ಬ್ರೇಕಿಂಗ್ ನ್ಯೂಸ್
22-04-21 09:37 pm Headline Karnataka News Network ಕರ್ನಾಟಕ
ಬೆಂಗಳೂರು: ಸರ್ಕಾರ ಏಕಾಏಕಿ ರಾಜ್ಯದಲ್ಲಿ ಕೊರೊನಾ ತಡೆಗೆ ಇಂದು ಪ್ರಕಟಿಸಿರುವ ಮಾರ್ಗಸೂಚಿ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ. ರಾಜ್ಯ ಸರ್ಕಾರ ತುಘಲಕ್ ಆಡಳಿತ ನಡೆಸುತ್ತಿದೆ ಎಂದು ಕಿಡಿಕಾರಿದ್ದಾರೆ.
ಆಸ್ಪತ್ರೆಯಿಂದಲೇ ಮಾತನಾಡಿದ ಅವರು, ಏಕಾಏಕಿ ಅಂಗಡಿ-ಮುಂಗಟ್ಟು ಮುಚ್ಚಿಸಲು ಅಧಿಕಾರ ಕೊಟ್ಟವರು ಯಾರು. ಮುಖ್ಯಮಂತ್ರಿಗಳು ಆಸ್ಪತ್ರೆಯಿಂದ ಮಧ್ಯಾಹ್ನ ಡಿಸ್ಚಾರ್ಜ್ ಆದ ನಂತರ ಸಚಿವರ ಸಭೆ ನಡೆಸಿದ ಬಳಿಕ ಮಾರ್ಗಸೂಚಿಗಳನ್ನು ಘೋಷಣೆ ಮಾಡದೆ ಮದ್ಯದ ಅಂಗಡಿಗಳನ್ನು ಬಿಟ್ಟು ಇತರೆ ಅಂಗಡಿಗಳನ್ನು ಮುಚ್ಚಿಸಲಾಗಿದೆ. ಅವರಿಗೆ ಬದಲಿ ವ್ಯವಸ್ಥೆ ಏನು ಮಾಡಿದ್ದೀರಾ. ಅಂಗಡಿಗಳಲ್ಲಿ ಕೆಲಸ ಮಾಡುವವರ ಪಾಡೇನು ಎಂದು ಪ್ರಶ್ನಿಸಿದರು.

ಮೊನ್ನೆ ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಲಾಕ್ಡೌನ್ ಮಾಡುವುದು ಒಳ್ಳೆಯದು. ಇದರಿಂದ ಕೋವಿಡ್ ನಿಯಂತ್ರಣ ಮಾಡಲು ಸಹಕಾರಿಯಾಗುತ್ತದೆ ಎಂದು ಸಲಹೆ ಕೊಟ್ಟಿದ್ದೆ.ಆದರೆ, ಪ್ರಧಾನಿಗಳ ಸಲಹೆ ಬಂದ ನಂತರ ಸರ್ಕಾರವೇ ಹಿಂದೆ ಸರಿದು ಈಗ ಅಂಗಡಿಗಳನ್ನು ಮುಚ್ಚಿಸಲಾಗಿದೆ. ಸರ್ಕಾರಕ್ಕೆ ದೂರದೃಷ್ಟಿ ಇಲ್ಲ. ತಿಳುವಳಿಕೆ, ಅನುಭವಸ್ಥರಿಂದ ಸಲಹೆ ಪಡೆಯದೇ, ಜನಸಾಮಾನ್ಯರ ಸಮಸ್ಯೆಗಳ ಬಗ್ಗೆ ಯೋಚಿಸದೇ ಈ ಕ್ರಮ ಕೈಗೊಂಡಿರುವುದು ಸರಿಯಲ್ಲ. ಇದರಿಂದ ಹಲವಾರು ಕುಟುಂಬಗಳು ಬೀದಿಗೆ ಬರುವ ಸ್ಥಿತಿ ನಿರ್ಮಾಣವಾಗುತ್ತದೆ.

ಆಕ್ಸಿಜನ್ ಕೊರತೆಯಿದೆ. ಬೆಡ್ ಸಮಸ್ಯೆ ಇದೆ. ಉನ್ನತಮಟ್ಟದ ಸಮಿತಿ ಸಭೆ ತೀರ್ಮಾನದ ಬಗ್ಗೆ ತಿಳಿಸಿ. ಬಯಲು ಪ್ರದೇಶಗಳಲ್ಲಿ ಶೆಡ್ಗಳನ್ನು ನಿರ್ಮಿಸಿ ವೈದ್ಯರ ತಂಡ ರಚಿಸುವ ಮೂಲಕ ಜನರ ಜೀವ ಉಳಿಸಬೇಕು ಎಂದು ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆಗಳನ್ನು ನೀಡಿದ್ದಾರೆ
Former CM H D Kumaraswamy Thursday criticised the B S Yediyurappa-led BJP government video statement recorded from a private hospital in Bengaluru, where he is admitted due to Covid-19.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm