ಬ್ರೇಕಿಂಗ್ ನ್ಯೂಸ್
21-04-21 10:34 pm Headline Karnataka News Network ಕರ್ನಾಟಕ
ಬೆಂಗಳೂರು, ಎ.21: ಮುಷ್ಕರ ನಿಲ್ಲಿಸಿ, ತಕ್ಷಣ ಕರ್ತವ್ಯಕ್ಕೆ ಹಾಜರಾಗುವಂತೆ ಹೈಕೋರ್ಟ್ ಛಾಟಿ ಬೀಸುತ್ತಿದ್ದಂತೆಯೇ ಮುಷ್ಕರ ನಿರತ ಸಾರಿಗೆ ನೌಕರರಿಗೆ ಬಿಸಿ ಮುಟ್ಟಿದೆ. ಹೈಕೋರ್ಟ್ ಸೂಚನೆ ಪರಿಗಣಿಸಿ ಇಂದು ಬೆಳಗ್ಗೆ ಹೆಚ್ಚಿನ ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಇದರೊಂದಿಗೆ ಕಳೆದ 15 ದಿನಗಳಿಂದ ನಡೆಯುತ್ತಿದ್ದ ಸಾರಿಗೆ ಮುಷ್ಕರ ದಿಢೀರ್ ಅಂತ್ಯಗೊಂಡಿದೆ.
ಅತ್ತ ಹೆಚ್ಚಿನ ನೌಕರರು ಕರ್ತವ್ಯಕ್ಕೆ ಹಾಜರಾಗುತ್ತಿದ್ದಂತೆ ಮುಖಭಂಗ ಅನುಭವಿಸಿದ ಸಾರಿಗೆ ನೌಕರರ ಸಂಘದವರು ಅನಿವಾರ್ಯ ಎಂಬಂತೆ ಮುಷ್ಕರ ಕೈಬಿಟ್ಟಿದ್ದಾಗಿ ಹೇಳಿಕೆ ನೀಡಿದ್ದಾರೆ. ಅಲ್ಲದೆ, ತಾತ್ಕಾಲಿಕವಾಗಿ ಮುಷ್ಕರ ಹಿಂಪಡೆಯುತ್ತಿದ್ದು ಮತ್ತೆ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಮುಷ್ಕರದಲ್ಲಿ ಪಾಲ್ಗೊಂಡಿದ್ದಲ್ಲದೆ, ಇತರರನ್ನೂ ಮುಷ್ಕರಕ್ಕೆ ಒತ್ತಾಯಿಸುತ್ತಿದ್ದ ಕಾರಣಕ್ಕೆ ತರಬೇತಿ ನಿರತ ಮತ್ತು ಖಾಯಂ ಸೇರಿ 1900 ಕ್ಕೂ ಹೆಚ್ಚು ಸಾರಿಗೆ ನೌಕರರನ್ನು ಕರ್ತವ್ಯದಿಂದ ವಜಾ ಮಾಡಲಾಗಿತ್ತು. ಅಲ್ಲದೆ, 2900ಕ್ಕೂ ಹೆಚ್ಚು ಮಂದಿಯನ್ನು ಅಮಾನತು ಮಾಡಲಾಗಿತ್ತು.
ಈ ನಡುವೆ, ಮಂಗಳವಾರ ಸಾರ್ವಜನಿಕ ಹಿತಾಸಕ್ತಿ ದೂರಿನ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್ ಕೋವಿಡ್ ಸಂಕಷ್ಟದ ನಡುವೆ ಸಾರಿಗೆ ನೌಕರರು ಮುಷ್ಕರ ನಡೆಸುವುದು ಸರಿಯಲ್ಲ. ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಿತ್ತು. ಇದರಂತೆ ಬುಧವಾರ ಹೆಚ್ಚಿನ ಮಂದಿ ಸಾರಿಗೆ ಸಿಬಂದಿ ಕರ್ತವ್ಯಕ್ಕೆ ಹಾಜರಾಗಿದ್ದರು. ಈ ನಡುವೆ, ಅಮಾನತಾದ ಮತ್ತು ವಜಾ ಆಗಿರುವ ಸಿಬಂದಿ ಅತಂತ್ರಕ್ಕೆ ಸಿಲುಕಿದ್ದಾರೆ. ಅವರನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಬೇಕೆಂಬ ಬೇಡಿಕೆಯನ್ನೂ ಮುಂದಿರಿಸದೆ ಸಾರಿಗೆ ನೌಕರರ ಸಂಘದವರು ಮುಷ್ಕರ ಹಿಂಪಡೆದಿರುವುದು ಸಿಬಂದಿಯನ್ನು ಇಕ್ಕಟ್ಟಿಗೆ ಸಿಲುಕಿದ್ದಾರೆ.
The Karnataka State Road Transport Employees League called off its two-week-long strike on Wednesday a day after the Karnataka High Court observed that the workers of the state road transport corporations (RTCs) had chosen the "worst time to go on a strike" citing the pandemic.
08-08-25 06:23 pm
HK News Desk
Bigg Boss Rajath, Death Threats, Soujanya: ಯೂ...
08-08-25 11:20 am
ಸರ್ಕಾರಿ ಕೆಲಸ ಕೊಡಿಸೋದಾಗಿ 25 ಲಕ್ಷ ಪಡೆದು ವಂಚನೆ ;...
07-08-25 10:18 pm
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
08-08-25 11:10 pm
Mangalore Correspondent
SIT, Kalleri, Buried Schoolgirl, Dharmasthala...
08-08-25 09:25 pm
ಧರ್ಮಸ್ಥಳ ಸುದ್ದಿ ಪ್ರಸಾರ ನಿರ್ಬಂಧಕ್ಕೆ ಸುಪ್ರೀಂ ನಿ...
08-08-25 08:26 pm
Bjp, Mangalore: ಎಡಪಂಥೀಯರು ಧರ್ಮಸ್ಥಳ ಕ್ಷೇತ್ರಕ್ಕ...
08-08-25 08:05 pm
Mangalore Safest City; ಕಡಿಮೆ ಕ್ರೈಮ್ ರೇಟ್, ಮಹಿ...
08-08-25 05:54 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm