ಬ್ರೇಕಿಂಗ್ ನ್ಯೂಸ್
26-04-21 01:53 pm Headline Karnataka News Network ಕರ್ನಾಟಕ
Photo credits : Prajavaani
ಬೆಂಗಳೂರು,ಏ. 26: ಸಂಪೂರ್ಣ ಹವಾನಿಯಂತ್ರಿತ ಸೌಲಭ್ಯ ಹೊಂದಿರುವ ದೇಶದ ಮೊದಲ ರೈಲು ನಿಲ್ದಾಣ ಎಂಬ ಹಿರಿಮೆಗೆ ಪಾತ್ರವಾಗಿರುವ ನಗರದ ಬೈಯಪ್ಪನಹಳ್ಳಿಯಲ್ಲಿರುವ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಒಂದೇ ಮಳೆಗೆ ಅರ್ಧದಷ್ಟು ಮುಳುಗಿ ಹೋಗಿದೆ.
₹314 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ನಿಲ್ದಾಣ ಉದ್ಘಾಟನೆಗೆ ಸಿದ್ಧವಾಗಿದೆ. ಆದರೆ, ಕಳೆದ ಶುಕ್ರವಾರ ರಾತ್ರಿ ಸುರಿದ ಮಳೆಗೆ ನಿಲ್ದಾಣದ ಚಾವಣಿಗಳಲ್ಲಿ ನೀರು ಸೋರಿದೆ. ಅಲ್ಲದೆ, ನಿಲ್ದಾಣದೊಳಗೆ ಪ್ಲಾಟ್ಫಾರಂ 1 ಮತ್ತು 7ನ್ನು ಸಂಪರ್ಕಿಸಲು ನಿರ್ಮಿಸಲಾಗಿರುವ ಸುರಂಗ ಮಾರ್ಗದಲ್ಲಿ ಎರಡು ಅಡಿಗಿಂತ ಹೆಚ್ಚು ಎತ್ತರದಲ್ಲಿ ನೀರು ನಿಂತಿದೆ’ ಎಂದು ಸ್ಥಳೀಯರೊಬ್ಬರು ಹೇಳಿದರು.

‘ವಿಶ್ವದರ್ಜೆಯ ನಿಲ್ದಾಣ ಇದಾಗಿರಲಿದೆ ಎಂಬ ಆಶಾಭಾವ ನಮ್ಮದಾಗಿತ್ತು. ಆದರೆ, ಒಂದೇ ಮಳೆಗೆ ನಿಲ್ದಾಣದ ಕಳಪೆ ಗುಣಮಟ್ಟದ ಅನಾವರಣವಾಗಿದೆ‘ ಎಂದರು.
ಸಿಬ್ಬಂದಿ ಕರೆಸಿ ನೀರನ್ನೆಲ್ಲ ಹೊರ ಹಾಕಲಾಗಿದೆ. ನೀರು ಸೋರಿಕೆಗೆ ಕಾರಣ ಏನು ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುವುದು’ ಎಂದು ಅಧಿಕಾರಿಯೊಬ್ಬರು ಹೇಳಿದರು.

‘ಚಾವಣಿ ಎಲ್ಲ ಸೋರಿಕೆಯಾಗಿದೆ ಎಂಬುದು ಸುಳ್ಳು. ಸುರಂಗ ಅಥವಾ ಸಬ್ವೇದಲ್ಲಿ ನೀರು ಹರಿದಿದೆ. ಮಳೆ ನೀರು ಸಂಗ್ರಹ ವ್ಯವಸ್ಥೆ ಮಾಡಲಾಗಿದ್ದು, ಈ ಕಾಮಗಾರಿ ಅಂತಿಮ ಹಂತದಲ್ಲಿದೆ. ಮುಂದೆ ಎಂತಹ ಮಳೆ ಬಂದರೂ ನೀರು ಸರಾಗವಾಗಿ ಹರಿದು ಹೋಗಿ ಸಂಗ್ರಹವಾಗುತ್ತದೆ. ನಿಲ್ದಾಣದಲ್ಲಿ ಮಳೆ ನೀರು ನಿಲ್ಲುವುದಿಲ್ಲ’ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ್ ಹೆಗ್ಡೆ ಮಾಧ್ಯಮಗಳಿಗೆ ತಿಳಿಸಿದರು.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm