ಬ್ರೇಕಿಂಗ್ ನ್ಯೂಸ್
28-04-21 11:04 am Headline Karnataka News Network ಕರ್ನಾಟಕ
ನವದೆಹಲಿ,ಎ.28: ಐಎಂಎ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ, ಕರ್ನಾಟಕದ ಮಾಜಿ ಸಚಿವ ರೋಷನ್ ಬೇಗ್ ವಿರುದ್ಧ ಮಂಗಳವಾರ ಪೂರಕ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಐಎಂಎ ನಿಧಿಯಿಂದ ಅಕ್ರಮವಾಗಿ ಪಡೆದ ಹಣವನ್ನು ವಿಧಾನಸಭೆ ಚುನಾವಣೆಗೆ ಬಳಸಿದ್ದಾಗಿ ದೂರಿದೆ.
ಐಎಂಎ ಗ್ರೂಪ್ನ ವ್ಯವಸ್ಥಾಪಕ ನಿರ್ದೇಶಕ ಮನ್ಸೂರ್ ಖಾನ್ ಹಾಗೂ ಅವರ ಸಂಸ್ಥೆ, ಬೇಗ್ ಒಡೆತನದ ದಾನೀಶ್ ಪಬ್ಲಿಕೇಶನ್ಸ್ ಸಂಸ್ಥೆಗಳ ಹೆಸರನ್ನೂ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.
ರೋಷನ್ ಬೇಗ್ ಅವರು ವಿಧಾನಸಭೆ ಚುನಾವಣೆಯ ವೆಚ್ಚಕ್ಕಾಗಿ ಐಎಂಎ ನಿಧಿಯಿಂದ ಹಲವು ಕೋಟಿ ರೂಪಾಯಿಗಳನ್ನು ಪಡೆದಿದ್ದಾರೆ. ಅವರು ತಮ್ಮ ಸಂಸ್ಥೆಯ ನೌಕರರ ವೇತನ ಸೇರಿದಂತೆ ದಿನನಿತ್ಯದ ಖರ್ಚಿಗೆ ಈ ಹಣವನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ.

ಆರೋಪಿಯು ಜನಪ್ರಿಯತೆ ಹೆಚ್ಚಿಸಿಕೊಳ್ಳಲು ತನ್ನ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಸಾಮಾಜಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಇದೇ ಹಣವನ್ನು ವ್ಯಯಿಸಿದ್ದಾಗಿ ಆರೋಪಿಸಲಾಗಿದೆ ಎಂದು ಸಿಬಿಐ ವಕ್ತಾರ ಆರ್.ಸಿ. ಜೋಶಿ ತಿಳಿಸಿದ್ದಾರೆ.
ತನ್ನ ಅಕ್ರಮ ಚಟುವಟಿಕೆಗಳನ್ನು ಸುಲಭವಾಗಿ ಮುಂದುವರೆಸುವ ಉದ್ದೇಶದಿಂದ ಸಿದ್ದರಾಮಯ್ಯ ನೇತೃತ್ವದ ಅಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದ ಬೇಗ್ ಅವರಿಗೆ ಐಎಂಎ ಗ್ರೂಪ್ ಈ ಹಣವನ್ನು ನೀಡಿತ್ತು ಎಂದು ಸಿಬಿಐ ದೂರಿದೆ.
ಹೂಡಿಕೆಗೆ ಉತ್ತಮ ಲಾಭ ನೀಡುವುದಾಗಿ ಆಮಿಷ ಒಡ್ಡಿ ಅಂದಾಜು ಒಂದು ಲಕ್ಷಕ್ಕೂ ಅಧಿಕ ಹೂಡಿಕೆದಾರರಿಂದ ₹4,000 ಕೋಟಿಯಷ್ಟು ಹಣವನ್ನು ಐಎಂಎ ಗ್ರೂಪ್ ಸಂಗ್ರಹಿಸಿದೆ. ಹಗರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕವಾದ 4 ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಸಿಬಿಐ, ಈ ಹಿಂದೆಯೇ ಮನ್ಸೂರ್ ಖಾನ್, ಅವರ ಕಂಪನಿಯ ನಿರ್ದೇಶಕರು, ಕಂದಾಯ ಮತ್ತು ಪೊಲೀಸ್ ಅಧಿಕಾರಿಗಳು ಸೇರಿದಂತೆ 33 ಆರೋಪಿಗಳ ವಿರುದ್ಧ 3 ದೋಷಾರೋಪ ಪಟ್ಟಿ ಹಾಗೂ 3 ಪೂರಕ ದೋಷಾರೋಪ ಪಟ್ಟಿ ಸಲ್ಲಿಸಿದೆ.
The Central Bureau of Investigation (CBI) on Tuesday filed a supplementary charge sheet against former Congress Minister Roshan Baig in connection with the I Monetary Advisory (IMA) investment scam.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm