ಬ್ರೇಕಿಂಗ್ ನ್ಯೂಸ್
24-04-21 09:47 am Headline Karnataka News Network ಕರ್ನಾಟಕ
ಬೆಂಗಳೂರು, ಏ. 24: ಕೊರೊನಾ ಸೋಂಕಿನ ಬೆನ್ನಲ್ಲೇ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ನಡೆಸಲು ಪದವಿಪೂರ್ವ ಶಿಕ್ಷಣ ಇಲಾಖೆ ಮುಂದಾಗಿದೆ.
ಪ್ರಾಯೋಗಿಕ ಪರೀಕ್ಷೆಗಳನ್ನು ಆಯಾ ಕಾಲೇಜಿನ ಹಂತದಲ್ಲಿಯೇ ನಡೆಸುವುದು.ಈ ಬಗ್ಗೆ ಪ್ರಾಂಶುಪಾಲರಿಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.

ಪ್ರತಿ ದಿನ ಪರೀಕ್ಷೆ ಮುಗಿದ ನಂತರ ತಮಗೆ ನಿಯೋಜಿಸಿದ ಪರೀಕ್ಷಾ ಕೇಂದ್ರದಲ್ಲಿ ಅಂಕಗಳನ್ನು ಆನ್ಲೈನ್ ಮೂಲಕ ನಮೂದಿಸಲು ಆಯಾ ಕಾಲೇಜಿನ ಸೂಕ್ತ ಮಾರ್ಗದರ್ಶನ ನೀಡುವುದು. ಏಪ್ರಿಲ್ 28 ರಿಂದ ಮೇ 18 ರವೆರೆಗೆ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಯಲಿದ್ದು, ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಕಾಲೇಜುಗಳಲ್ಲಿಯೇ ನಡೆಸಲು ತೀರ್ಮಾನಿಸಲಾಗಿದೆ.
ಸರ್ಕಾರದ ಆದೇಶದಂತೆ ವಾರಾಂತ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಹಿನ್ನೆಲೆ ಶನಿವಾರ ಹಾಗೂ ಭಾನುವಾರಗಳಂದು ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವಂತಿಲ್ಲ.

ಕೇಂದ್ರ ಕಚೇರಿ ವತಿಯಿಂದ ಪ್ರಾಯೋಗಿಕ ಪರೀಕ್ಷೆಯ ಆಯ್ದ ಉತ್ತರ ಪತ್ರಿಕೆಗಳನ್ನು ಪರಿಶೀಲಿಸಲಾಗುವುದು. ಏನಾದರೂ ಮೌಲ್ಯಮಾಪನದಲ್ಲಿ ಲೋಪಗಳು ಕಂಡು ಬಂದಲ್ಲಿ ಸಂಬಂಧಿಸಿದ ಪ್ರಾಂಶುಪಾಲರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು.
ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳ ಟೆಂಪರೇಚರ್ ಪರೀಕ್ಷಿಸಿ ಒಳಗೆ ಪ್ರವೇಶ ನೀಡಬೇಕು. ಈಗಾಗಲೇ ಪ್ರಾಯೋಗಿಕ ಪರೀಕ್ಷೆಯ ಲೇಖನ ಸಾಮಗ್ರಿಗಳನ್ನು ಜಿಲ್ಲಾ ಉಪನಿರ್ದೇಶಕರ ಕಚೇರಿಗೆ ಪೂರೈಸಲಾಗಿದೆ.

ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರುಗಳು ಇವುಗಳನ್ನು ಪಡೆದುಕೊಂಡು ತಮ್ಮ ಕೇಂದ್ರಕ್ಕೆ ಟ್ಯಾಗ್ ಆಗಿರುವ ಕಾಲೇಜುಗಳ ಪ್ರಾಂಶುಪಾಲರಿಗೆ ಆ ಕಾಲೇಜಿನ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಉತ್ತರ ಪತ್ರಿಕೆಗಳು ಮತ್ತು ಅಂಕಪಟ್ಟಿಯನ್ನು ನೀಡಿ ಪ್ರತಿದಿನ ಟ್ಯಾಗ್ ಆಗಿರುವ ಕಾಲೇಜುಗಳ ವಿವಿಧ ವಿಷಯಗಳ ಉಪನ್ಯಾಸಕರುಗಳು ಪ್ರಾಯೋಗಿಕ ಪರೀಕ್ಷಾ ಕೇಂದ್ರಕ್ಕೆ ಬಂದು ಅಂಕಗಳನ್ನು ನಮೂದಿಸಬೇಕು.

ನಾಮಿನಲ್ ರೋಲ್ ಮತ್ತು ಅಂಕ ಪಟ್ಟಿಯನ್ನು ನೀಡಿ ಪ್ರಾಯೋಗಿಕ ಪರೀಕ್ಷೆಯನ್ನು ತಮ್ಮ ಕಾಲೇಜು ಹಂತದಲ್ಲಿ ನಡೆಸಿ ಆಯಾ ದಿನದಂದೇ ಪ್ರಾಯೋಗಿಕ ಪರೀಕ್ಷಾ ಕೇಂದ್ರಕ್ಕೆ ಉತ್ತರ ಪತ್ರಿಕೆ ಮತ್ತು ಭರ್ತಿ ಮಾಡಿದ ಅಂಕ ಪಟ್ಟಿಗಳನ್ನು ಹಿಂದಿರುಗಿ ಆನ್ಲೈನ್ನಲ್ಲಿ ಪ್ರಾಯೋಗಿಕ ಪರೀಕ್ಷೆಯ ಅಂಕಗಳನ್ನು ನಮೂದಿಸಬೇಕು.
Karnataka 2nd PUC Time Table 2021 Preparatory Practical & Final Exam Date know more
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm