ಬ್ರೇಕಿಂಗ್ ನ್ಯೂಸ್
26-04-21 01:53 pm Headline Karnataka News Network ಕರ್ನಾಟಕ
Photo credits : Prajavaani
ಬೆಂಗಳೂರು,ಏ. 26: ಸಂಪೂರ್ಣ ಹವಾನಿಯಂತ್ರಿತ ಸೌಲಭ್ಯ ಹೊಂದಿರುವ ದೇಶದ ಮೊದಲ ರೈಲು ನಿಲ್ದಾಣ ಎಂಬ ಹಿರಿಮೆಗೆ ಪಾತ್ರವಾಗಿರುವ ನಗರದ ಬೈಯಪ್ಪನಹಳ್ಳಿಯಲ್ಲಿರುವ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಒಂದೇ ಮಳೆಗೆ ಅರ್ಧದಷ್ಟು ಮುಳುಗಿ ಹೋಗಿದೆ.
₹314 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ನಿಲ್ದಾಣ ಉದ್ಘಾಟನೆಗೆ ಸಿದ್ಧವಾಗಿದೆ. ಆದರೆ, ಕಳೆದ ಶುಕ್ರವಾರ ರಾತ್ರಿ ಸುರಿದ ಮಳೆಗೆ ನಿಲ್ದಾಣದ ಚಾವಣಿಗಳಲ್ಲಿ ನೀರು ಸೋರಿದೆ. ಅಲ್ಲದೆ, ನಿಲ್ದಾಣದೊಳಗೆ ಪ್ಲಾಟ್ಫಾರಂ 1 ಮತ್ತು 7ನ್ನು ಸಂಪರ್ಕಿಸಲು ನಿರ್ಮಿಸಲಾಗಿರುವ ಸುರಂಗ ಮಾರ್ಗದಲ್ಲಿ ಎರಡು ಅಡಿಗಿಂತ ಹೆಚ್ಚು ಎತ್ತರದಲ್ಲಿ ನೀರು ನಿಂತಿದೆ’ ಎಂದು ಸ್ಥಳೀಯರೊಬ್ಬರು ಹೇಳಿದರು.

‘ವಿಶ್ವದರ್ಜೆಯ ನಿಲ್ದಾಣ ಇದಾಗಿರಲಿದೆ ಎಂಬ ಆಶಾಭಾವ ನಮ್ಮದಾಗಿತ್ತು. ಆದರೆ, ಒಂದೇ ಮಳೆಗೆ ನಿಲ್ದಾಣದ ಕಳಪೆ ಗುಣಮಟ್ಟದ ಅನಾವರಣವಾಗಿದೆ‘ ಎಂದರು.
ಸಿಬ್ಬಂದಿ ಕರೆಸಿ ನೀರನ್ನೆಲ್ಲ ಹೊರ ಹಾಕಲಾಗಿದೆ. ನೀರು ಸೋರಿಕೆಗೆ ಕಾರಣ ಏನು ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುವುದು’ ಎಂದು ಅಧಿಕಾರಿಯೊಬ್ಬರು ಹೇಳಿದರು.

‘ಚಾವಣಿ ಎಲ್ಲ ಸೋರಿಕೆಯಾಗಿದೆ ಎಂಬುದು ಸುಳ್ಳು. ಸುರಂಗ ಅಥವಾ ಸಬ್ವೇದಲ್ಲಿ ನೀರು ಹರಿದಿದೆ. ಮಳೆ ನೀರು ಸಂಗ್ರಹ ವ್ಯವಸ್ಥೆ ಮಾಡಲಾಗಿದ್ದು, ಈ ಕಾಮಗಾರಿ ಅಂತಿಮ ಹಂತದಲ್ಲಿದೆ. ಮುಂದೆ ಎಂತಹ ಮಳೆ ಬಂದರೂ ನೀರು ಸರಾಗವಾಗಿ ಹರಿದು ಹೋಗಿ ಸಂಗ್ರಹವಾಗುತ್ತದೆ. ನಿಲ್ದಾಣದಲ್ಲಿ ಮಳೆ ನೀರು ನಿಲ್ಲುವುದಿಲ್ಲ’ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ್ ಹೆಗ್ಡೆ ಮಾಧ್ಯಮಗಳಿಗೆ ತಿಳಿಸಿದರು.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 09:04 pm
Mangalore Correspondent
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm