ಬ್ರೇಕಿಂಗ್ ನ್ಯೂಸ್
03-05-21 01:48 pm Headline Karnataka News Network ಕರ್ನಾಟಕ
Photo credits : deccanherald
ಚಾಮರಾಜನಗರ ಮೇ 3: ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರಂತದಲ್ಲಿ ನಡೆದ ಸಾವು-ನೋವಿಗೆ ಮೈಸೂರು ಜಿಲ್ಲಾಧಿಕಾರಿ ಹಾಗೂ ಜನರು ಕಾರಣ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಆರೋಪಿಸಿದ್ದಾರೆ.
ಘಟನೆಯ ಕುರಿತಾಗಿ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳು ಆಕ್ಸಿಜನ್ಗಾಗಿ ಮೈಸೂರನ್ನು ಅವಲಂಬಿಸಿದೆ. ಆದರೆ ಮೈಸೂರಿನಿಂದ ಸರಿಯಾದ ಸಮಯಕ್ಕೆ ಆಕ್ಸಿಜನ್ ಪೂರೈಕೆ ಆಗದಿರುವುದರಿಂದ ಈ ಘಟನೆ ಸಂಭವಿಸಿದೆ ಎಂದರು.
ಮೈಸೂರಿನಲ್ಲಿ ನಾಲ್ಕು ಆಕ್ಸಿಜನ್ ಪ್ಲಾಂಟ್ ಕೆಲಸ ಮಾಡುತ್ತಿಲ್ಲ. ಅದನ್ನು ಚಾಮರಾಜನಗರಕ್ಕೆ ಕೊಡಿ, ನಾವು ನಡೆಸಿಕೊಂಡು ಹೋಗುತ್ತೇವೆ ಎಂದು ಇದೇ ವೇಳೆ ತಿಳಿಸಿದರು.
ಜನರು ಕೊನೆ ಗಳಿಗೆಯಲ್ಲಿ ಆಸ್ಪತ್ರೆಗೆ ಬರಬೇಡಿ
ಕೋವಿಡ್ ಸೋಂಕಿತರು ಕೊನೆಯ ಗಳಿಗೆಯಲ್ಲಿ ಆಸ್ಪತ್ರೆಗೆ ಬರಬೇಡಿ. ಈ ಬಗ್ಗೆ ಪರಿಪರಿಯಾಗಿ ಕೇಳಿಕೊಳ್ಳುತ್ತಿದ್ದೇವೆ. ಆದರೆ, ಜನರು ಕೊನೆಯ ಗಳಿಗೆಯಲ್ಲಿ ಆಸ್ಪತ್ರೆಗೆ ಬರುತ್ತಿದ್ದಾರೆ. ಈ ಬಗ್ಗೆ ಡೆತ್ ರಿಪೋರ್ಟ್ನಲ್ಲಿ ಮಾಹಿತಿ ಪಡೆದುಕೊಳ್ಳುತ್ತೇನೆ. ಕೊನೆಯ ಗಳಿಗೆಯಲ್ಲಿ ಆಸ್ಪತ್ರೆಗೆ ಬರುವುದರ ಬದಲು ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಾಗಲೇ ಆಸ್ಪತ್ರೆಗೆ ದಾಖಲಾಗಬೇಕು ಎಂದು ಆಗ್ರಹಿಸಿದ್ದಾರೆ.
ಜಿಲ್ಲಾಸ್ಪತ್ರೆಯಲ್ಲಿ ನಡೆದ ದುರಂತದ ಬಗ್ಗೆ ಪ್ರತಿಕ್ರಿಯೆ ನೀಡಿದ ಸುರೇಶ್ ಕುಮಾರ್, ಎಲ್ಲಾ ಸಾವುಗಳು ಆಕ್ಸಿಜನ್ ಕೊರತೆಯಿಂದ ನಡೆದಿದೆಯಾ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು. ರಾತ್ರಿ 12.30 ರಿಂದ 2.30 ಗಂಟೆಯವರೆಗೆ ಮಾತ್ರ ಆಕ್ಸಿಜನ್ ಕೊರತೆ ಆಗಿದೆ. 24 ಸಾವುಗಳು ಆಮ್ಲಜನಕದ ಕೊರತೆಯಿಂದ ಆಗಿದೆ ಎಂಬುವುದು ಸರಿಯಲ್ಲ. ಈ ನಿಟ್ಟಿನಲ್ಲಿ 24 ಸಾವುಗಳು ಯಾವ ಕಾರಣದಿಂದ ಆಯಿತು ಎಂಬ ಮಾಹಿತಿಯನ್ನು ಕೋರಿದ್ದೇನೆ ಎಂದು ಹೇಳಿದರು.
ಡೆತ್ ಆಡಿಟ್ ವರದಿ ಬಂದ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಈಗಾಗಲೇ ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಸಿಎಂ ಪ್ರಧಾನ ಕಾರ್ಯದರ್ಶಿ ಹಾಗೂ ಎಡಿಜಿಪಿ ಪ್ರತಾಪ್ ರೆಡ್ಡಿ ಗಮನಕ್ಕೂ ತಂದಿದ್ದೇನೆ ಎಂದರು.
Read: ಚಾಮರಾಜನಗರ ಆಸ್ಪತ್ರೆಯಲ್ಲಿ ಮಾರಣಹೋಮ ; ಆಮ್ಲಜನಕ ಕೊರತೆಯಿಂದ 24 ಮಂದಿ ಸಾವು
Mysore DC Rohini Sinduri sole responsible for the death of 24 covid patients in Chamarajanagar hospital alleges Minister Suresh Kumar.
12-02-25 12:55 pm
HK News Desk
ಬೆಂಗಳೂರಿನಲ್ಲಿ ಮೂರು ದಿನ ಜಾಗತಿಕ ಹೂಡಿಕೆದಾರರ ಸಮಾವ...
11-02-25 11:12 pm
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
12-02-25 10:58 pm
Mangalore Correspondent
MP Brijesh Chowta, ESI Hospital: ಮಂಗಳೂರು ಇಎಸ್...
12-02-25 09:18 pm
Puttur Police Women PSI News, Traffic: ಪುತ್ತೂ...
12-02-25 06:05 pm
Ullal News, Dr Kalladka Prabhakar Bhat: ಸಾಕು...
11-02-25 07:44 pm
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
12-02-25 10:28 pm
Mangalore Correspondent
Honor killing Bangalore, Daughter killed, Cri...
12-02-25 06:23 pm
Bhagappa Harijan deadly Murder, Crime report:...
12-02-25 12:27 pm
ಮ್ಯಾಟ್ರಿಮನಿ ಸೈಟ್ ನಲ್ಲಿ ಗಾಳ ; ಸರ್ಕಾರಿ ನೌಕರನೆಂದ...
11-02-25 06:41 pm
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm