ಬ್ರೇಕಿಂಗ್ ನ್ಯೂಸ್
26-08-20 10:42 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 26: ಹಣಕಾಸಿನ ತೊಂದರೆಗೆ ಸಿಲುಕಿ ವೃದ್ಧೆಯ ಹತ್ಯೆಗೈದು 45 ಲಕ್ಷ ನಗದು ಹಾಗೂ ಚಿನ್ನಾಭರಣ ಲೂಟಿ ಮಾಡಿದ್ದ ದಂಪತಿ ಸೇರಿ ಮೂವರು ಆರೋಪಿಗಳನ್ನು ಕಾಡುಗೋಡಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ರಾಯಚೂರು ಜಿಲ್ಲೆಯ ವೀರೇಶ್, ಆತನ ಪತ್ನಿ ಚೈತ್ರಾ ಮತ್ತು ಪ್ರಶಾಂತ್ ಎಂದು ಗುರುತಿಸಲಾಗಿದೆ. ಇದೇ ತಿಂಗಳ ಆ.12ರ ಬೆಳಗ್ಗೆ 10.30ರ ವೇಳೆ ಕಾಡುಗೋಡಿಯ ಚನ್ನಸಂದ್ರದಲ್ಲಿ ಜಯಮ್ಮ(65) ಅವರ ಕೊಲೆ ನಡೆದಿತ್ತು. ಈ ಕೊಲೆಯಿಂದ ಬಡಾವಣೆಯ ಜನರು ತೀವ್ರ ಆತಂಕಕ್ಕೆ ಒಳಗಾಗಿದ್ದರು.
ಆರೋಪಿಗಳು ಕೊಲೆಗೈದು 45 ಲಕ್ಷ ರೂ.ಹಣ, 88 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಕಾಡುಗೋಡಿ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಕೊಲೆ ಮಾಡಿರುವ ಆರೋಪಿ ವೀರೇಶ್ ಮತ್ತು ಚೈತ್ರಾ ದಂಪತಿ ಕಳೆದ ಎರಡು ವರ್ಷಗಳಿಂದ ಅಪ್ಪಯ್ಯಣ್ಣ, ಜಯಮ್ಮ ಅವರ ಮನೆಯಲ್ಲಿ ಬಾಡಿಗೆಗಿದ್ದರು. ವೀರೇಶ್ ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದರೆ ಚೈತ್ರಾ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು. ಲಾಕ್ಡೌನ್ನಿಂದಾಗಿ ಕೆಲಸವಿಲ್ಲದೆ ಬಾಡಿಗೆ ಕಟ್ಟಲಾಗದೇ ಆರ್ಥಿಕ ಸಂಕಷ್ಟದಲ್ಲಿ ಮುಳುಗಿದ್ದು, ದಂಪತಿ ಕಳ್ಳತನ ಮಾಡಲು ನಿರ್ಧರಿಸಿದ್ದರು.
ಅದರಂತೆ ತಮ್ಮದೇ ಗ್ರಾಮದಿಂದ ಪ್ರಶಾಂತ್ ಎಂಬ ಮತ್ತೊಬ್ಬ ಆರೋಪಿಯನ್ನು ಕರೆಸಿಕೊಂಡು ಅಪ್ಪಯ್ಯಣ್ಣ ವಿದ್ಯುತ್ ಬಿಲ್ ಪಾವತಿಸಲು ಹೋರಹೋಗಿದ್ದಾಗ ಜಯಮ್ಮ ಒಬ್ಬಂಟಿಯಾಗಿದ್ದನ್ನು ಗಮನಿಸಿ ಮೂವರು ಮನೆಗೆ ನುಗ್ಗಿ, ಕತ್ತು ಸೀಳಿ ಕೊಲೆ ಮಾಡಿ 45 ಲಕ್ಷ ನಗದು ಹಾಗೂ ಚಿನ್ನಾಭರಣ ಲೂಟಿ ಮಾಡಿ ಪರಾರಿಯಾಗಿದ್ದರು. ಕಾಡುಗೋಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm