ಬ್ರೇಕಿಂಗ್ ನ್ಯೂಸ್
04-05-21 12:37 pm Headline Karnataka News Network ಕರ್ನಾಟಕ
Photo credits : unicef
ಕಲಬುರ್ಗಿ,ಮೇ 04: ಇಲ್ಲಿನ ತಾಲ್ಲೂಕು ಆಸ್ಪತ್ರೆಯಲ್ಲಿ ಸೋಮವಾರ ತಡರಾತ್ರಿ ಆಮ್ಲಜನಕದ ಕೊರತೆಯಿಂದ ನಾಲ್ವರು ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ.
ಈ ಆಸ್ಪತ್ರೆಯಲ್ಲಿ ಒಟ್ಟು 30 ರೋಗಿಗಳು ಅಡ್ಮಿಟ್ ಆಗಿದ್ದಾರೆ. ಆದರೆ, ಸೋಮವಾರ ಆರು ಸಿಲಿಂಡರ್ ಮಾತ್ರ ಇದ್ದವು. ಅವುಗಳನ್ನು ಆರು ಮಂದಿಗೆ ನೀಡಲಾಗಿತ್ತು. ಆದರೆ, ಸೋಮವಾರ ತಡರಾತ್ರಿ ಆರೂ ಸಿಲಿಂಡರ್ಗಳು ಖಾಲಿ ಆದ ಕಾರಣ ನಾಲ್ವರು ಬೆಡ್ಗಳ ಮೇಲೆ ನರಳಾಡಿ ಪ್ರಾಣ ಬಿಟ್ಟಿದ್ದಾರೆ.

ತಾಲ್ಲೂಕು ಆರೋಗ್ಯಾಧಿಕಾರಿಗಳು ಮಂಗಳವಾರ ಬೆಳಿಗ್ಗೆ ಆಮ್ಲಜನಕ ಪೂರೈಸುವಂತೆ ಜಿಲ್ಲಾಧಿಕಾರಿಗೆ ಕರೆ ಮಾಡಿದ್ದಾರೆ. ಬೆಳಿಗ್ಗೆ 11.30ರ ಸುಮಾರಿಗೆ ಆಮ್ಲಜನಕ ಸಿಲಿಂಡರ್ಗಳು ಆಸ್ಪತ್ರೆ ತಲುಪಿದ್ದರಿಂದ ಉಳಿದವರು ನಿಟ್ಟುಸಿರು ಬಿಟ್ಟಿದ್ದಾರೆ.

ಅಫಜಲಪುರ ಆಸ್ಪತ್ರೆಯಲ್ಲಿ ಫಿಜಿಷಿಯನ್ರೇ ಇಲ್ಲ
‘ಅಫಜಲಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಫಿಜಿಷಿಯನ್ರೇ ಇಲ್ಲ. ಅಗತ್ಯಕ್ಕೆ ತಕ್ಕಷ್ಟು ಸಿಲಿಂಡರ್ ಗಳು ಇಲ್ಲ. ಖಾಲಿಯಾಗುತ್ತಿದ್ದಂತೆಯೇ ಕಲಬುರ್ಗಿಗೆ ಹೋಗಿ ತುಂಬಿಸಿಕೊಂಡು ಬರುತ್ತಿದ್ದೇವೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ’ ಎಂದು ಅಫಜಲಪುರ ಕ್ಷೇತ್ರದ ಶಾಸಕ ಎಂ.ವೈ. ಪಾಟೀಲ ದೂರಿದ್ದಾರೆ.

ಸರ್ಕಾರಕ್ಕೆ ಗಂಭೀರತೆ ಇಲ್ಲ;
ಅಫಜಲಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಫಿಜಿಷಿಯನ್ರೇ ಇಲ್ಲ. ಅಲ್ಲಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುವವರು ಯಾರು’ ಎಂದು ಅವರು ಪ್ರಶ್ನಿಸಿದ್ದಾರೆ.

ಆಮ್ಲಜನಕ ಕೊರತೆ ಇಲ್ಲ: ಸಚಿವ, ಸಂಸದ;
‘ಅಫಜಲಪುರ ಆಸ್ಪತ್ರೆಯಲ್ಲಿ ನಾಲ್ಕು ಆಮ್ಲಜನಕ ಸಿಲಿಂಡರ್ ಇವೆ. ಕೋವಿಡ್ನಿಂದ ಆರೋಗ್ಯ ವಿಷಯಮಿಸಿದ್ದರಿಂದ ಸೋಮವಾರ ಮೂವರು ಹಾಗೂ ಮಂಗಳವಾರ ಒಬ್ಬ ರೋಗಿ ಸತ್ತಿದ್ದಾರೆ. ಆಮ್ಜಜನಕದ ಕೊರತೆಯಿಂದ ಈ ಸಾವು ಸಂಭವಿಸಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
Four Covid-19 patients died of oxygen shortage at the Afzalpur taluk hospital in Kalaburagi district on Monday late at night.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm