ಬ್ರೇಕಿಂಗ್ ನ್ಯೂಸ್
25-08-20 09:55 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 25: ಕೋಲು ಮಂಡೆ ಜಂಗಮ ದೇವ ಜಾನಪದ ಹಾಡು ತಿರುಚಲಾಗಿದೆ ಹಾಗೂ ಹಾಡಿನಲ್ಲಿ ಅಶ್ಲೀಲತೆ ಇದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆ ಕನ್ನಡ ರ್ಯಾಪರ್ ಹಾಗೂ ಬಿಗ್ ಬಾಸ್ ವಿಜೇತ ಚಂದನ್ ಶೆಟ್ಟಿ ಜನತೆಯಲ್ಲಿ ಕ್ಷಮೆ ಕೇಳಿ, ಅಶ್ಲೀಲತೆ ಇರುವ ತುಣುಕನ್ನು ತೆಗೆದು ಹಾಕುವುದಾಗಿ ತಿಳಿಸಿದ್ದಾರೆ.
ಈ ಸಂಬಂಧ ವಿಡಿಯೋ ಮಾಡಿ ಸ್ಪಷ್ಟನೆ ಕೊಟ್ಟಿರುವ ಚಂದನ್, ಯಾರ ಭಾವನೆಗಳಿಗೂ ಧಕ್ಕೆ ಉಂಟು ಮಾಡಲು ಈ ಹಾಡನ್ನು ಮಾಡಿಲ್ಲ. ಈಗಿನ ಪೀಳಿಗೆಗೆ ನಮ್ಮ ಜಾನಪದ ತಲುಪಲಿ ಅನ್ನುವ ಕಾರಣಕ್ಕೆ ರ್ಯಾಪ್ ಹಾಡಿನ ರೂಪ ಕೊಟ್ಟಿದ್ದೆ. ಇದರಿಂದ ಯಾರಿಗಾದರೂ ಬೇಸರವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದಾರೆ. ಅಲ್ಲದೇ ಅಶ್ಲೀಲತೆ ಇರುವ ತುಣುಕನ್ನು ತೆಗೆದು ಮರು ಚಿತ್ರೀಕರಣ ಮಾಡುವುದಾಗಿ ತಿಳಿಸಿದ್ದಾರೆ.
ಗಣೇಶ ಹಬ್ಬದ ಹಿನ್ನೆಲೆ ‘ಕೋಲು ಮಂಡೆ ಜಂಗಮ ದೇವ’ ಎಂಬ ಹೊಸ ರ್ಯಾಪ್ ಸಾಂಗ್ ಅನ್ನು ಚಂದನ್ ಶೆಟ್ಟಿ ಯೂಟ್ಯೂಬ್ನಲ್ಲಿ ಬಿಡುಗಡೆ ಮಾಡಿದ್ದರು. ಆದರೆ, ಮಾದಪ್ಪನ ಗೀತೆಯನ್ನು ಅಶ್ಲೀಲವಾಗಿ ತೋರಿಸಿರುವ ಆರೋಪ ಚಂದನ್ ಶೆಟ್ಟಿ ವಿರುದ್ಧ ಕೇಳಿಬಂದಿತ್ತು.
ಶಿವಶರಣೆ ಸಂಕಮ್ಮನ ಬಗ್ಗೆ ಅಶ್ಲೀಲ ಪ್ರದರ್ಶಿಸಲಾಗಿದೆ ಮತ್ತು ಭಕ್ತಿ ಗೀತೆಯನ್ನು ತಿರುಚಲಾಗಿದೆ. ಈ ಮೂಲಕ ಮಾದಪ್ಪನ ಭಕ್ತರ ಧಾರ್ಮಿಕ ಮನೋಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಆ.23ರಂದು ಈ ವಿಡಿಯೋ ಬಿಡುಗಡೆಯಾಗಿತ್ತು. ಈಗಾಗಲೇ 36 ಲಕ್ಷಕ್ಕೂ ಅಧಿಕ ಮಂದಿ ಈ ಹಾಡನ್ನು ವೀಕ್ಷಿಸಿದ್ದಾರೆ. ಅಲ್ಲದೇ ಯೂಟ್ಯೂಬ್ನಲ್ಲಿ ನಂಬರ್ ಒನ್ ಟ್ರೆಂಡಿಂಗ್ ಆಗಿದೆ.
16-09-24 07:49 pm
HK News Desk
P Murthy, Ambedkar Sena, MLA Munirathna: ದಲಿತ...
15-09-24 05:33 pm
BJP, RSS: ರಾಜ್ಯ ಬಿಜೆಪಿಗೆ ಮತ್ತೆ ಸಂಘಟನಾ ಕಾರ್ಯದರ...
15-09-24 01:53 pm
Munirathan: ಗುತ್ತಿಗೆದಾರನಿಗೆ ಜಾತಿ ನಿಂದನೆ, ಲಂಚಕ...
15-09-24 12:47 pm
Nagamangala violence, Hemant Nimbalkar IPS: ನ...
13-09-24 09:10 pm
16-09-24 02:04 pm
HK News Desk
ಆರು ತಿಂಗಳು ಜೈಲಲ್ಲಿದ್ದರೂ, ಸಿಎಂ ಸ್ಥಾನ ಬಿಟ್ಟುಕೊಡ...
15-09-24 06:55 pm
ಪೋರ್ಟ್ ಬ್ಲೇರ್ ಇನ್ನು ಶ್ರೀವಿಜಯ ಪುರಂ ; ವಸಾಹತು ಶಾ...
14-09-24 09:46 pm
ವಯನಾಡು ದುರಂತದಲ್ಲಿ ಒಂದೇ ಕುಟುಂಬದ 9 ಮಂದಿ ಬಲಿ ; ಈ...
13-09-24 12:33 pm
ಅಬಕಾರಿ ನೀತಿ ಹಗರಣ ; 6 ತಿಂಗಳ ಬಳಿಕ ಸಿಎಂ ಕೇಜ್ರಿವಾ...
13-09-24 12:24 pm
16-09-24 11:02 pm
Mangalore Correspondent
ಆ್ಯಪಲ್ ಐಫೋನಲ್ಲಿ ಸಮಸ್ಯೆ ; ಸರ್ವಿಸ್ ಸೆಂಟರ್ ಅಸಡ್...
16-09-24 10:57 pm
Mangalore, Liver transplantation, Archana: ಆ...
16-09-24 09:12 pm
ಜಾಗತಿಕ ತಾಪಮಾನದಿಂದ ಅತಿ ಉಷ್ಣತೆ ಮತ್ತು ಮಳೆ ಹೆಚ್ಚಳ...
16-09-24 09:09 pm
ಸೆ.18ರಂದು ಬಿಗ್ ಸಿನೆಮಾಸ್ ನಲ್ಲಿ “ಇನ್ನೊವೇಶನ್ ಸಮ್...
16-09-24 06:30 pm
15-09-24 01:21 pm
Bangalore Correspondent
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am
Kristina Joksimovic, Miss Switzerland finalis...
13-09-24 10:50 pm
Mangalore crime, Bantwal Bank: ಬ್ಯಾಂಕ್ ಕಚೇರಿಯ...
13-09-24 09:08 pm