ಬ್ರೇಕಿಂಗ್ ನ್ಯೂಸ್
21-04-21 10:34 pm Headline Karnataka News Network ಕರ್ನಾಟಕ
ಬೆಂಗಳೂರು, ಎ.21: ಮುಷ್ಕರ ನಿಲ್ಲಿಸಿ, ತಕ್ಷಣ ಕರ್ತವ್ಯಕ್ಕೆ ಹಾಜರಾಗುವಂತೆ ಹೈಕೋರ್ಟ್ ಛಾಟಿ ಬೀಸುತ್ತಿದ್ದಂತೆಯೇ ಮುಷ್ಕರ ನಿರತ ಸಾರಿಗೆ ನೌಕರರಿಗೆ ಬಿಸಿ ಮುಟ್ಟಿದೆ. ಹೈಕೋರ್ಟ್ ಸೂಚನೆ ಪರಿಗಣಿಸಿ ಇಂದು ಬೆಳಗ್ಗೆ ಹೆಚ್ಚಿನ ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಇದರೊಂದಿಗೆ ಕಳೆದ 15 ದಿನಗಳಿಂದ ನಡೆಯುತ್ತಿದ್ದ ಸಾರಿಗೆ ಮುಷ್ಕರ ದಿಢೀರ್ ಅಂತ್ಯಗೊಂಡಿದೆ.
ಅತ್ತ ಹೆಚ್ಚಿನ ನೌಕರರು ಕರ್ತವ್ಯಕ್ಕೆ ಹಾಜರಾಗುತ್ತಿದ್ದಂತೆ ಮುಖಭಂಗ ಅನುಭವಿಸಿದ ಸಾರಿಗೆ ನೌಕರರ ಸಂಘದವರು ಅನಿವಾರ್ಯ ಎಂಬಂತೆ ಮುಷ್ಕರ ಕೈಬಿಟ್ಟಿದ್ದಾಗಿ ಹೇಳಿಕೆ ನೀಡಿದ್ದಾರೆ. ಅಲ್ಲದೆ, ತಾತ್ಕಾಲಿಕವಾಗಿ ಮುಷ್ಕರ ಹಿಂಪಡೆಯುತ್ತಿದ್ದು ಮತ್ತೆ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಮುಷ್ಕರದಲ್ಲಿ ಪಾಲ್ಗೊಂಡಿದ್ದಲ್ಲದೆ, ಇತರರನ್ನೂ ಮುಷ್ಕರಕ್ಕೆ ಒತ್ತಾಯಿಸುತ್ತಿದ್ದ ಕಾರಣಕ್ಕೆ ತರಬೇತಿ ನಿರತ ಮತ್ತು ಖಾಯಂ ಸೇರಿ 1900 ಕ್ಕೂ ಹೆಚ್ಚು ಸಾರಿಗೆ ನೌಕರರನ್ನು ಕರ್ತವ್ಯದಿಂದ ವಜಾ ಮಾಡಲಾಗಿತ್ತು. ಅಲ್ಲದೆ, 2900ಕ್ಕೂ ಹೆಚ್ಚು ಮಂದಿಯನ್ನು ಅಮಾನತು ಮಾಡಲಾಗಿತ್ತು.

ಈ ನಡುವೆ, ಮಂಗಳವಾರ ಸಾರ್ವಜನಿಕ ಹಿತಾಸಕ್ತಿ ದೂರಿನ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್ ಕೋವಿಡ್ ಸಂಕಷ್ಟದ ನಡುವೆ ಸಾರಿಗೆ ನೌಕರರು ಮುಷ್ಕರ ನಡೆಸುವುದು ಸರಿಯಲ್ಲ. ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಿತ್ತು. ಇದರಂತೆ ಬುಧವಾರ ಹೆಚ್ಚಿನ ಮಂದಿ ಸಾರಿಗೆ ಸಿಬಂದಿ ಕರ್ತವ್ಯಕ್ಕೆ ಹಾಜರಾಗಿದ್ದರು. ಈ ನಡುವೆ, ಅಮಾನತಾದ ಮತ್ತು ವಜಾ ಆಗಿರುವ ಸಿಬಂದಿ ಅತಂತ್ರಕ್ಕೆ ಸಿಲುಕಿದ್ದಾರೆ. ಅವರನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಬೇಕೆಂಬ ಬೇಡಿಕೆಯನ್ನೂ ಮುಂದಿರಿಸದೆ ಸಾರಿಗೆ ನೌಕರರ ಸಂಘದವರು ಮುಷ್ಕರ ಹಿಂಪಡೆದಿರುವುದು ಸಿಬಂದಿಯನ್ನು ಇಕ್ಕಟ್ಟಿಗೆ ಸಿಲುಕಿದ್ದಾರೆ.
The Karnataka State Road Transport Employees League called off its two-week-long strike on Wednesday a day after the Karnataka High Court observed that the workers of the state road transport corporations (RTCs) had chosen the "worst time to go on a strike" citing the pandemic.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm