ಬ್ರೇಕಿಂಗ್ ನ್ಯೂಸ್
05-05-21 02:48 pm Headline Karnataka News Network ಕರ್ನಾಟಕ
ಮಂಗಳೂರು, ಮೇ 5 : ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಎದುರಾಗಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಆಸ್ಪತ್ರೆಗಳಿಗೆ ಉಚಿತ ಆಕ್ಸಿಜನ್ ನೀಡಲು ನಿರ್ಧರಿಸಲಾಗಿದೆ.
ಧರ್ಮಸ್ಥಳದ ಗ್ರಾಮೀಣಾಭಿವೃದ್ಧಿ ಯೋಜನೆ ವತಿಯಿಂದ ಆಮ್ಲಜನಕ ಖರೀದಿಸಿ ರಾಜ್ಯದ ವಿವಿಧ ಆಸ್ಪತ್ರೆಗಳಿಗೆ ನೀಡಲು ಆರಂಭಿಸಲಾಗಿದೆ.

ಮೊದಲ ಹಂತದಲ್ಲಿ ಆಮ್ಲಜನಕ ಉತ್ಪಾದನಾ ಸಂಸ್ಥೆಯಾದ ಜಿಂದಾಲ್ ಸ್ಟೀಲ್ ಪ್ಲಾಂಟ್ನ ಅಧಿಕಾರಿಗಳೊಂದಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮಾತುಕತೆ ನಡೆಸಿದ್ದು, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ 5.5 ಟನ್ ಆಮ್ಲಜನಕವನ್ನು ಒದಗಿಸಲಾಗಿದೆ.

ಬಳ್ಳಾರಿಯ ತೋರಣಗಲ್ ಜಿಂದಾಲ್ ಪ್ಲಾಂಟ್ನಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ಆಮ್ಲಜನಕ ಕ್ರಯೋಜನಿಕ್ ಟ್ಯಾಂಕ್ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಬಂದಿದ್ದು, ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಆಸ್ಪತ್ರೆ ಗೆ ಹಸ್ತಾಂತರಿಸಲಾಗಿದೆ. 5.5 ಟನ್ ಆಮ್ಲಜನಕ ವೆನ್ಲಾಕ್ ಆಸ್ಪತ್ರೆಯ ಮೂರು ದಿನಗಳ ಆಮ್ಲಜನಕದ ಬೇಡಿಕೆಯನ್ನು ಪೂರೈಸಲಿದೆ.

ಆಮ್ಲಜನಕ ಖರೀದಿ ಮತ್ತು ಸಾಗಾಟದ ಸಂಪೂರ್ಣ ವೆಚ್ಚವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯೇ ಭರಿಸಲಿದೆ. ಮುಂದಿನ ದಿನಗಳಲ್ಲಿ ರಾಜ್ಯದ ವಿವಿಧ ಆಸ್ಪತ್ರೆಗಳಿಗೆ 100 ಟನ್ ಆಮ್ಲಜನಕ ಒದಗಿಸುವ ಗುರಿಯನ್ನು ಧರ್ಮಸ್ಥಳ ಹೊಂದಿದೆ.
ಅಲ್ಲದೆ ಗ್ರಾಮಾಭಿವೃದ್ಧಿ ಯೋಜನೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ, ಮೈಸೂರು ಮತ್ತು ಧಾರವಾಡದಲ್ಲಿ ಕೋವಿಡ್ ಕೇರ್ ಸೆಂಟರ್ ತೆರಯಲಾಗಿದೆ. 175 ಮಂದಿ ರೋಗಿಗಳು ಈ ಸೆಂಟರ್ ನಲ್ಲಿ ಉಚಿತ ಆಹಾರದ ಜೊತೆಗೆ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಗೆ ಸಾಗಿಸಬೇಕಾದ್ದಲ್ಲಿ ಕ್ಷೇತ್ರದ ವತಿಯಿಂದಲೇ ವಾಹನದ ವ್ಯವಸ್ಥೆ ಮಾಡಲಾಗಿದೆ. ತುರ್ತು ಸಂದರ್ಭದಲ್ಲಿ 800 ಮಂದಿಗೆ ಚಿಕಿತ್ಸೆ ನೀಡಲು ಸಿದ್ಧತೆಗಳನ್ನು ಕೇರ್ ಸೆಂಟರ್ ಗಳಲ್ಲಿ ಮಾಡಲಾಗಿದೆ.
Shortage of oxygen in Karnataka hence free oxygen to be supplied to hospitals in Karnataka by Daramasthala temple.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 10:47 pm
Mangalore Correspondent
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm