ಬ್ರೇಕಿಂಗ್ ನ್ಯೂಸ್
26-08-20 06:13 pm Headline Karnataka News Network ಕರ್ನಾಟಕ
ಮೈಸೂರು, ಆಗಸ್ಟ್ 26: ರಾಜ್ಯದಲ್ಲಿ ವಿಜಯೇಂದ್ರ ಸೂಪರ್ ಸಿಎಂ ಥರ ಕಾರ್ಯ ನಿರ್ವಹಿಸುತ್ತಿದ್ದು, ತಮ್ಮದೇ ಆದ 30 ಜನರ ಕೂಟ ರಚಿಸಿಕೊಂಡಿದ್ದಾರೆ. ವಿಪಕ್ಷಗಳ ಕೆಲ ಮುಖಂಡರೂ ಈ ಕೂಟದಲ್ಲಿದ್ದು 1 ಸಾವಿರ ಕೋಟಿ ರೂಪಾಯಿ ಸಂಗ್ರಹಿಸಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಎನ್. ಲಕ್ಷ್ಮಣ್ ಗಂಭೀರ ಆರೋಪ ಮಾಡಿದ್ದಾರೆ.
ಮೈಸೂರಿನಲ್ಲಿಂದು ಸುದ್ದಿ ಗೋಷ್ಠಿ ನಡೆಸಿದ ಅವರು, ಕೆಲ ಬಿಜೆಪಿ ಶಾಸಕರು ಬಿವೈ ವಿಜಯೇಂದ್ರ ವಿರುದ್ಧ ದೂರು ನೀಡಿದ್ದಾರೆ. ಕಳೆದ ಒಂದು ವರ್ಷದಿಂದ ಬಿವೈ ವಿಜಯೇಂದ್ರ ಪರ್ಯಾಯ ಸರ್ಕಾರ ನಡೆಸುತ್ತಿದ್ದಾರೆ. ಶಾಸಕರ ಬೇಡಿಕೆಗಳು ಈಡೇರುತ್ತಿಲ್ಲ. ವಿಪಕ್ಷಗಳ ಕೆಲ ಮುಖಂಡರು ಸೇರಿ 30 ಜನರ ಕೂಟ ಮಾಡಿಕೊಂಡು ಒಂದು ಸಾವಿರ ಕೋಟಿ ಸಂಗ್ರಹ ಮಾಡಿದ್ದಾರೆ. ಈ ಹಣ ದೇಶ ವಿದೇಶಗಳಲ್ಲಿ ಹೂಡಿಕೆಯಾಗಿದೆ ಅಂತಾ ಬಿಜೆಪಿ ಶಾಸಕರೇ ಆರೋಪಿಸಿ ದೂರು ನೀಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎನ್.ಲಕ್ಷ್ಮಣ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೂಡಲೇ ಈ ಬಗ್ಗೆ ತನಿಖೆ ನಡೆಸುವಂತೆ ಕಾಂಗ್ರೆಸ್ ಒತ್ತಾಯಿಸುತ್ತದೆ. ವಿಜಯೇಂದ್ರ ತಮ್ಮದೇ ಆದ 30 ಜನರ ಕೂಟ ರಚಿಸಿಕೊಂಡಿದ್ದಾರೆ. ಒಬ್ಬೊಬ್ಬರಿಗೆ ಒಂದೊಂದು ಇಲಾಖೆ ರಚಿಸಿದ್ದಾರೆ. ಬೆಂಗಳೂರಿನ ಪ್ರಮುಖ ಹೊಟೇಲ್ಗಳಲ್ಲಿ 15 ರೂಂ ಬುಕ್ ಮಾಡಿಕೊಂಡು ತಮ್ಮ ಪರ್ಯಾಯ ಸರ್ಕಾರದ ಕಾರ್ಯಚಟುವಟಿಕೆ ನಡೆಸುತ್ತಿದ್ದಾರೆ ಎಂದು ಬಿಜೆಪಿ ಶಾಸಕರು ಆರು ಪುಟದ ದೂರನ್ನು ಸಲ್ಲಿಸಿದ್ದಾರೆ. ಕೊರೊನಾ ಹಾಗೂ ನೆರೆ ಹಾವಳಿ ನಿಯಂತ್ರಣಕ್ಕೆ ಹಣವಿಲ್ಲ ಎನ್ನುವ ಸಿಎಂ ತಮ್ಮ ಪುತ್ರನ ಬಳಿ ಇರುವ ಈ ಹಣ ಬಳಸಿಕೊಳ್ಳಿ ಎಂದಿದ್ದಾರೆ.
ಸೆಪ್ಟಂಬರ್ ಎರಡು, ಮೂರನೇ ವಾರದಲ್ಲಿ ನವದೆಹಲಿಯಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಿ ವಿಜಯೇಂದ್ರ ಮೇಲಿನ ಆರೋಪಕ್ಕೆ ಪೂರಕವಾದ ಎಲ್ಲಾ ಆಡಿಯೋ ಹಾಗೂ ವಿಡಿಯೋ ದಾಖಲೆ ಬಿಡುಗಡೆ ಮಾಡುತ್ತೇವೆ. ನಯಾಪೈಸೆ ಲೂಟಿಯಾಗಲು ಬಿಡಲ್ಲ ಎನ್ನುವ ಮೋದಿಯವರಿಗೆ ನಿಮ್ಮ ಮೂಗಿನ ಕೆಳಗೆ ತುಪ್ಪ ಇದೆ ಎಂದು ತೋರಿಸಲು ನವದೆಹಲಿಯಲ್ಲಿ ಪ್ರೆಸ್ಮೀಟ್ ಮಾಡಲು ಮುಂದಾಗಿದ್ದೇವೆ ಎಂದಿದ್ದಾರೆ. ಹತ್ತು ದಿನಗಳ ಒಳಗಾಗಿ ಈ ಪ್ರಕರಣವನ್ನ ಸಿಬಿಐ ಇಲ್ಲವೇ ನ್ಯಾಯಾಂಗ ತನಿಖೆಗೆ ವಹಿಸಬೇಕು. ತಪ್ಪಿದಲ್ಲಿ ಸುಪ್ರಿಂಕೋರ್ಟ್, ಐಟಿ ಇಡಿಗೆ ಒತ್ತಾಯಿಸುತ್ತೇವೆ ಎಂದೂ ಎನ್. ಲಕ್ಷ್ಮಣ್ ಹೇಳಿದ್ದಾರೆ.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm