ಬ್ರೇಕಿಂಗ್ ನ್ಯೂಸ್
22-04-21 02:05 pm Headline Karnataka News Network ಕರ್ನಾಟಕ
ಬೆಂಗಳೂರು, ಎ.22: ಕೋವಿಡ್ ಸೋಂಕು ಪೀಡಿತರಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಅವರ ಕೋವಿಡ್ ನೆಗೆಟಿವ್ ರಿಪೋರ್ಟ್ ಬಂದಿದೆ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.

ಮಣಿಪಾಲ್ ಆಸ್ಪತ್ರೆಯ ವೈದ್ಯರು ಹೂಗುಚ್ಛ ಕೊಟ್ಟು ಮುಖ್ಯಮಂತ್ರಿ ಅವರನ್ನು ಕಳಿಸಿಕೊಟ್ಟಿದ್ದಾರೆ. ಹೊರಗೆ ಬಂದು ಕಾರಿನಲ್ಲಿ ತೆರಳುತ್ತಿದ್ದಾಗ ಮಾಧ್ಯಮಕ್ಕೆ ಮಾತನಾಡಿದ ಯಡಿಯೂರಪ್ಪ, ರಾಜ್ಯದ ಜನರಲ್ಲಿ ಮನವಿ ಮಾಡುತ್ತಿದ್ದೇನೆ. ದಯವಿಟ್ಟು ಮನೆಯಿಂದ ವಿನಾಕಾರಣ ಹೊರಗೆ ಬರಬೇಡಿ. ಆದಷ್ಟು ಒಳಗೇ ಇರಿ. ಹೊರಗೆ ಹೋಗುವಾಗ ಕಡ್ಡಾಯ ಮಾಸ್ಕ್ ಧರಿಸಿ, ಅಂತರವನ್ನು ಕಾಪಾಡಿ. ಕೋವಿಡ್ ಸೋಂಕು ಹರಡುವುದನ್ನು ತಪ್ಪಿಸಿ ಎಂದು ಹೇಳಿದ್ದಾರೆ.

ಬೆಳಗಾವಿ ಲೋಕಸಭೆ ಮತ್ತು ಇನ್ನೆರಡು ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ತೀವ್ರ ಬಳಲಿದ್ದ ಮುಖ್ಯಮಂತ್ರಿ ಕಳೆದ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದರು. ಪರೀಕ್ಷೆ ನಡೆಸಿದಾಗ, ಕೋವಿಡ್ ಸೋಂಕು ಕಂಡುಬಂದಿತ್ತು. ಒಂದು ವಾರದಲ್ಲಿ ಗುಣಮುಖರಾಗಿ ಹೊರಬಂದಿದ್ದಾರೆ. ಕಳೆದ ಬಾರಿ ಲಾಕ್ಡೌನ್ ಸಂದರ್ಭದಲ್ಲಿಯೂ ಮುಖ್ಯಮಂತ್ರಿ ಕೋವಿಡ್ ಸೋಂಕಿಗೆ ಒಳಗಾಗಿದ್ದರು. ಈ ಬಾರಿ ಎರಡನೇ ಬಾರಿಗೆ ಸೋಂಕಿಗೆ ತುತ್ತಾಗಿದ್ದರು.
ಕೋವಿಡ್ ಸೋಂಕಿಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಮುಖ್ಯಮಂತ್ರಿ @BSYBJPರವರು ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೊರೋನಾ ನಿಯಂತ್ರಿಸಲು ಮಾಸ್ಕ್ ಧಾರಣೆ, ಭೌತಿಕ ಅಂತರ, ಶುಚಿತ್ವ ಪಾಲನೆ ತಪ್ಪದೇ ಮಾಡಿ, ಅನಗತ್ಯವಾಗಿ ಹೊರಗೆ ಬರದೆ ಸರ್ಕಾರದೊಂದಿಗೆ ಸಹಕರಿಸಿ ಎಂದು ಮುಖ್ಯಮಂತ್ರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ pic.twitter.com/kQYMQyIcgO
— CM of Karnataka (@CMofKarnataka) April 22, 2021
Karnataka Chief Minister B S Yediyurappa was discharged from Bengaluru's Manipal Hospital after he recovered from Covid-19.
04-03-26 01:33 pm
HK News Staffer
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
ಬೆಂಗಳೂರಿನಲ್ಲಿ 10 ಕೋಟಿ ಮೌಲ್ಯದ ಬೃಹತ್ ಡ್ರಗ್ಸ್ ಪತ...
03-03-26 08:39 pm
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
04-03-26 12:58 pm
HK News Staffer
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
04-03-26 10:54 am
HK News Staffer
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm