ಬ್ರೇಕಿಂಗ್ ನ್ಯೂಸ್
26-08-20 06:13 pm Headline Karnataka News Network ಕರ್ನಾಟಕ
ಮೈಸೂರು, ಆಗಸ್ಟ್ 26: ರಾಜ್ಯದಲ್ಲಿ ವಿಜಯೇಂದ್ರ ಸೂಪರ್ ಸಿಎಂ ಥರ ಕಾರ್ಯ ನಿರ್ವಹಿಸುತ್ತಿದ್ದು, ತಮ್ಮದೇ ಆದ 30 ಜನರ ಕೂಟ ರಚಿಸಿಕೊಂಡಿದ್ದಾರೆ. ವಿಪಕ್ಷಗಳ ಕೆಲ ಮುಖಂಡರೂ ಈ ಕೂಟದಲ್ಲಿದ್ದು 1 ಸಾವಿರ ಕೋಟಿ ರೂಪಾಯಿ ಸಂಗ್ರಹಿಸಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಎನ್. ಲಕ್ಷ್ಮಣ್ ಗಂಭೀರ ಆರೋಪ ಮಾಡಿದ್ದಾರೆ.
ಮೈಸೂರಿನಲ್ಲಿಂದು ಸುದ್ದಿ ಗೋಷ್ಠಿ ನಡೆಸಿದ ಅವರು, ಕೆಲ ಬಿಜೆಪಿ ಶಾಸಕರು ಬಿವೈ ವಿಜಯೇಂದ್ರ ವಿರುದ್ಧ ದೂರು ನೀಡಿದ್ದಾರೆ. ಕಳೆದ ಒಂದು ವರ್ಷದಿಂದ ಬಿವೈ ವಿಜಯೇಂದ್ರ ಪರ್ಯಾಯ ಸರ್ಕಾರ ನಡೆಸುತ್ತಿದ್ದಾರೆ. ಶಾಸಕರ ಬೇಡಿಕೆಗಳು ಈಡೇರುತ್ತಿಲ್ಲ. ವಿಪಕ್ಷಗಳ ಕೆಲ ಮುಖಂಡರು ಸೇರಿ 30 ಜನರ ಕೂಟ ಮಾಡಿಕೊಂಡು ಒಂದು ಸಾವಿರ ಕೋಟಿ ಸಂಗ್ರಹ ಮಾಡಿದ್ದಾರೆ. ಈ ಹಣ ದೇಶ ವಿದೇಶಗಳಲ್ಲಿ ಹೂಡಿಕೆಯಾಗಿದೆ ಅಂತಾ ಬಿಜೆಪಿ ಶಾಸಕರೇ ಆರೋಪಿಸಿ ದೂರು ನೀಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎನ್.ಲಕ್ಷ್ಮಣ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೂಡಲೇ ಈ ಬಗ್ಗೆ ತನಿಖೆ ನಡೆಸುವಂತೆ ಕಾಂಗ್ರೆಸ್ ಒತ್ತಾಯಿಸುತ್ತದೆ. ವಿಜಯೇಂದ್ರ ತಮ್ಮದೇ ಆದ 30 ಜನರ ಕೂಟ ರಚಿಸಿಕೊಂಡಿದ್ದಾರೆ. ಒಬ್ಬೊಬ್ಬರಿಗೆ ಒಂದೊಂದು ಇಲಾಖೆ ರಚಿಸಿದ್ದಾರೆ. ಬೆಂಗಳೂರಿನ ಪ್ರಮುಖ ಹೊಟೇಲ್ಗಳಲ್ಲಿ 15 ರೂಂ ಬುಕ್ ಮಾಡಿಕೊಂಡು ತಮ್ಮ ಪರ್ಯಾಯ ಸರ್ಕಾರದ ಕಾರ್ಯಚಟುವಟಿಕೆ ನಡೆಸುತ್ತಿದ್ದಾರೆ ಎಂದು ಬಿಜೆಪಿ ಶಾಸಕರು ಆರು ಪುಟದ ದೂರನ್ನು ಸಲ್ಲಿಸಿದ್ದಾರೆ. ಕೊರೊನಾ ಹಾಗೂ ನೆರೆ ಹಾವಳಿ ನಿಯಂತ್ರಣಕ್ಕೆ ಹಣವಿಲ್ಲ ಎನ್ನುವ ಸಿಎಂ ತಮ್ಮ ಪುತ್ರನ ಬಳಿ ಇರುವ ಈ ಹಣ ಬಳಸಿಕೊಳ್ಳಿ ಎಂದಿದ್ದಾರೆ.
ಸೆಪ್ಟಂಬರ್ ಎರಡು, ಮೂರನೇ ವಾರದಲ್ಲಿ ನವದೆಹಲಿಯಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಿ ವಿಜಯೇಂದ್ರ ಮೇಲಿನ ಆರೋಪಕ್ಕೆ ಪೂರಕವಾದ ಎಲ್ಲಾ ಆಡಿಯೋ ಹಾಗೂ ವಿಡಿಯೋ ದಾಖಲೆ ಬಿಡುಗಡೆ ಮಾಡುತ್ತೇವೆ. ನಯಾಪೈಸೆ ಲೂಟಿಯಾಗಲು ಬಿಡಲ್ಲ ಎನ್ನುವ ಮೋದಿಯವರಿಗೆ ನಿಮ್ಮ ಮೂಗಿನ ಕೆಳಗೆ ತುಪ್ಪ ಇದೆ ಎಂದು ತೋರಿಸಲು ನವದೆಹಲಿಯಲ್ಲಿ ಪ್ರೆಸ್ಮೀಟ್ ಮಾಡಲು ಮುಂದಾಗಿದ್ದೇವೆ ಎಂದಿದ್ದಾರೆ. ಹತ್ತು ದಿನಗಳ ಒಳಗಾಗಿ ಈ ಪ್ರಕರಣವನ್ನ ಸಿಬಿಐ ಇಲ್ಲವೇ ನ್ಯಾಯಾಂಗ ತನಿಖೆಗೆ ವಹಿಸಬೇಕು. ತಪ್ಪಿದಲ್ಲಿ ಸುಪ್ರಿಂಕೋರ್ಟ್, ಐಟಿ ಇಡಿಗೆ ಒತ್ತಾಯಿಸುತ್ತೇವೆ ಎಂದೂ ಎನ್. ಲಕ್ಷ್ಮಣ್ ಹೇಳಿದ್ದಾರೆ.
22-06-26 03:44 pm
HK News Staffer
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
22-06-26 12:53 pm
HK News Staffer
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm