ಬ್ರೇಕಿಂಗ್ ನ್ಯೂಸ್
26-04-21 01:53 pm Headline Karnataka News Network ಕರ್ನಾಟಕ
Photo credits : Prajavaani
ಬೆಂಗಳೂರು,ಏ. 26: ಸಂಪೂರ್ಣ ಹವಾನಿಯಂತ್ರಿತ ಸೌಲಭ್ಯ ಹೊಂದಿರುವ ದೇಶದ ಮೊದಲ ರೈಲು ನಿಲ್ದಾಣ ಎಂಬ ಹಿರಿಮೆಗೆ ಪಾತ್ರವಾಗಿರುವ ನಗರದ ಬೈಯಪ್ಪನಹಳ್ಳಿಯಲ್ಲಿರುವ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಒಂದೇ ಮಳೆಗೆ ಅರ್ಧದಷ್ಟು ಮುಳುಗಿ ಹೋಗಿದೆ.
₹314 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ನಿಲ್ದಾಣ ಉದ್ಘಾಟನೆಗೆ ಸಿದ್ಧವಾಗಿದೆ. ಆದರೆ, ಕಳೆದ ಶುಕ್ರವಾರ ರಾತ್ರಿ ಸುರಿದ ಮಳೆಗೆ ನಿಲ್ದಾಣದ ಚಾವಣಿಗಳಲ್ಲಿ ನೀರು ಸೋರಿದೆ. ಅಲ್ಲದೆ, ನಿಲ್ದಾಣದೊಳಗೆ ಪ್ಲಾಟ್ಫಾರಂ 1 ಮತ್ತು 7ನ್ನು ಸಂಪರ್ಕಿಸಲು ನಿರ್ಮಿಸಲಾಗಿರುವ ಸುರಂಗ ಮಾರ್ಗದಲ್ಲಿ ಎರಡು ಅಡಿಗಿಂತ ಹೆಚ್ಚು ಎತ್ತರದಲ್ಲಿ ನೀರು ನಿಂತಿದೆ’ ಎಂದು ಸ್ಥಳೀಯರೊಬ್ಬರು ಹೇಳಿದರು.

‘ವಿಶ್ವದರ್ಜೆಯ ನಿಲ್ದಾಣ ಇದಾಗಿರಲಿದೆ ಎಂಬ ಆಶಾಭಾವ ನಮ್ಮದಾಗಿತ್ತು. ಆದರೆ, ಒಂದೇ ಮಳೆಗೆ ನಿಲ್ದಾಣದ ಕಳಪೆ ಗುಣಮಟ್ಟದ ಅನಾವರಣವಾಗಿದೆ‘ ಎಂದರು.
ಸಿಬ್ಬಂದಿ ಕರೆಸಿ ನೀರನ್ನೆಲ್ಲ ಹೊರ ಹಾಕಲಾಗಿದೆ. ನೀರು ಸೋರಿಕೆಗೆ ಕಾರಣ ಏನು ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುವುದು’ ಎಂದು ಅಧಿಕಾರಿಯೊಬ್ಬರು ಹೇಳಿದರು.

‘ಚಾವಣಿ ಎಲ್ಲ ಸೋರಿಕೆಯಾಗಿದೆ ಎಂಬುದು ಸುಳ್ಳು. ಸುರಂಗ ಅಥವಾ ಸಬ್ವೇದಲ್ಲಿ ನೀರು ಹರಿದಿದೆ. ಮಳೆ ನೀರು ಸಂಗ್ರಹ ವ್ಯವಸ್ಥೆ ಮಾಡಲಾಗಿದ್ದು, ಈ ಕಾಮಗಾರಿ ಅಂತಿಮ ಹಂತದಲ್ಲಿದೆ. ಮುಂದೆ ಎಂತಹ ಮಳೆ ಬಂದರೂ ನೀರು ಸರಾಗವಾಗಿ ಹರಿದು ಹೋಗಿ ಸಂಗ್ರಹವಾಗುತ್ತದೆ. ನಿಲ್ದಾಣದಲ್ಲಿ ಮಳೆ ನೀರು ನಿಲ್ಲುವುದಿಲ್ಲ’ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ್ ಹೆಗ್ಡೆ ಮಾಧ್ಯಮಗಳಿಗೆ ತಿಳಿಸಿದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm