ಬ್ರೇಕಿಂಗ್ ನ್ಯೂಸ್
21-04-21 10:34 pm Headline Karnataka News Network ಕರ್ನಾಟಕ
ಬೆಂಗಳೂರು, ಎ.21: ಮುಷ್ಕರ ನಿಲ್ಲಿಸಿ, ತಕ್ಷಣ ಕರ್ತವ್ಯಕ್ಕೆ ಹಾಜರಾಗುವಂತೆ ಹೈಕೋರ್ಟ್ ಛಾಟಿ ಬೀಸುತ್ತಿದ್ದಂತೆಯೇ ಮುಷ್ಕರ ನಿರತ ಸಾರಿಗೆ ನೌಕರರಿಗೆ ಬಿಸಿ ಮುಟ್ಟಿದೆ. ಹೈಕೋರ್ಟ್ ಸೂಚನೆ ಪರಿಗಣಿಸಿ ಇಂದು ಬೆಳಗ್ಗೆ ಹೆಚ್ಚಿನ ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಇದರೊಂದಿಗೆ ಕಳೆದ 15 ದಿನಗಳಿಂದ ನಡೆಯುತ್ತಿದ್ದ ಸಾರಿಗೆ ಮುಷ್ಕರ ದಿಢೀರ್ ಅಂತ್ಯಗೊಂಡಿದೆ.
ಅತ್ತ ಹೆಚ್ಚಿನ ನೌಕರರು ಕರ್ತವ್ಯಕ್ಕೆ ಹಾಜರಾಗುತ್ತಿದ್ದಂತೆ ಮುಖಭಂಗ ಅನುಭವಿಸಿದ ಸಾರಿಗೆ ನೌಕರರ ಸಂಘದವರು ಅನಿವಾರ್ಯ ಎಂಬಂತೆ ಮುಷ್ಕರ ಕೈಬಿಟ್ಟಿದ್ದಾಗಿ ಹೇಳಿಕೆ ನೀಡಿದ್ದಾರೆ. ಅಲ್ಲದೆ, ತಾತ್ಕಾಲಿಕವಾಗಿ ಮುಷ್ಕರ ಹಿಂಪಡೆಯುತ್ತಿದ್ದು ಮತ್ತೆ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಮುಷ್ಕರದಲ್ಲಿ ಪಾಲ್ಗೊಂಡಿದ್ದಲ್ಲದೆ, ಇತರರನ್ನೂ ಮುಷ್ಕರಕ್ಕೆ ಒತ್ತಾಯಿಸುತ್ತಿದ್ದ ಕಾರಣಕ್ಕೆ ತರಬೇತಿ ನಿರತ ಮತ್ತು ಖಾಯಂ ಸೇರಿ 1900 ಕ್ಕೂ ಹೆಚ್ಚು ಸಾರಿಗೆ ನೌಕರರನ್ನು ಕರ್ತವ್ಯದಿಂದ ವಜಾ ಮಾಡಲಾಗಿತ್ತು. ಅಲ್ಲದೆ, 2900ಕ್ಕೂ ಹೆಚ್ಚು ಮಂದಿಯನ್ನು ಅಮಾನತು ಮಾಡಲಾಗಿತ್ತು.
ಈ ನಡುವೆ, ಮಂಗಳವಾರ ಸಾರ್ವಜನಿಕ ಹಿತಾಸಕ್ತಿ ದೂರಿನ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್ ಕೋವಿಡ್ ಸಂಕಷ್ಟದ ನಡುವೆ ಸಾರಿಗೆ ನೌಕರರು ಮುಷ್ಕರ ನಡೆಸುವುದು ಸರಿಯಲ್ಲ. ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಿತ್ತು. ಇದರಂತೆ ಬುಧವಾರ ಹೆಚ್ಚಿನ ಮಂದಿ ಸಾರಿಗೆ ಸಿಬಂದಿ ಕರ್ತವ್ಯಕ್ಕೆ ಹಾಜರಾಗಿದ್ದರು. ಈ ನಡುವೆ, ಅಮಾನತಾದ ಮತ್ತು ವಜಾ ಆಗಿರುವ ಸಿಬಂದಿ ಅತಂತ್ರಕ್ಕೆ ಸಿಲುಕಿದ್ದಾರೆ. ಅವರನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಬೇಕೆಂಬ ಬೇಡಿಕೆಯನ್ನೂ ಮುಂದಿರಿಸದೆ ಸಾರಿಗೆ ನೌಕರರ ಸಂಘದವರು ಮುಷ್ಕರ ಹಿಂಪಡೆದಿರುವುದು ಸಿಬಂದಿಯನ್ನು ಇಕ್ಕಟ್ಟಿಗೆ ಸಿಲುಕಿದ್ದಾರೆ.
The Karnataka State Road Transport Employees League called off its two-week-long strike on Wednesday a day after the Karnataka High Court observed that the workers of the state road transport corporations (RTCs) had chosen the "worst time to go on a strike" citing the pandemic.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm