ಬ್ರೇಕಿಂಗ್ ನ್ಯೂಸ್
24-04-21 09:47 am Headline Karnataka News Network ಕರ್ನಾಟಕ
ಬೆಂಗಳೂರು, ಏ. 24: ಕೊರೊನಾ ಸೋಂಕಿನ ಬೆನ್ನಲ್ಲೇ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ನಡೆಸಲು ಪದವಿಪೂರ್ವ ಶಿಕ್ಷಣ ಇಲಾಖೆ ಮುಂದಾಗಿದೆ.
ಪ್ರಾಯೋಗಿಕ ಪರೀಕ್ಷೆಗಳನ್ನು ಆಯಾ ಕಾಲೇಜಿನ ಹಂತದಲ್ಲಿಯೇ ನಡೆಸುವುದು.ಈ ಬಗ್ಗೆ ಪ್ರಾಂಶುಪಾಲರಿಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.

ಪ್ರತಿ ದಿನ ಪರೀಕ್ಷೆ ಮುಗಿದ ನಂತರ ತಮಗೆ ನಿಯೋಜಿಸಿದ ಪರೀಕ್ಷಾ ಕೇಂದ್ರದಲ್ಲಿ ಅಂಕಗಳನ್ನು ಆನ್ಲೈನ್ ಮೂಲಕ ನಮೂದಿಸಲು ಆಯಾ ಕಾಲೇಜಿನ ಸೂಕ್ತ ಮಾರ್ಗದರ್ಶನ ನೀಡುವುದು. ಏಪ್ರಿಲ್ 28 ರಿಂದ ಮೇ 18 ರವೆರೆಗೆ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಯಲಿದ್ದು, ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಕಾಲೇಜುಗಳಲ್ಲಿಯೇ ನಡೆಸಲು ತೀರ್ಮಾನಿಸಲಾಗಿದೆ.
ಸರ್ಕಾರದ ಆದೇಶದಂತೆ ವಾರಾಂತ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಹಿನ್ನೆಲೆ ಶನಿವಾರ ಹಾಗೂ ಭಾನುವಾರಗಳಂದು ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವಂತಿಲ್ಲ.

ಕೇಂದ್ರ ಕಚೇರಿ ವತಿಯಿಂದ ಪ್ರಾಯೋಗಿಕ ಪರೀಕ್ಷೆಯ ಆಯ್ದ ಉತ್ತರ ಪತ್ರಿಕೆಗಳನ್ನು ಪರಿಶೀಲಿಸಲಾಗುವುದು. ಏನಾದರೂ ಮೌಲ್ಯಮಾಪನದಲ್ಲಿ ಲೋಪಗಳು ಕಂಡು ಬಂದಲ್ಲಿ ಸಂಬಂಧಿಸಿದ ಪ್ರಾಂಶುಪಾಲರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು.
ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳ ಟೆಂಪರೇಚರ್ ಪರೀಕ್ಷಿಸಿ ಒಳಗೆ ಪ್ರವೇಶ ನೀಡಬೇಕು. ಈಗಾಗಲೇ ಪ್ರಾಯೋಗಿಕ ಪರೀಕ್ಷೆಯ ಲೇಖನ ಸಾಮಗ್ರಿಗಳನ್ನು ಜಿಲ್ಲಾ ಉಪನಿರ್ದೇಶಕರ ಕಚೇರಿಗೆ ಪೂರೈಸಲಾಗಿದೆ.

ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರುಗಳು ಇವುಗಳನ್ನು ಪಡೆದುಕೊಂಡು ತಮ್ಮ ಕೇಂದ್ರಕ್ಕೆ ಟ್ಯಾಗ್ ಆಗಿರುವ ಕಾಲೇಜುಗಳ ಪ್ರಾಂಶುಪಾಲರಿಗೆ ಆ ಕಾಲೇಜಿನ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಉತ್ತರ ಪತ್ರಿಕೆಗಳು ಮತ್ತು ಅಂಕಪಟ್ಟಿಯನ್ನು ನೀಡಿ ಪ್ರತಿದಿನ ಟ್ಯಾಗ್ ಆಗಿರುವ ಕಾಲೇಜುಗಳ ವಿವಿಧ ವಿಷಯಗಳ ಉಪನ್ಯಾಸಕರುಗಳು ಪ್ರಾಯೋಗಿಕ ಪರೀಕ್ಷಾ ಕೇಂದ್ರಕ್ಕೆ ಬಂದು ಅಂಕಗಳನ್ನು ನಮೂದಿಸಬೇಕು.

ನಾಮಿನಲ್ ರೋಲ್ ಮತ್ತು ಅಂಕ ಪಟ್ಟಿಯನ್ನು ನೀಡಿ ಪ್ರಾಯೋಗಿಕ ಪರೀಕ್ಷೆಯನ್ನು ತಮ್ಮ ಕಾಲೇಜು ಹಂತದಲ್ಲಿ ನಡೆಸಿ ಆಯಾ ದಿನದಂದೇ ಪ್ರಾಯೋಗಿಕ ಪರೀಕ್ಷಾ ಕೇಂದ್ರಕ್ಕೆ ಉತ್ತರ ಪತ್ರಿಕೆ ಮತ್ತು ಭರ್ತಿ ಮಾಡಿದ ಅಂಕ ಪಟ್ಟಿಗಳನ್ನು ಹಿಂದಿರುಗಿ ಆನ್ಲೈನ್ನಲ್ಲಿ ಪ್ರಾಯೋಗಿಕ ಪರೀಕ್ಷೆಯ ಅಂಕಗಳನ್ನು ನಮೂದಿಸಬೇಕು.
Karnataka 2nd PUC Time Table 2021 Preparatory Practical & Final Exam Date know more
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm