ಬ್ರೇಕಿಂಗ್ ನ್ಯೂಸ್
04-05-21 12:37 pm Headline Karnataka News Network ಕರ್ನಾಟಕ
Photo credits : unicef
ಕಲಬುರ್ಗಿ,ಮೇ 04: ಇಲ್ಲಿನ ತಾಲ್ಲೂಕು ಆಸ್ಪತ್ರೆಯಲ್ಲಿ ಸೋಮವಾರ ತಡರಾತ್ರಿ ಆಮ್ಲಜನಕದ ಕೊರತೆಯಿಂದ ನಾಲ್ವರು ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ.
ಈ ಆಸ್ಪತ್ರೆಯಲ್ಲಿ ಒಟ್ಟು 30 ರೋಗಿಗಳು ಅಡ್ಮಿಟ್ ಆಗಿದ್ದಾರೆ. ಆದರೆ, ಸೋಮವಾರ ಆರು ಸಿಲಿಂಡರ್ ಮಾತ್ರ ಇದ್ದವು. ಅವುಗಳನ್ನು ಆರು ಮಂದಿಗೆ ನೀಡಲಾಗಿತ್ತು. ಆದರೆ, ಸೋಮವಾರ ತಡರಾತ್ರಿ ಆರೂ ಸಿಲಿಂಡರ್ಗಳು ಖಾಲಿ ಆದ ಕಾರಣ ನಾಲ್ವರು ಬೆಡ್ಗಳ ಮೇಲೆ ನರಳಾಡಿ ಪ್ರಾಣ ಬಿಟ್ಟಿದ್ದಾರೆ.

ತಾಲ್ಲೂಕು ಆರೋಗ್ಯಾಧಿಕಾರಿಗಳು ಮಂಗಳವಾರ ಬೆಳಿಗ್ಗೆ ಆಮ್ಲಜನಕ ಪೂರೈಸುವಂತೆ ಜಿಲ್ಲಾಧಿಕಾರಿಗೆ ಕರೆ ಮಾಡಿದ್ದಾರೆ. ಬೆಳಿಗ್ಗೆ 11.30ರ ಸುಮಾರಿಗೆ ಆಮ್ಲಜನಕ ಸಿಲಿಂಡರ್ಗಳು ಆಸ್ಪತ್ರೆ ತಲುಪಿದ್ದರಿಂದ ಉಳಿದವರು ನಿಟ್ಟುಸಿರು ಬಿಟ್ಟಿದ್ದಾರೆ.

ಅಫಜಲಪುರ ಆಸ್ಪತ್ರೆಯಲ್ಲಿ ಫಿಜಿಷಿಯನ್ರೇ ಇಲ್ಲ
‘ಅಫಜಲಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಫಿಜಿಷಿಯನ್ರೇ ಇಲ್ಲ. ಅಗತ್ಯಕ್ಕೆ ತಕ್ಕಷ್ಟು ಸಿಲಿಂಡರ್ ಗಳು ಇಲ್ಲ. ಖಾಲಿಯಾಗುತ್ತಿದ್ದಂತೆಯೇ ಕಲಬುರ್ಗಿಗೆ ಹೋಗಿ ತುಂಬಿಸಿಕೊಂಡು ಬರುತ್ತಿದ್ದೇವೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ’ ಎಂದು ಅಫಜಲಪುರ ಕ್ಷೇತ್ರದ ಶಾಸಕ ಎಂ.ವೈ. ಪಾಟೀಲ ದೂರಿದ್ದಾರೆ.

ಸರ್ಕಾರಕ್ಕೆ ಗಂಭೀರತೆ ಇಲ್ಲ;
ಅಫಜಲಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಫಿಜಿಷಿಯನ್ರೇ ಇಲ್ಲ. ಅಲ್ಲಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುವವರು ಯಾರು’ ಎಂದು ಅವರು ಪ್ರಶ್ನಿಸಿದ್ದಾರೆ.

ಆಮ್ಲಜನಕ ಕೊರತೆ ಇಲ್ಲ: ಸಚಿವ, ಸಂಸದ;
‘ಅಫಜಲಪುರ ಆಸ್ಪತ್ರೆಯಲ್ಲಿ ನಾಲ್ಕು ಆಮ್ಲಜನಕ ಸಿಲಿಂಡರ್ ಇವೆ. ಕೋವಿಡ್ನಿಂದ ಆರೋಗ್ಯ ವಿಷಯಮಿಸಿದ್ದರಿಂದ ಸೋಮವಾರ ಮೂವರು ಹಾಗೂ ಮಂಗಳವಾರ ಒಬ್ಬ ರೋಗಿ ಸತ್ತಿದ್ದಾರೆ. ಆಮ್ಜಜನಕದ ಕೊರತೆಯಿಂದ ಈ ಸಾವು ಸಂಭವಿಸಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
Four Covid-19 patients died of oxygen shortage at the Afzalpur taluk hospital in Kalaburagi district on Monday late at night.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm