ಅತೀವೃಷ್ಟಿ ಹಾನಿ ಕುರಿತು ಸಿಎಂ ವೈಮಾನಿಕ ಸಮೀಕ್ಷೆ

25-08-20 10:05 pm       Headline Karnataka News Network   ಕರ್ನಾಟಕ

ರಾಜ್ಯದಲ್ಲಿ ಧಾರಾಕಾರ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿರೋ ಜಿಲ್ಲೆಗಳಿಗೆ ಇಂದು  ಸಿಎಂ ಬಿ‌.ಎಸ್.ಯಡಿಯೂರಪ್ಪ ಭೇಟಿ ನೀಡಿದ್ದಾರೆ.

ಆಗಸ್ಟ್ 25: ರಾಜ್ಯದಲ್ಲಿ ಧಾರಾಕಾರ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿರೋ ಜಿಲ್ಲೆಗಳಿಗೆ ಇಂದು ಸಿಎಂ ಬಿ‌.ಎಸ್.ಯಡಿಯೂರಪ್ಪ ಭೇಟಿ ನೀಡಿದ್ದಾರೆ. ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಯಲ್ಲಿ ಅತೀವೃಷ್ಟಿಯಿಂದ ಆಗಿರುವ ಹಾನಿಯ ಬಗ್ಗೆ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ನಡೆಸಿದ್ರು.

ಇದೇ ವೇಳೆ ಕಂದಾಯ ಸಚಿವ ಆರ್.ಅಶೋಕ್, ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಕೂಡ ಜೊತೆಗಿದ್ದರು. ಬಳಿಕ ಆಲಮಟ್ಟಿ ಜಲಾಶಯಕ್ಕೆ ತೆರಳಿದ ಸಿಎಂ, ಕೃಷ್ಣಾ ನದಿಗೆ ಬಾಗಿನ ಅರ್ಪಣೆ ಮಾಡಿದ್ರು.