ಬ್ರೇಕಿಂಗ್ ನ್ಯೂಸ್
04-05-21 12:37 pm Headline Karnataka News Network ಕರ್ನಾಟಕ
Photo credits : unicef
ಕಲಬುರ್ಗಿ,ಮೇ 04: ಇಲ್ಲಿನ ತಾಲ್ಲೂಕು ಆಸ್ಪತ್ರೆಯಲ್ಲಿ ಸೋಮವಾರ ತಡರಾತ್ರಿ ಆಮ್ಲಜನಕದ ಕೊರತೆಯಿಂದ ನಾಲ್ವರು ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ.
ಈ ಆಸ್ಪತ್ರೆಯಲ್ಲಿ ಒಟ್ಟು 30 ರೋಗಿಗಳು ಅಡ್ಮಿಟ್ ಆಗಿದ್ದಾರೆ. ಆದರೆ, ಸೋಮವಾರ ಆರು ಸಿಲಿಂಡರ್ ಮಾತ್ರ ಇದ್ದವು. ಅವುಗಳನ್ನು ಆರು ಮಂದಿಗೆ ನೀಡಲಾಗಿತ್ತು. ಆದರೆ, ಸೋಮವಾರ ತಡರಾತ್ರಿ ಆರೂ ಸಿಲಿಂಡರ್ಗಳು ಖಾಲಿ ಆದ ಕಾರಣ ನಾಲ್ವರು ಬೆಡ್ಗಳ ಮೇಲೆ ನರಳಾಡಿ ಪ್ರಾಣ ಬಿಟ್ಟಿದ್ದಾರೆ.

ತಾಲ್ಲೂಕು ಆರೋಗ್ಯಾಧಿಕಾರಿಗಳು ಮಂಗಳವಾರ ಬೆಳಿಗ್ಗೆ ಆಮ್ಲಜನಕ ಪೂರೈಸುವಂತೆ ಜಿಲ್ಲಾಧಿಕಾರಿಗೆ ಕರೆ ಮಾಡಿದ್ದಾರೆ. ಬೆಳಿಗ್ಗೆ 11.30ರ ಸುಮಾರಿಗೆ ಆಮ್ಲಜನಕ ಸಿಲಿಂಡರ್ಗಳು ಆಸ್ಪತ್ರೆ ತಲುಪಿದ್ದರಿಂದ ಉಳಿದವರು ನಿಟ್ಟುಸಿರು ಬಿಟ್ಟಿದ್ದಾರೆ.

ಅಫಜಲಪುರ ಆಸ್ಪತ್ರೆಯಲ್ಲಿ ಫಿಜಿಷಿಯನ್ರೇ ಇಲ್ಲ
‘ಅಫಜಲಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಫಿಜಿಷಿಯನ್ರೇ ಇಲ್ಲ. ಅಗತ್ಯಕ್ಕೆ ತಕ್ಕಷ್ಟು ಸಿಲಿಂಡರ್ ಗಳು ಇಲ್ಲ. ಖಾಲಿಯಾಗುತ್ತಿದ್ದಂತೆಯೇ ಕಲಬುರ್ಗಿಗೆ ಹೋಗಿ ತುಂಬಿಸಿಕೊಂಡು ಬರುತ್ತಿದ್ದೇವೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ’ ಎಂದು ಅಫಜಲಪುರ ಕ್ಷೇತ್ರದ ಶಾಸಕ ಎಂ.ವೈ. ಪಾಟೀಲ ದೂರಿದ್ದಾರೆ.

ಸರ್ಕಾರಕ್ಕೆ ಗಂಭೀರತೆ ಇಲ್ಲ;
ಅಫಜಲಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಫಿಜಿಷಿಯನ್ರೇ ಇಲ್ಲ. ಅಲ್ಲಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುವವರು ಯಾರು’ ಎಂದು ಅವರು ಪ್ರಶ್ನಿಸಿದ್ದಾರೆ.

ಆಮ್ಲಜನಕ ಕೊರತೆ ಇಲ್ಲ: ಸಚಿವ, ಸಂಸದ;
‘ಅಫಜಲಪುರ ಆಸ್ಪತ್ರೆಯಲ್ಲಿ ನಾಲ್ಕು ಆಮ್ಲಜನಕ ಸಿಲಿಂಡರ್ ಇವೆ. ಕೋವಿಡ್ನಿಂದ ಆರೋಗ್ಯ ವಿಷಯಮಿಸಿದ್ದರಿಂದ ಸೋಮವಾರ ಮೂವರು ಹಾಗೂ ಮಂಗಳವಾರ ಒಬ್ಬ ರೋಗಿ ಸತ್ತಿದ್ದಾರೆ. ಆಮ್ಜಜನಕದ ಕೊರತೆಯಿಂದ ಈ ಸಾವು ಸಂಭವಿಸಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
Four Covid-19 patients died of oxygen shortage at the Afzalpur taluk hospital in Kalaburagi district on Monday late at night.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 10:47 pm
Mangalore Correspondent
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm