ಬ್ರೇಕಿಂಗ್ ನ್ಯೂಸ್
03-05-21 01:48 pm Headline Karnataka News Network ಕರ್ನಾಟಕ
Photo credits : deccanherald
ಚಾಮರಾಜನಗರ ಮೇ 3: ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರಂತದಲ್ಲಿ ನಡೆದ ಸಾವು-ನೋವಿಗೆ ಮೈಸೂರು ಜಿಲ್ಲಾಧಿಕಾರಿ ಹಾಗೂ ಜನರು ಕಾರಣ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಆರೋಪಿಸಿದ್ದಾರೆ.
ಘಟನೆಯ ಕುರಿತಾಗಿ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳು ಆಕ್ಸಿಜನ್ಗಾಗಿ ಮೈಸೂರನ್ನು ಅವಲಂಬಿಸಿದೆ. ಆದರೆ ಮೈಸೂರಿನಿಂದ ಸರಿಯಾದ ಸಮಯಕ್ಕೆ ಆಕ್ಸಿಜನ್ ಪೂರೈಕೆ ಆಗದಿರುವುದರಿಂದ ಈ ಘಟನೆ ಸಂಭವಿಸಿದೆ ಎಂದರು.

ಮೈಸೂರಿನಲ್ಲಿ ನಾಲ್ಕು ಆಕ್ಸಿಜನ್ ಪ್ಲಾಂಟ್ ಕೆಲಸ ಮಾಡುತ್ತಿಲ್ಲ. ಅದನ್ನು ಚಾಮರಾಜನಗರಕ್ಕೆ ಕೊಡಿ, ನಾವು ನಡೆಸಿಕೊಂಡು ಹೋಗುತ್ತೇವೆ ಎಂದು ಇದೇ ವೇಳೆ ತಿಳಿಸಿದರು.
ಜನರು ಕೊನೆ ಗಳಿಗೆಯಲ್ಲಿ ಆಸ್ಪತ್ರೆಗೆ ಬರಬೇಡಿ
ಕೋವಿಡ್ ಸೋಂಕಿತರು ಕೊನೆಯ ಗಳಿಗೆಯಲ್ಲಿ ಆಸ್ಪತ್ರೆಗೆ ಬರಬೇಡಿ. ಈ ಬಗ್ಗೆ ಪರಿಪರಿಯಾಗಿ ಕೇಳಿಕೊಳ್ಳುತ್ತಿದ್ದೇವೆ. ಆದರೆ, ಜನರು ಕೊನೆಯ ಗಳಿಗೆಯಲ್ಲಿ ಆಸ್ಪತ್ರೆಗೆ ಬರುತ್ತಿದ್ದಾರೆ. ಈ ಬಗ್ಗೆ ಡೆತ್ ರಿಪೋರ್ಟ್ನಲ್ಲಿ ಮಾಹಿತಿ ಪಡೆದುಕೊಳ್ಳುತ್ತೇನೆ. ಕೊನೆಯ ಗಳಿಗೆಯಲ್ಲಿ ಆಸ್ಪತ್ರೆಗೆ ಬರುವುದರ ಬದಲು ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಾಗಲೇ ಆಸ್ಪತ್ರೆಗೆ ದಾಖಲಾಗಬೇಕು ಎಂದು ಆಗ್ರಹಿಸಿದ್ದಾರೆ.

ಜಿಲ್ಲಾಸ್ಪತ್ರೆಯಲ್ಲಿ ನಡೆದ ದುರಂತದ ಬಗ್ಗೆ ಪ್ರತಿಕ್ರಿಯೆ ನೀಡಿದ ಸುರೇಶ್ ಕುಮಾರ್, ಎಲ್ಲಾ ಸಾವುಗಳು ಆಕ್ಸಿಜನ್ ಕೊರತೆಯಿಂದ ನಡೆದಿದೆಯಾ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು. ರಾತ್ರಿ 12.30 ರಿಂದ 2.30 ಗಂಟೆಯವರೆಗೆ ಮಾತ್ರ ಆಕ್ಸಿಜನ್ ಕೊರತೆ ಆಗಿದೆ. 24 ಸಾವುಗಳು ಆಮ್ಲಜನಕದ ಕೊರತೆಯಿಂದ ಆಗಿದೆ ಎಂಬುವುದು ಸರಿಯಲ್ಲ. ಈ ನಿಟ್ಟಿನಲ್ಲಿ 24 ಸಾವುಗಳು ಯಾವ ಕಾರಣದಿಂದ ಆಯಿತು ಎಂಬ ಮಾಹಿತಿಯನ್ನು ಕೋರಿದ್ದೇನೆ ಎಂದು ಹೇಳಿದರು.

ಡೆತ್ ಆಡಿಟ್ ವರದಿ ಬಂದ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಈಗಾಗಲೇ ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಸಿಎಂ ಪ್ರಧಾನ ಕಾರ್ಯದರ್ಶಿ ಹಾಗೂ ಎಡಿಜಿಪಿ ಪ್ರತಾಪ್ ರೆಡ್ಡಿ ಗಮನಕ್ಕೂ ತಂದಿದ್ದೇನೆ ಎಂದರು.
Read: ಚಾಮರಾಜನಗರ ಆಸ್ಪತ್ರೆಯಲ್ಲಿ ಮಾರಣಹೋಮ ; ಆಮ್ಲಜನಕ ಕೊರತೆಯಿಂದ 24 ಮಂದಿ ಸಾವು
Mysore DC Rohini Sinduri sole responsible for the death of 24 covid patients in Chamarajanagar hospital alleges Minister Suresh Kumar.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm