲಿ ನಡೆದ ಸಭೆಯಲ್ಲಿ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವೇದ್ ಆಕ್ತರ್ ಭಾಗಿಯಾಗಿದ್ರು.

ಕೊರೊನಾ ನಿಯಂತ್ರಣದ ಬಗ್ಗೆ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅಶೋಕ್, There is no lockdown, no lockdown, no lockdown ಎಂದು ಪುನರುಚ್ಛರಿಸಿದ್ರು. ದಿನನಿತ್ಯದ ಜೀವನಕ್ಕೆ ಯಾವುದೇ ತೊಂದರೆಯಾಗದೇ ವ್ಯವಸ್ಥೆಯನ್ನ ನಾವು ನಿರ್ಮಾಣ ಮಾಡಬೇಕು. ಕೆಲವೊಂದು ಕ್ಷೇತ್ರದಲ್ಲಿ ಎಸಿಗಳಲ್ಲೇ ಕಾರ್ಯನಿರ್ವಹಿಸುವವರಿಗೆ ಕಠಿಣ ಕ್ರಮ ಆಗಬೇಕಿದೆ ಎಂದರು. ಅಕ್ಕಪಕ್ಕದ ರಾಜ್ಯಗಳನ್ನು ನೋಡಿ.. ಮಹಾರಾಷ್ಟ್ರ, ದೆಹಲಿ ರಾಜ್ಯಗಳಲ್ಲಿ ಸೋಂಕು ಹೆಚ್ಚಾಗಿದೆ. ಅದನ್ನು ಗಮನಿಸಿ ನಾವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ಹೇಳಿದ್ರು.

ನಾಳೆ ಬೆಂಗಳೂರಿನ ಮಟ್ಟಿಗೆ ಸರ್ವಪಕ್ಷ ಮುಖಂಡರ ಸಭೆ ಕರೆಯಲಾಗಿದೆ. ಹೀಗಾಗಿ ನಾಳೆ ಬೆಂಗಳೂರಿನ ಪಾಲಿಗೆ ಮಹತ್ವದ ದಿನ ನಿಜ. ಕೊರೊನಾ ಸೋಂಕು ತಡೆಗಟ್ಟಲು ಟಫ್ ರೂಲ್ಸ್ ಜಾರಿ ಮಾಡುವ ಉದ್ದೇಶದಿಂದಲೇ ಸಭೆ ಕರೆಯಲಾಗಿದೆ. ಇದನ್ನು ಬಿಟ್ಟು ಲಾಕ್ಡೌನ್ ಮಾಡುವ ಉದ್ದೇಶ ಸರ್ಕಾರಕ್ಕಿಲ್ಲ. ಲಾಕ್ಡೌನ್ ಮಾಡುವುದಿಲ್ಲ. ಲಾಕ್ಡೌನ್ ಮಾಡಿ, ಜನಸಾಮಾನ್ಯರಿಗೆ ಸಂಕಷ್ಟಕ್ಕೆ ದೂಡುವುದಿಲ್ಲ. ಕಳೆದ ಲಾಕ್ಡೌನ್ ಮಾಡಿದಾಗ ಏನೆಲ್ಲಾ ಘಟನೆಗಳು ಸಂಭವಿಸಿದೆ ಎಂಬುದು ತಿಳಿದಿದೆ. ಯಾವುದೇ ಕಾರಣಕ್ಕೂ ಲಾಕ್ಡೌನ್ ಮಾತ್ರ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ರು.

ನಾಳೆ ವಿಪತ್ತು ನಿರ್ವಹಣಾ ತಂಡದಿಂದ ಸಭೆ ಕರೆಯಲಾಗಿದೆ. ಮುಖ್ಯಮಂತ್ರಿಗಳು ವಿಪತ್ತು ನಿರ್ವಹಣಾ ದಳದ ಅಧ್ಯಕ್ಷರಾಗಿರುತ್ತಾರೆ, ಕಂದಾಯ ಸಚಿವರು ಉಪಾಧ್ಯಕ್ಷರಾಗಿರುತ್ತಾರೆ. ಸಿಎಂ ಅನುಪಸ್ಥಿತಿಯಲ್ಲಿ ನಾಳೆ ನಾನು ಸಭೆ ನಡೆಸಲಿದ್ದೇನೆ. ಬೆಂಗಳೂರಿನ ಮಟ್ಟಿಗೆ ನಾಳೆ ಮಹತ್ವದ ದಿನ.ನಾಳೆ ಸರ್ವಪಕ್ಷ ಮುಖಂಡರ ಸಭೆಯಲ್ಲಿ ಎಲ್ಲಾ ಪಕ್ಷಗಳ ನಾಯಕರ ಮಾತನ್ನು ಪರಿಗಣಿಸಲಾಗುತ್ತದೆ. ಬಳಿಕ ಟಫ್ರೂಲ್ಸ್ ಜಾರಿ ಹೇಗಿರಲಿದೆ? ಎಂಬುದನ್ನು ತಿಳಿಸುತ್ತೇವೆ ಎಂದು ಹೇಳಿದ್ರು.
Covid second wave but no lockdown in Karnataka clarified minister R Ashok to media persons here in Bangalore.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm