ಬ್ರೇಕಿಂಗ್ ನ್ಯೂಸ್
21-04-21 10:34 pm Headline Karnataka News Network ಕರ್ನಾಟಕ
ಬೆಂಗಳೂರು, ಎ.21: ಮುಷ್ಕರ ನಿಲ್ಲಿಸಿ, ತಕ್ಷಣ ಕರ್ತವ್ಯಕ್ಕೆ ಹಾಜರಾಗುವಂತೆ ಹೈಕೋರ್ಟ್ ಛಾಟಿ ಬೀಸುತ್ತಿದ್ದಂತೆಯೇ ಮುಷ್ಕರ ನಿರತ ಸಾರಿಗೆ ನೌಕರರಿಗೆ ಬಿಸಿ ಮುಟ್ಟಿದೆ. ಹೈಕೋರ್ಟ್ ಸೂಚನೆ ಪರಿಗಣಿಸಿ ಇಂದು ಬೆಳಗ್ಗೆ ಹೆಚ್ಚಿನ ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಇದರೊಂದಿಗೆ ಕಳೆದ 15 ದಿನಗಳಿಂದ ನಡೆಯುತ್ತಿದ್ದ ಸಾರಿಗೆ ಮುಷ್ಕರ ದಿಢೀರ್ ಅಂತ್ಯಗೊಂಡಿದೆ.
ಅತ್ತ ಹೆಚ್ಚಿನ ನೌಕರರು ಕರ್ತವ್ಯಕ್ಕೆ ಹಾಜರಾಗುತ್ತಿದ್ದಂತೆ ಮುಖಭಂಗ ಅನುಭವಿಸಿದ ಸಾರಿಗೆ ನೌಕರರ ಸಂಘದವರು ಅನಿವಾರ್ಯ ಎಂಬಂತೆ ಮುಷ್ಕರ ಕೈಬಿಟ್ಟಿದ್ದಾಗಿ ಹೇಳಿಕೆ ನೀಡಿದ್ದಾರೆ. ಅಲ್ಲದೆ, ತಾತ್ಕಾಲಿಕವಾಗಿ ಮುಷ್ಕರ ಹಿಂಪಡೆಯುತ್ತಿದ್ದು ಮತ್ತೆ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಮುಷ್ಕರದಲ್ಲಿ ಪಾಲ್ಗೊಂಡಿದ್ದಲ್ಲದೆ, ಇತರರನ್ನೂ ಮುಷ್ಕರಕ್ಕೆ ಒತ್ತಾಯಿಸುತ್ತಿದ್ದ ಕಾರಣಕ್ಕೆ ತರಬೇತಿ ನಿರತ ಮತ್ತು ಖಾಯಂ ಸೇರಿ 1900 ಕ್ಕೂ ಹೆಚ್ಚು ಸಾರಿಗೆ ನೌಕರರನ್ನು ಕರ್ತವ್ಯದಿಂದ ವಜಾ ಮಾಡಲಾಗಿತ್ತು. ಅಲ್ಲದೆ, 2900ಕ್ಕೂ ಹೆಚ್ಚು ಮಂದಿಯನ್ನು ಅಮಾನತು ಮಾಡಲಾಗಿತ್ತು.

ಈ ನಡುವೆ, ಮಂಗಳವಾರ ಸಾರ್ವಜನಿಕ ಹಿತಾಸಕ್ತಿ ದೂರಿನ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್ ಕೋವಿಡ್ ಸಂಕಷ್ಟದ ನಡುವೆ ಸಾರಿಗೆ ನೌಕರರು ಮುಷ್ಕರ ನಡೆಸುವುದು ಸರಿಯಲ್ಲ. ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಿತ್ತು. ಇದರಂತೆ ಬುಧವಾರ ಹೆಚ್ಚಿನ ಮಂದಿ ಸಾರಿಗೆ ಸಿಬಂದಿ ಕರ್ತವ್ಯಕ್ಕೆ ಹಾಜರಾಗಿದ್ದರು. ಈ ನಡುವೆ, ಅಮಾನತಾದ ಮತ್ತು ವಜಾ ಆಗಿರುವ ಸಿಬಂದಿ ಅತಂತ್ರಕ್ಕೆ ಸಿಲುಕಿದ್ದಾರೆ. ಅವರನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಬೇಕೆಂಬ ಬೇಡಿಕೆಯನ್ನೂ ಮುಂದಿರಿಸದೆ ಸಾರಿಗೆ ನೌಕರರ ಸಂಘದವರು ಮುಷ್ಕರ ಹಿಂಪಡೆದಿರುವುದು ಸಿಬಂದಿಯನ್ನು ಇಕ್ಕಟ್ಟಿಗೆ ಸಿಲುಕಿದ್ದಾರೆ.
The Karnataka State Road Transport Employees League called off its two-week-long strike on Wednesday a day after the Karnataka High Court observed that the workers of the state road transport corporations (RTCs) had chosen the "worst time to go on a strike" citing the pandemic.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 09:04 pm
Mangalore Correspondent
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm