ಬ್ರೇಕಿಂಗ್ ನ್ಯೂಸ್
05-05-21 02:48 pm Headline Karnataka News Network ಕರ್ನಾಟಕ
ಮಂಗಳೂರು, ಮೇ 5 : ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಎದುರಾಗಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಆಸ್ಪತ್ರೆಗಳಿಗೆ ಉಚಿತ ಆಕ್ಸಿಜನ್ ನೀಡಲು ನಿರ್ಧರಿಸಲಾಗಿದೆ.
ಧರ್ಮಸ್ಥಳದ ಗ್ರಾಮೀಣಾಭಿವೃದ್ಧಿ ಯೋಜನೆ ವತಿಯಿಂದ ಆಮ್ಲಜನಕ ಖರೀದಿಸಿ ರಾಜ್ಯದ ವಿವಿಧ ಆಸ್ಪತ್ರೆಗಳಿಗೆ ನೀಡಲು ಆರಂಭಿಸಲಾಗಿದೆ.

ಮೊದಲ ಹಂತದಲ್ಲಿ ಆಮ್ಲಜನಕ ಉತ್ಪಾದನಾ ಸಂಸ್ಥೆಯಾದ ಜಿಂದಾಲ್ ಸ್ಟೀಲ್ ಪ್ಲಾಂಟ್ನ ಅಧಿಕಾರಿಗಳೊಂದಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮಾತುಕತೆ ನಡೆಸಿದ್ದು, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ 5.5 ಟನ್ ಆಮ್ಲಜನಕವನ್ನು ಒದಗಿಸಲಾಗಿದೆ.

ಬಳ್ಳಾರಿಯ ತೋರಣಗಲ್ ಜಿಂದಾಲ್ ಪ್ಲಾಂಟ್ನಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ಆಮ್ಲಜನಕ ಕ್ರಯೋಜನಿಕ್ ಟ್ಯಾಂಕ್ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಬಂದಿದ್ದು, ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಆಸ್ಪತ್ರೆ ಗೆ ಹಸ್ತಾಂತರಿಸಲಾಗಿದೆ. 5.5 ಟನ್ ಆಮ್ಲಜನಕ ವೆನ್ಲಾಕ್ ಆಸ್ಪತ್ರೆಯ ಮೂರು ದಿನಗಳ ಆಮ್ಲಜನಕದ ಬೇಡಿಕೆಯನ್ನು ಪೂರೈಸಲಿದೆ.

ಆಮ್ಲಜನಕ ಖರೀದಿ ಮತ್ತು ಸಾಗಾಟದ ಸಂಪೂರ್ಣ ವೆಚ್ಚವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯೇ ಭರಿಸಲಿದೆ. ಮುಂದಿನ ದಿನಗಳಲ್ಲಿ ರಾಜ್ಯದ ವಿವಿಧ ಆಸ್ಪತ್ರೆಗಳಿಗೆ 100 ಟನ್ ಆಮ್ಲಜನಕ ಒದಗಿಸುವ ಗುರಿಯನ್ನು ಧರ್ಮಸ್ಥಳ ಹೊಂದಿದೆ.
ಅಲ್ಲದೆ ಗ್ರಾಮಾಭಿವೃದ್ಧಿ ಯೋಜನೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ, ಮೈಸೂರು ಮತ್ತು ಧಾರವಾಡದಲ್ಲಿ ಕೋವಿಡ್ ಕೇರ್ ಸೆಂಟರ್ ತೆರಯಲಾಗಿದೆ. 175 ಮಂದಿ ರೋಗಿಗಳು ಈ ಸೆಂಟರ್ ನಲ್ಲಿ ಉಚಿತ ಆಹಾರದ ಜೊತೆಗೆ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಗೆ ಸಾಗಿಸಬೇಕಾದ್ದಲ್ಲಿ ಕ್ಷೇತ್ರದ ವತಿಯಿಂದಲೇ ವಾಹನದ ವ್ಯವಸ್ಥೆ ಮಾಡಲಾಗಿದೆ. ತುರ್ತು ಸಂದರ್ಭದಲ್ಲಿ 800 ಮಂದಿಗೆ ಚಿಕಿತ್ಸೆ ನೀಡಲು ಸಿದ್ಧತೆಗಳನ್ನು ಕೇರ್ ಸೆಂಟರ್ ಗಳಲ್ಲಿ ಮಾಡಲಾಗಿದೆ.
Shortage of oxygen in Karnataka hence free oxygen to be supplied to hospitals in Karnataka by Daramasthala temple.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm