ಬ್ರೇಕಿಂಗ್ ನ್ಯೂಸ್
28-04-21 11:04 am Headline Karnataka News Network ಕರ್ನಾಟಕ
ನವದೆಹಲಿ,ಎ.28: ಐಎಂಎ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ, ಕರ್ನಾಟಕದ ಮಾಜಿ ಸಚಿವ ರೋಷನ್ ಬೇಗ್ ವಿರುದ್ಧ ಮಂಗಳವಾರ ಪೂರಕ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಐಎಂಎ ನಿಧಿಯಿಂದ ಅಕ್ರಮವಾಗಿ ಪಡೆದ ಹಣವನ್ನು ವಿಧಾನಸಭೆ ಚುನಾವಣೆಗೆ ಬಳಸಿದ್ದಾಗಿ ದೂರಿದೆ.
ಐಎಂಎ ಗ್ರೂಪ್ನ ವ್ಯವಸ್ಥಾಪಕ ನಿರ್ದೇಶಕ ಮನ್ಸೂರ್ ಖಾನ್ ಹಾಗೂ ಅವರ ಸಂಸ್ಥೆ, ಬೇಗ್ ಒಡೆತನದ ದಾನೀಶ್ ಪಬ್ಲಿಕೇಶನ್ಸ್ ಸಂಸ್ಥೆಗಳ ಹೆಸರನ್ನೂ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.
ರೋಷನ್ ಬೇಗ್ ಅವರು ವಿಧಾನಸಭೆ ಚುನಾವಣೆಯ ವೆಚ್ಚಕ್ಕಾಗಿ ಐಎಂಎ ನಿಧಿಯಿಂದ ಹಲವು ಕೋಟಿ ರೂಪಾಯಿಗಳನ್ನು ಪಡೆದಿದ್ದಾರೆ. ಅವರು ತಮ್ಮ ಸಂಸ್ಥೆಯ ನೌಕರರ ವೇತನ ಸೇರಿದಂತೆ ದಿನನಿತ್ಯದ ಖರ್ಚಿಗೆ ಈ ಹಣವನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ.
ಆರೋಪಿಯು ಜನಪ್ರಿಯತೆ ಹೆಚ್ಚಿಸಿಕೊಳ್ಳಲು ತನ್ನ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಸಾಮಾಜಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಇದೇ ಹಣವನ್ನು ವ್ಯಯಿಸಿದ್ದಾಗಿ ಆರೋಪಿಸಲಾಗಿದೆ ಎಂದು ಸಿಬಿಐ ವಕ್ತಾರ ಆರ್.ಸಿ. ಜೋಶಿ ತಿಳಿಸಿದ್ದಾರೆ.
ತನ್ನ ಅಕ್ರಮ ಚಟುವಟಿಕೆಗಳನ್ನು ಸುಲಭವಾಗಿ ಮುಂದುವರೆಸುವ ಉದ್ದೇಶದಿಂದ ಸಿದ್ದರಾಮಯ್ಯ ನೇತೃತ್ವದ ಅಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದ ಬೇಗ್ ಅವರಿಗೆ ಐಎಂಎ ಗ್ರೂಪ್ ಈ ಹಣವನ್ನು ನೀಡಿತ್ತು ಎಂದು ಸಿಬಿಐ ದೂರಿದೆ.
ಹೂಡಿಕೆಗೆ ಉತ್ತಮ ಲಾಭ ನೀಡುವುದಾಗಿ ಆಮಿಷ ಒಡ್ಡಿ ಅಂದಾಜು ಒಂದು ಲಕ್ಷಕ್ಕೂ ಅಧಿಕ ಹೂಡಿಕೆದಾರರಿಂದ ₹4,000 ಕೋಟಿಯಷ್ಟು ಹಣವನ್ನು ಐಎಂಎ ಗ್ರೂಪ್ ಸಂಗ್ರಹಿಸಿದೆ. ಹಗರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕವಾದ 4 ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಸಿಬಿಐ, ಈ ಹಿಂದೆಯೇ ಮನ್ಸೂರ್ ಖಾನ್, ಅವರ ಕಂಪನಿಯ ನಿರ್ದೇಶಕರು, ಕಂದಾಯ ಮತ್ತು ಪೊಲೀಸ್ ಅಧಿಕಾರಿಗಳು ಸೇರಿದಂತೆ 33 ಆರೋಪಿಗಳ ವಿರುದ್ಧ 3 ದೋಷಾರೋಪ ಪಟ್ಟಿ ಹಾಗೂ 3 ಪೂರಕ ದೋಷಾರೋಪ ಪಟ್ಟಿ ಸಲ್ಲಿಸಿದೆ.
The Central Bureau of Investigation (CBI) on Tuesday filed a supplementary charge sheet against former Congress Minister Roshan Baig in connection with the I Monetary Advisory (IMA) investment scam.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm