ಬ್ರೇಕಿಂಗ್ ನ್ಯೂಸ್
02-05-21 10:59 am Bangalore Correspondent ಕರ್ನಾಟಕ
ಬೆಂಗಳೂರು, ಮೇ 2: ಕಳೆದ ಐದಾರು ದಿನಗಳಿಂದ ಚಾಲ್ತಿಯಲ್ಲಿರುವ ಕೊರೊನಾ ಎರಡನೇ ಅಲೆಯ ಲಾಕ್ ಡೌನ್ ನಲ್ಲಿ ಮತ್ತೊಂದು ಬದಲಾವಣೆಯನ್ನು ಮಾಡಿ ಕರ್ನಾಟಕ ಸರಕಾರ ಆದೇಶ ಹೊರಡಿಸಿದೆ.
ಕೊರೊನಾ ಹಾವಳಿಯ ನಂತರ ಹೊರಡಿಸುವ ಮಾರ್ಗಸೂಚಿಯ ಮೇಲೆ ನಿಂತುಕೊಳ್ಳುವಲ್ಲಿ ಸತತವಾಗಿ ವಿಫಲರಾಗುತ್ತಿರುವ ಯಡಿಯೂರಪ್ಪನವರ ಸರಕಾರದ ವಿರುದ್ದ ಜನಸಾಮಾನ್ಯರ ಲೇವಡಿ ಮುಂದುವರಿಯುತ್ತಲೇ ಇದೆ.

ಹೊಸ ಸೋಂಕಿತರ ಸಂಖ್ಯೆ ಒಂದೇ ಸಮನೆ ಜಾಸ್ತಿಯಾಗುತ್ತಿರುವ ಈ ಸಮಯದಲ್ಲಿ, ಸಾರ್ವಜನಿಕರ ಸಹಕಾರ ದಿನದಿಂದ ದಿನಕ್ಕೆ ಕಮ್ಮಿಯಾಗುತ್ತಿದೆ. ಲಾಕ್ ಡೌನ್ ಮೊದಲ ದಿನದಲ್ಲಿ ಸಾರ್ವಜನಿಕರು ಮನೆಯಿಂದ ಹೊರಗೆ ಬರುವುದು ಕಮ್ಮಿಯಿತ್ತು, ಬರಬರುತ್ತಾ ಅದು ನಿಯಂತ್ರಣ ತಪ್ಪುತ್ತಿದೆ.
ಯಾಕೋ ಏನೋ, ಕೊರೊನಾ ನಿರ್ವಹಣೆಯನ್ನು ಕೈಚೆಲ್ಲಿದಂತೆ ಕಾಣುತ್ತಿರುವ ಯಡಿಯೂರಪ್ಪನವರಿಗೆ ಸೂಕ್ತ ಐಎಎಸ್/ಐಪಿಎಸ್ ಅಧಿಕಾರಿಗಳ ಸಮಯೋಚಿತ ಸಲಹೆಗಳ ಕೊರತೆ ಕಾಡುತ್ತಿದೆಯಾ ಎನ್ನುವ ಪ್ರಶ್ನೆ ಏಳಲಾರಂಭಿಸಿದೆ. ಇದು ಹೌದೇ ಆದಲ್ಲಿ, ಇಂತಹ ಗಂಭೀರ ಆರೋಗ್ಯ ತುರ್ತು ಪರಿಸ್ಥಿತ ವೇಳೆ ಸಿಎಂ ಇದನ್ನು ಸರಿದಾರಿಗೆ ತರಬೇಕಾಗಿದೆ.

ಗಾರ್ಮೆಂಟ್ಸ್ ವಲಯದಿಂದ ತೀವ್ರ ಒತ್ತಡ ಬಂದ ನಂತರ ಇದರಲ್ಲಿ ಬದಲಾವಣೆ;
ಆರ್ಥಿಕ ಚಟುವಟಿಕೆಗಳಿಗೆ ತೊಂದರೆ ಬರಬಾರದು ಎನ್ನುವ ಕಾರಣಕ್ಕಾಗಿ ಕೈಗಾರಿಕೆ ಯಥಾಸ್ಥಿತಿ ಮುಂದುವರಿಸಲು ಸರಕಾರ ಅನುಮೋದನೆ ನೀಡಿತು. ಆದರೆ, ಇದರಲ್ಲಿ ಗಾರ್ಮೆಂಟ್ಸ್ ವಲಯವನ್ನು ಕೈಬಿಟ್ಟಿತು. ಗಾರ್ಮೆಂಟ್ಸ್ ವಲಯದಿಂದ ತೀವ್ರ ಒತ್ತಡ ಬಂದ ನಂತರ ಇದರಲ್ಲಿ ಬದಲಾವಣೆಯನ್ನು ಮಾಡಿ ಶೇ. 50 ನೌಕರರು ಕೆಲಸ ಮಾಡಲು ಅನುಮತಿ ನೀಡಿತು. ಇದು ಮಾರ್ಗಸೂಚಿಯ ಮೊದಲನೇ ಬದಲಾವಣೆ.

ಎರಡನೇ ಬದಲಾವಣೆ ಹಾಲು ಮಾರಾಟದ ಸಮಯದ ಅವಧಿ;
ಎರಡನೇ ಬದಲಾವಣೆ ಹಾಲು ಮಾರಾಟದ ಸಮಯದ ಅವಧಿಯಲ್ಲಿ. ಲಾಕ್ ಡೌನ್ ಆರಂಭವಾದಗ ಬೆಳಗ್ಗೆ ಆರರಿಂದ ಹತ್ತರವರೆಗೆ ಮಾತ್ರ ಅವಕಾಶ ನೀಡಲಾಗಿತ್ತು. ಜನಸಾಮಾನ್ಯರಿಗೆ ಇದರಿಂದ ತೊಂದರೆ ಎನ್ನುವುದಕ್ಕಿಂತ ಹಾಲು ಉತ್ಪನ್ನಗಳು ತುಂಬಾ ವೇಸ್ಟ್ ಆಗುತ್ತಿರುವುದರಿಂದ ಸಮಯದಲ್ಲಿ ಸರಕಾರ ಬದಲಾವಣೆ ಮಾಡಿತು. ಈಗ, ಬೆಳಗ್ಗೆ ಆರರಿಂದ ರಾತ್ರಿ ಎಂಟರವರೆಗೆ ಮಾರಾಟ ಮಾಡಲು ಅನುಮತಿ ನೀಡಲಾಗಿದೆ.

ದಿನಸಿ ಅಂಗಡಿಗಳ ಸಮಯದಲ್ಲಿ ಬದಲಾವಣೆ ಮಾಡಿದ ಸರಕಾರ;
ಮೂರನೇ ಬದಲಾವಣೆ ಎಂದರೆ ದಿನಸಿ ಅಂಗಡಿಗಳ ಸಮಯದಲ್ಲಿ. ಬೆಳಗ್ಗೆ ಆರರಿಂದ ಹತ್ತರವರೆಗೆ ಇದ್ದ ಸಮಯವನ್ನು ಈಗ ಮಧ್ಯಾಹ್ನ ಹನ್ನೆರಡು ಗಂಟೆಯವರೆಗೆ ವಿಸ್ತರಿಸಲಾಗಿದೆ. ಇದರ ಜೊತೆಗೆ ಎಪಿಎಂಸಿ ಅಂಗಡಿಗಳೂ ಹನ್ನೆರಡು ಗಂಟೆಯವರೆಗೆ ಓಪನ್ ಮಾಡಬಹುದಾಗಿದೆ.

ತಳ್ಳುಗಾಡಿ ಮೂಲಕ ಹಣ್ಣು ತರಕಾರಿ ಮಾರಲು ಬೆಳಗ್ಗೆ ಆರರಿಂದ ಸಂಜೆ ಆರರವರೆಗೆ ಅನುಮತಿ;
ನಾಲ್ಕನೇ ಬದಲಾವಣೆ ಎಂದರೆ ಜನದಟ್ಟಣೆ ತಪ್ಪಿಸುವ ಸಲುವಾಗಿ ಎಲ್ಲಾ ಸಂತೆಗಳನ್ನು ನಿರ್ಬಂಧಿಸಲಾಗಿದೆ. ಇದರ ಬದಲು, ತಳ್ಳುಗಾಡಿ ಮೂಲಕ ಹಣ್ಣು ತರಕಾರಿ ಮಾರಲು ಬೆಳಗ್ಗೆ ಆರರಿಂದ ಸಂಜೆ ಆರರವರೆಗೆ ಅನುಮತಿ ನೀಡಲಾಗಿದೆ.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm