ಬ್ರೇಕಿಂಗ್ ನ್ಯೂಸ್
03-05-21 01:48 pm Headline Karnataka News Network ಕರ್ನಾಟಕ
Photo credits : deccanherald
ಚಾಮರಾಜನಗರ ಮೇ 3: ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರಂತದಲ್ಲಿ ನಡೆದ ಸಾವು-ನೋವಿಗೆ ಮೈಸೂರು ಜಿಲ್ಲಾಧಿಕಾರಿ ಹಾಗೂ ಜನರು ಕಾರಣ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಆರೋಪಿಸಿದ್ದಾರೆ.
ಘಟನೆಯ ಕುರಿತಾಗಿ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳು ಆಕ್ಸಿಜನ್ಗಾಗಿ ಮೈಸೂರನ್ನು ಅವಲಂಬಿಸಿದೆ. ಆದರೆ ಮೈಸೂರಿನಿಂದ ಸರಿಯಾದ ಸಮಯಕ್ಕೆ ಆಕ್ಸಿಜನ್ ಪೂರೈಕೆ ಆಗದಿರುವುದರಿಂದ ಈ ಘಟನೆ ಸಂಭವಿಸಿದೆ ಎಂದರು.
ಮೈಸೂರಿನಲ್ಲಿ ನಾಲ್ಕು ಆಕ್ಸಿಜನ್ ಪ್ಲಾಂಟ್ ಕೆಲಸ ಮಾಡುತ್ತಿಲ್ಲ. ಅದನ್ನು ಚಾಮರಾಜನಗರಕ್ಕೆ ಕೊಡಿ, ನಾವು ನಡೆಸಿಕೊಂಡು ಹೋಗುತ್ತೇವೆ ಎಂದು ಇದೇ ವೇಳೆ ತಿಳಿಸಿದರು.
ಜನರು ಕೊನೆ ಗಳಿಗೆಯಲ್ಲಿ ಆಸ್ಪತ್ರೆಗೆ ಬರಬೇಡಿ
ಕೋವಿಡ್ ಸೋಂಕಿತರು ಕೊನೆಯ ಗಳಿಗೆಯಲ್ಲಿ ಆಸ್ಪತ್ರೆಗೆ ಬರಬೇಡಿ. ಈ ಬಗ್ಗೆ ಪರಿಪರಿಯಾಗಿ ಕೇಳಿಕೊಳ್ಳುತ್ತಿದ್ದೇವೆ. ಆದರೆ, ಜನರು ಕೊನೆಯ ಗಳಿಗೆಯಲ್ಲಿ ಆಸ್ಪತ್ರೆಗೆ ಬರುತ್ತಿದ್ದಾರೆ. ಈ ಬಗ್ಗೆ ಡೆತ್ ರಿಪೋರ್ಟ್ನಲ್ಲಿ ಮಾಹಿತಿ ಪಡೆದುಕೊಳ್ಳುತ್ತೇನೆ. ಕೊನೆಯ ಗಳಿಗೆಯಲ್ಲಿ ಆಸ್ಪತ್ರೆಗೆ ಬರುವುದರ ಬದಲು ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಾಗಲೇ ಆಸ್ಪತ್ರೆಗೆ ದಾಖಲಾಗಬೇಕು ಎಂದು ಆಗ್ರಹಿಸಿದ್ದಾರೆ.
ಜಿಲ್ಲಾಸ್ಪತ್ರೆಯಲ್ಲಿ ನಡೆದ ದುರಂತದ ಬಗ್ಗೆ ಪ್ರತಿಕ್ರಿಯೆ ನೀಡಿದ ಸುರೇಶ್ ಕುಮಾರ್, ಎಲ್ಲಾ ಸಾವುಗಳು ಆಕ್ಸಿಜನ್ ಕೊರತೆಯಿಂದ ನಡೆದಿದೆಯಾ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು. ರಾತ್ರಿ 12.30 ರಿಂದ 2.30 ಗಂಟೆಯವರೆಗೆ ಮಾತ್ರ ಆಕ್ಸಿಜನ್ ಕೊರತೆ ಆಗಿದೆ. 24 ಸಾವುಗಳು ಆಮ್ಲಜನಕದ ಕೊರತೆಯಿಂದ ಆಗಿದೆ ಎಂಬುವುದು ಸರಿಯಲ್ಲ. ಈ ನಿಟ್ಟಿನಲ್ಲಿ 24 ಸಾವುಗಳು ಯಾವ ಕಾರಣದಿಂದ ಆಯಿತು ಎಂಬ ಮಾಹಿತಿಯನ್ನು ಕೋರಿದ್ದೇನೆ ಎಂದು ಹೇಳಿದರು.
ಡೆತ್ ಆಡಿಟ್ ವರದಿ ಬಂದ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಈಗಾಗಲೇ ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಸಿಎಂ ಪ್ರಧಾನ ಕಾರ್ಯದರ್ಶಿ ಹಾಗೂ ಎಡಿಜಿಪಿ ಪ್ರತಾಪ್ ರೆಡ್ಡಿ ಗಮನಕ್ಕೂ ತಂದಿದ್ದೇನೆ ಎಂದರು.
Read: ಚಾಮರಾಜನಗರ ಆಸ್ಪತ್ರೆಯಲ್ಲಿ ಮಾರಣಹೋಮ ; ಆಮ್ಲಜನಕ ಕೊರತೆಯಿಂದ 24 ಮಂದಿ ಸಾವು
Mysore DC Rohini Sinduri sole responsible for the death of 24 covid patients in Chamarajanagar hospital alleges Minister Suresh Kumar.
15-09-25 04:45 pm
Bangalore Correspondent
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm