ಬ್ರೇಕಿಂಗ್ ನ್ಯೂಸ್
02-05-21 10:59 am Bangalore Correspondent ಕರ್ನಾಟಕ
ಬೆಂಗಳೂರು, ಮೇ 2: ಕಳೆದ ಐದಾರು ದಿನಗಳಿಂದ ಚಾಲ್ತಿಯಲ್ಲಿರುವ ಕೊರೊನಾ ಎರಡನೇ ಅಲೆಯ ಲಾಕ್ ಡೌನ್ ನಲ್ಲಿ ಮತ್ತೊಂದು ಬದಲಾವಣೆಯನ್ನು ಮಾಡಿ ಕರ್ನಾಟಕ ಸರಕಾರ ಆದೇಶ ಹೊರಡಿಸಿದೆ.
ಕೊರೊನಾ ಹಾವಳಿಯ ನಂತರ ಹೊರಡಿಸುವ ಮಾರ್ಗಸೂಚಿಯ ಮೇಲೆ ನಿಂತುಕೊಳ್ಳುವಲ್ಲಿ ಸತತವಾಗಿ ವಿಫಲರಾಗುತ್ತಿರುವ ಯಡಿಯೂರಪ್ಪನವರ ಸರಕಾರದ ವಿರುದ್ದ ಜನಸಾಮಾನ್ಯರ ಲೇವಡಿ ಮುಂದುವರಿಯುತ್ತಲೇ ಇದೆ.

ಹೊಸ ಸೋಂಕಿತರ ಸಂಖ್ಯೆ ಒಂದೇ ಸಮನೆ ಜಾಸ್ತಿಯಾಗುತ್ತಿರುವ ಈ ಸಮಯದಲ್ಲಿ, ಸಾರ್ವಜನಿಕರ ಸಹಕಾರ ದಿನದಿಂದ ದಿನಕ್ಕೆ ಕಮ್ಮಿಯಾಗುತ್ತಿದೆ. ಲಾಕ್ ಡೌನ್ ಮೊದಲ ದಿನದಲ್ಲಿ ಸಾರ್ವಜನಿಕರು ಮನೆಯಿಂದ ಹೊರಗೆ ಬರುವುದು ಕಮ್ಮಿಯಿತ್ತು, ಬರಬರುತ್ತಾ ಅದು ನಿಯಂತ್ರಣ ತಪ್ಪುತ್ತಿದೆ.
ಯಾಕೋ ಏನೋ, ಕೊರೊನಾ ನಿರ್ವಹಣೆಯನ್ನು ಕೈಚೆಲ್ಲಿದಂತೆ ಕಾಣುತ್ತಿರುವ ಯಡಿಯೂರಪ್ಪನವರಿಗೆ ಸೂಕ್ತ ಐಎಎಸ್/ಐಪಿಎಸ್ ಅಧಿಕಾರಿಗಳ ಸಮಯೋಚಿತ ಸಲಹೆಗಳ ಕೊರತೆ ಕಾಡುತ್ತಿದೆಯಾ ಎನ್ನುವ ಪ್ರಶ್ನೆ ಏಳಲಾರಂಭಿಸಿದೆ. ಇದು ಹೌದೇ ಆದಲ್ಲಿ, ಇಂತಹ ಗಂಭೀರ ಆರೋಗ್ಯ ತುರ್ತು ಪರಿಸ್ಥಿತ ವೇಳೆ ಸಿಎಂ ಇದನ್ನು ಸರಿದಾರಿಗೆ ತರಬೇಕಾಗಿದೆ.

ಗಾರ್ಮೆಂಟ್ಸ್ ವಲಯದಿಂದ ತೀವ್ರ ಒತ್ತಡ ಬಂದ ನಂತರ ಇದರಲ್ಲಿ ಬದಲಾವಣೆ;
ಆರ್ಥಿಕ ಚಟುವಟಿಕೆಗಳಿಗೆ ತೊಂದರೆ ಬರಬಾರದು ಎನ್ನುವ ಕಾರಣಕ್ಕಾಗಿ ಕೈಗಾರಿಕೆ ಯಥಾಸ್ಥಿತಿ ಮುಂದುವರಿಸಲು ಸರಕಾರ ಅನುಮೋದನೆ ನೀಡಿತು. ಆದರೆ, ಇದರಲ್ಲಿ ಗಾರ್ಮೆಂಟ್ಸ್ ವಲಯವನ್ನು ಕೈಬಿಟ್ಟಿತು. ಗಾರ್ಮೆಂಟ್ಸ್ ವಲಯದಿಂದ ತೀವ್ರ ಒತ್ತಡ ಬಂದ ನಂತರ ಇದರಲ್ಲಿ ಬದಲಾವಣೆಯನ್ನು ಮಾಡಿ ಶೇ. 50 ನೌಕರರು ಕೆಲಸ ಮಾಡಲು ಅನುಮತಿ ನೀಡಿತು. ಇದು ಮಾರ್ಗಸೂಚಿಯ ಮೊದಲನೇ ಬದಲಾವಣೆ.

ಎರಡನೇ ಬದಲಾವಣೆ ಹಾಲು ಮಾರಾಟದ ಸಮಯದ ಅವಧಿ;
ಎರಡನೇ ಬದಲಾವಣೆ ಹಾಲು ಮಾರಾಟದ ಸಮಯದ ಅವಧಿಯಲ್ಲಿ. ಲಾಕ್ ಡೌನ್ ಆರಂಭವಾದಗ ಬೆಳಗ್ಗೆ ಆರರಿಂದ ಹತ್ತರವರೆಗೆ ಮಾತ್ರ ಅವಕಾಶ ನೀಡಲಾಗಿತ್ತು. ಜನಸಾಮಾನ್ಯರಿಗೆ ಇದರಿಂದ ತೊಂದರೆ ಎನ್ನುವುದಕ್ಕಿಂತ ಹಾಲು ಉತ್ಪನ್ನಗಳು ತುಂಬಾ ವೇಸ್ಟ್ ಆಗುತ್ತಿರುವುದರಿಂದ ಸಮಯದಲ್ಲಿ ಸರಕಾರ ಬದಲಾವಣೆ ಮಾಡಿತು. ಈಗ, ಬೆಳಗ್ಗೆ ಆರರಿಂದ ರಾತ್ರಿ ಎಂಟರವರೆಗೆ ಮಾರಾಟ ಮಾಡಲು ಅನುಮತಿ ನೀಡಲಾಗಿದೆ.

ದಿನಸಿ ಅಂಗಡಿಗಳ ಸಮಯದಲ್ಲಿ ಬದಲಾವಣೆ ಮಾಡಿದ ಸರಕಾರ;
ಮೂರನೇ ಬದಲಾವಣೆ ಎಂದರೆ ದಿನಸಿ ಅಂಗಡಿಗಳ ಸಮಯದಲ್ಲಿ. ಬೆಳಗ್ಗೆ ಆರರಿಂದ ಹತ್ತರವರೆಗೆ ಇದ್ದ ಸಮಯವನ್ನು ಈಗ ಮಧ್ಯಾಹ್ನ ಹನ್ನೆರಡು ಗಂಟೆಯವರೆಗೆ ವಿಸ್ತರಿಸಲಾಗಿದೆ. ಇದರ ಜೊತೆಗೆ ಎಪಿಎಂಸಿ ಅಂಗಡಿಗಳೂ ಹನ್ನೆರಡು ಗಂಟೆಯವರೆಗೆ ಓಪನ್ ಮಾಡಬಹುದಾಗಿದೆ.

ತಳ್ಳುಗಾಡಿ ಮೂಲಕ ಹಣ್ಣು ತರಕಾರಿ ಮಾರಲು ಬೆಳಗ್ಗೆ ಆರರಿಂದ ಸಂಜೆ ಆರರವರೆಗೆ ಅನುಮತಿ;
ನಾಲ್ಕನೇ ಬದಲಾವಣೆ ಎಂದರೆ ಜನದಟ್ಟಣೆ ತಪ್ಪಿಸುವ ಸಲುವಾಗಿ ಎಲ್ಲಾ ಸಂತೆಗಳನ್ನು ನಿರ್ಬಂಧಿಸಲಾಗಿದೆ. ಇದರ ಬದಲು, ತಳ್ಳುಗಾಡಿ ಮೂಲಕ ಹಣ್ಣು ತರಕಾರಿ ಮಾರಲು ಬೆಳಗ್ಗೆ ಆರರಿಂದ ಸಂಜೆ ಆರರವರೆಗೆ ಅನುಮತಿ ನೀಡಲಾಗಿದೆ.
04-03-26 05:06 pm
HK News Staffer
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
ಬೆಂಗಳೂರಿನಲ್ಲಿ 10 ಕೋಟಿ ಮೌಲ್ಯದ ಬೃಹತ್ ಡ್ರಗ್ಸ್ ಪತ...
03-03-26 08:39 pm
04-03-26 12:58 pm
HK News Staffer
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
04-03-26 10:54 am
HK News Staffer
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm