ಬ್ರೇಕಿಂಗ್ ನ್ಯೂಸ್
03-05-21 01:48 pm Headline Karnataka News Network ಕರ್ನಾಟಕ
Photo credits : deccanherald
ಚಾಮರಾಜನಗರ ಮೇ 3: ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರಂತದಲ್ಲಿ ನಡೆದ ಸಾವು-ನೋವಿಗೆ ಮೈಸೂರು ಜಿಲ್ಲಾಧಿಕಾರಿ ಹಾಗೂ ಜನರು ಕಾರಣ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಆರೋಪಿಸಿದ್ದಾರೆ.
ಘಟನೆಯ ಕುರಿತಾಗಿ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳು ಆಕ್ಸಿಜನ್ಗಾಗಿ ಮೈಸೂರನ್ನು ಅವಲಂಬಿಸಿದೆ. ಆದರೆ ಮೈಸೂರಿನಿಂದ ಸರಿಯಾದ ಸಮಯಕ್ಕೆ ಆಕ್ಸಿಜನ್ ಪೂರೈಕೆ ಆಗದಿರುವುದರಿಂದ ಈ ಘಟನೆ ಸಂಭವಿಸಿದೆ ಎಂದರು.

ಮೈಸೂರಿನಲ್ಲಿ ನಾಲ್ಕು ಆಕ್ಸಿಜನ್ ಪ್ಲಾಂಟ್ ಕೆಲಸ ಮಾಡುತ್ತಿಲ್ಲ. ಅದನ್ನು ಚಾಮರಾಜನಗರಕ್ಕೆ ಕೊಡಿ, ನಾವು ನಡೆಸಿಕೊಂಡು ಹೋಗುತ್ತೇವೆ ಎಂದು ಇದೇ ವೇಳೆ ತಿಳಿಸಿದರು.
ಜನರು ಕೊನೆ ಗಳಿಗೆಯಲ್ಲಿ ಆಸ್ಪತ್ರೆಗೆ ಬರಬೇಡಿ
ಕೋವಿಡ್ ಸೋಂಕಿತರು ಕೊನೆಯ ಗಳಿಗೆಯಲ್ಲಿ ಆಸ್ಪತ್ರೆಗೆ ಬರಬೇಡಿ. ಈ ಬಗ್ಗೆ ಪರಿಪರಿಯಾಗಿ ಕೇಳಿಕೊಳ್ಳುತ್ತಿದ್ದೇವೆ. ಆದರೆ, ಜನರು ಕೊನೆಯ ಗಳಿಗೆಯಲ್ಲಿ ಆಸ್ಪತ್ರೆಗೆ ಬರುತ್ತಿದ್ದಾರೆ. ಈ ಬಗ್ಗೆ ಡೆತ್ ರಿಪೋರ್ಟ್ನಲ್ಲಿ ಮಾಹಿತಿ ಪಡೆದುಕೊಳ್ಳುತ್ತೇನೆ. ಕೊನೆಯ ಗಳಿಗೆಯಲ್ಲಿ ಆಸ್ಪತ್ರೆಗೆ ಬರುವುದರ ಬದಲು ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಾಗಲೇ ಆಸ್ಪತ್ರೆಗೆ ದಾಖಲಾಗಬೇಕು ಎಂದು ಆಗ್ರಹಿಸಿದ್ದಾರೆ.

ಜಿಲ್ಲಾಸ್ಪತ್ರೆಯಲ್ಲಿ ನಡೆದ ದುರಂತದ ಬಗ್ಗೆ ಪ್ರತಿಕ್ರಿಯೆ ನೀಡಿದ ಸುರೇಶ್ ಕುಮಾರ್, ಎಲ್ಲಾ ಸಾವುಗಳು ಆಕ್ಸಿಜನ್ ಕೊರತೆಯಿಂದ ನಡೆದಿದೆಯಾ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು. ರಾತ್ರಿ 12.30 ರಿಂದ 2.30 ಗಂಟೆಯವರೆಗೆ ಮಾತ್ರ ಆಕ್ಸಿಜನ್ ಕೊರತೆ ಆಗಿದೆ. 24 ಸಾವುಗಳು ಆಮ್ಲಜನಕದ ಕೊರತೆಯಿಂದ ಆಗಿದೆ ಎಂಬುವುದು ಸರಿಯಲ್ಲ. ಈ ನಿಟ್ಟಿನಲ್ಲಿ 24 ಸಾವುಗಳು ಯಾವ ಕಾರಣದಿಂದ ಆಯಿತು ಎಂಬ ಮಾಹಿತಿಯನ್ನು ಕೋರಿದ್ದೇನೆ ಎಂದು ಹೇಳಿದರು.

ಡೆತ್ ಆಡಿಟ್ ವರದಿ ಬಂದ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಈಗಾಗಲೇ ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಸಿಎಂ ಪ್ರಧಾನ ಕಾರ್ಯದರ್ಶಿ ಹಾಗೂ ಎಡಿಜಿಪಿ ಪ್ರತಾಪ್ ರೆಡ್ಡಿ ಗಮನಕ್ಕೂ ತಂದಿದ್ದೇನೆ ಎಂದರು.
Read: ಚಾಮರಾಜನಗರ ಆಸ್ಪತ್ರೆಯಲ್ಲಿ ಮಾರಣಹೋಮ ; ಆಮ್ಲಜನಕ ಕೊರತೆಯಿಂದ 24 ಮಂದಿ ಸಾವು
Mysore DC Rohini Sinduri sole responsible for the death of 24 covid patients in Chamarajanagar hospital alleges Minister Suresh Kumar.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm